ಬಹ್ರೇನ್ ರಾಜನ ಜೊತೆಗೆ ಪ್ರಧಾನಿ ಮೋದಿ ಮಾತುಕತೆಯ ಸಾಂದರ್ಭಿಕ ಚಿತ್ರ 
ದೇಶ

ಬಹ್ರೇನ್‌ ರಾಜನ ಜೊತೆಗೆ ಪ್ರಧಾನಿ ಮೋದಿ ಮಾತುಕತೆ: ಕೊಲ್ಲಿದೇಶಗಳ ಇಂಧನ ಮೂಲಸೌಕರ್ಯದ ಮೇಲಿನ ದಾಳಿಗೆ ಖಂಡನೆ!

ಬಹ್ರೇನ್ ರಾಜನ ಜೊತೆಗೆ ದೂರವಾಣಿ ಮಾತುಕತೆ ಸಂದರ್ಭದಲ್ಲಿ ಮುಕ್ತ ಹಾಗೂ ಸುರಕ್ಷಿತ ಹಡಗು ಮಾರ್ಗಗಳ ಖಾತ್ರಿಯ ಪ್ರಾಮುಖ್ಯತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬಹ್ರೇನ್‌ನ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗೆ ಮಾತನಾಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿನ ಸದ್ಯದ ಪರಿಸ್ಥಿತಿ ಕುರಿತು ಅವರೊಂದಿಗೆ ಚರ್ಚಿಸಿದ್ದು, ಇಂಧನ ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ.

ಬಹ್ರೇನ್ ರಾಜನ ಜೊತೆಗೆ ದೂರವಾಣಿ ಮಾತುಕತೆ ಸಂದರ್ಭದಲ್ಲಿ ಮುಕ್ತ ಹಾಗೂ ಸುರಕ್ಷಿತ ಹಡಗು ಮಾರ್ಗಗಳ ಖಾತ್ರಿಯ ಪ್ರಾಮುಖ್ಯತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, "ಬಹ್ರೇನ್ ರಾಜ, ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗಿನ ಚರ್ಚೆ ಫಲಪ್ರದವಾಗಿದೆ. ಅವರಿಗೆ ಮತ್ತು ಬಹ್ರೇನ್ ಜನರಿಗೆ ಈದ್ ಅಲ್-ಫಿತರ್ ಹಬ್ಬದ ಶುಭಾಶಯ ಕೋರಿದ್ದೇನೆ ಎಂದು ತಿಳಿಸಿದ್ದಾರೆ.

ಪಶ್ಚಿಮ ಏಷ್ಯಾ ಪ್ರದೇಶದ ಪ್ರಸ್ತುತ ಪರಿಸ್ಥಿತಿಯನ್ನು ಚರ್ಚಿಸಿದ್ದೇವೆ. ಈ ಪ್ರದೇಶದಲ್ಲಿನ ಇಂಧನ ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಖಂಡಿಸಿದ್ದೇವೆ. ಜಾಗತಿಕ ಆಹಾರ, ಇಂಧನ ಮತ್ತು ರಸಗೊಬ್ಬರ ಸುರಕ್ಷತೆಯ ಮೇಲೆ ಅವುಗಳ ಪ್ರತಿಕೂಲ ಪರಿಣಾಮ ಕುರಿತು ಪ್ರಮುಖವಾಗಿ ಚರ್ಚಿಸಿರುವುದಾಗಿ ತಿಳಿಸಿದ್ದಾರೆ.

ಬಹ್ರೇನ್‌ನಲ್ಲಿರುವ ಭಾರತೀಯ ಸಮುದಾಯದ ಯೋಗಕ್ಷೇಮಕ್ಕಾಗಿ ರಾಜ, ಹಮದ್ ಬಿನ್ ಇಸಾ ಅಲ್ ಖಲೀಫಾ ಅವರ ನಿರಂತರ ಬೆಂಬಲಕ್ಕಾಗಿ ಧನ್ಯವಾದವನ್ನು ಪ್ರಧಾನಿ ಮೋದಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಪ್ಪಾಗಿರುವುದಕ್ಕೆ BCCI ಅವಕಾಶ ನೀಡ್ತಿಲ್ಲ: ಕಾಮೆಂಟರಿ ಪ್ಯಾನಲ್ ಗೆ ದಿಢೀರ್ ನಿವೃತ್ತಿ ಘೋಷಿಸಿದ ಭಾರತದ ಮಾಜಿ ಕ್ರಿಕೆಟಿಗ!

ಪಶ್ಚಿಮ ಏಷ್ಯಾ ಸಂಘರ್ಷ: ಗಲ್ಫ್‌ನಲ್ಲಿ ಆರು ಭಾರತೀಯರು ಸಾವು, ಒಬ್ಬರು ನಾಪತ್ತೆ; MEA

ಜಗತ್ತಿನಾದ್ಯಂತ ಜನರಲ್ಲಿ ಭೀತಿ ಸೃಷ್ಟಿಸಿದ ಇರಾನ್! ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ವಿಶ್ವದಾದ್ಯಂತ ವಿಸ್ತರಿಸುವ ಸಾಧ್ಯತೆ?

ಯುದ್ಧವನ್ನು ತಕ್ಷಣವೇ ಕೊನೆಗೊಳಿಸಬೇಕು; ಇದು ಇರಾನ್ ವಿರುದ್ಧ ಅಮೆರಿಕ, ಇಸ್ರೇಲ್‌ನ ಅಪ್ರಚೋದಿತ ಆಕ್ರಮಣ: ರಷ್ಯಾ

ಕೇರಳ ಚುನಾವಣೆ: ಕೇವಲ 9 ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್; ಶಮಾ ಮೊಹಮ್ಮದ್ ಕಿಡಿ

SCROLL FOR NEXT