ಲಾಲ್ಜಿತ್ ಸಿಂಗ್ ಭುಲ್ಲರ್  
ದೇಶ

ಪಂಜಾಬ್ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ರಾಜೀನಾಮೆ

ಮೂಲಗಳ ಪ್ರಕಾರ, ತಮ್ಮ ರಾಜಕೀಯ ಆಪ್ತರಿಗೆ ಗೋದಾಮು ಟೆಂಡರ್ ನೀಡುವಂತೆ ಭುಲ್ಲರ್ ಅವರು ರಾಂಧವಾ ಅವರ ಮೇಲೆ ಒತ್ತಡ ಹೇರಿದ್ದರು ಎಂದು ಆರೋಪಿಸಲಾಗಿದೆ.

ಚಂಡೀಗಢ: ಪಂಜಾಬ್ ರಾಜ್ಯ ಗೋದಾಮು ನಿಗಮದ(ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್ ರಾಂಧವಾ ಅವರ ಆತ್ಮಹತ್ಯೆ ಪ್ರಕರಣದ ವಿವಾದದ ನಡುವೆಯೇ ಪಂಜಾಬ್ ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ಅವರು ಶನಿವಾರ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.

ಮೂಲಗಳ ಪ್ರಕಾರ, ತಮ್ಮ ರಾಜಕೀಯ ಆಪ್ತರಿಗೆ ಗೋದಾಮು ಟೆಂಡರ್ ನೀಡುವಂತೆ ಭುಲ್ಲರ್ ಅವರು ರಾಂಧವಾ ಅವರ ಮೇಲೆ ಒತ್ತಡ ಹೇರಿದ್ದರು ಎಂದು ಆರೋಪಿಸಲಾಗಿದೆ.

ಅಧಿಕಾರಿ ಸಚಿವರು ಹೇಳಿದವರಿಗೆ ಟೆಂಡರ್ ನಿರಾಕರಿಸಿದಾಗ, ಅವರನ್ನು ಸಚಿವರ ನಿವಾಸಕ್ಕೆ ಕರೆಸಿ, ಹಲ್ಲೆ ನಡೆಸಿ, ಬಳಿಕ ಬ್ಲ್ಯಾಕ್‌ಮೇಲ್ ಮಾಡಲು 10 ಲಕ್ಷ ರೂ. ಲಂಚ ಸ್ವೀಕರಿಸಿದ್ದಾಗಿ ಕ್ಯಾಮೆರಾದಲ್ಲಿ "ತಪ್ಪೊಪ್ಪಿಕೊಳ್ಳುವಂತೆ" ಒತ್ತಾಯಿಸಲಾಯಿತು ಎಂದು ಆರೋಪಿಸಲಾಗಿದೆ.

ಗುರುವಾರ ಸಂಜೆ ವಿಷ ಸೇವಿಸಿ ರಾಂಧವಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಸ್ವಲ್ಪ ಮೊದಲು ಒಂದು ವಿಡಿಯೋ ಕಾಣಿಸಿಕೊಂಡಿದ್ದು, ಅದರಲ್ಲಿ ಅವರು, "ನಿಮ್ಮ ಸ್ನೇಹಿತ, ಸಚಿವ ಲಾಲ್ಜಿತ್ ಭುಲ್ಲರ್ ಅವರ ಭಯದಿಂದ ವಿಷ ಸೇವಿಸಿದ್ದಾರೆ, ನಾನು ಈಗ ಬದುಕುಳಿಯುವುದಿಲ್ಲ" ಎಂದು ಹೇಳಿದ್ದಾರೆ.

ಘಟನೆಯ ನಂತರ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರು ಭುಲ್ಲರ್ ಅವರ ರಾಜೀನಾಮೆ ಕೇಳಿದ್ದು, ಆರೋಪದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ಅಧಿಕಾರಿಯ ಸಾವಿಗೆ ಕಾರಣವಾದ ಸಂದರ್ಭಗಳ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ಪಂಜಾಬ್ ಮುಖ್ಯ ಕಾರ್ಯದರ್ಶಿ ಕೆಎಪಿ ಸಿನ್ಹಾ ಅವರಿಗೆ ಸಿಎಂ ಸೂಚಿಸಿದ್ದಾರೆ.

"ನಾನು ತಕ್ಷಣ ಸಚಿವರ ರಾಜೀನಾಮೆ ಕೇಳಿದ್ದೇನೆ ಮತ್ತು ಅವರ ಇಲಾಖೆಯ ಜವಾಬ್ದಾರಿಯನ್ನು ಬೇರೆ ಸಚಿವರಿಗೆ ನೀಡುತ್ತೇವೆ. ಆತ್ಮಹತ್ಯೆಯ ತನಿಖೆಯಲ್ಲಿ ರಾಜಿಯಾಗದಂತೆ ನೋಡಿಕೊಳ್ಳಲು, ನಾವು ರಾಜೀನಾಮೆಯನ್ನು ತೆಗೆದುಕೊಂಡಿದ್ದೇವೆ. ಈ ಕಷ್ಟದ ಸಮಯದಲ್ಲಿ ನಾವು ಕುಟುಂಬದೊಂದಿಗೆ ನಿಲ್ಲುತ್ತೇವೆ" ಎಂದು ಮಾನ್ ಹೇಳಿದ್ದಾರೆ.

ರಾಜೀನಾಮೆ ಸಲ್ಲಿಸಿದ ನಂತರ ತಮ್ಮ ವಿರುದ್ಧದ ಆರೋಪಗಳನ್ನು ಆಧಾರರಹಿತ ಮತ್ತು ಸುಳ್ಳು ಎಂದಿರುವ ಭುಲ್ಲರ್, ನ್ಯಾಯಯುತ ತನಿಖೆಗೆ ಸಹಕರಿಸಲು ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ- ಸ್ವಾತಂತ್ರ್ಯ ದಿನದ ಹಿನ್ನೆಲೆ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಮಾತು

ಬೆಂಗಳೂರು: ಟೆಕ್ಕಿ ಪತ್ನಿ ಹತ್ಯೆಗೈದು ತಾನೂ ನೇಣಿಗೆ ಶರಣಾದ ಇಂಜಿನಿಯರ್; ತಾಯಿಗೆ ಕಳಿಸಿದ್ದ ವಾಯ್ಸ್ ಮೆಸೇಜ್‌ನಲ್ಲಿ ಸ್ಫೋಟಕ ಕಾರಣ ಬಹಿರಂಗ!

ರಾಜ್ಯ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್: ವೇತನ ಹಿಂಬಾಕಿ ಬಿಡುಗಡೆ

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ

ಸರ್ಕಾರಿ ಜಾಗದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ಮಸೂದೆ: RSSಗೆ ಕಡಿವಾಣ? ಕಾಂಗ್ರೆಸ್ - ಬಿಜೆಪಿ ನಡುವೆ ವಾಕ್ಸಮರ!