ಲಾಲ್ಜಿತ್ ಸಿಂಗ್ ಭುಲ್ಲರ್  
ದೇಶ

ಪಂಜಾಬ್ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ರಾಜೀನಾಮೆ

ಮೂಲಗಳ ಪ್ರಕಾರ, ತಮ್ಮ ರಾಜಕೀಯ ಆಪ್ತರಿಗೆ ಗೋದಾಮು ಟೆಂಡರ್ ನೀಡುವಂತೆ ಭುಲ್ಲರ್ ಅವರು ರಾಂಧವಾ ಅವರ ಮೇಲೆ ಒತ್ತಡ ಹೇರಿದ್ದರು ಎಂದು ಆರೋಪಿಸಲಾಗಿದೆ.

ಚಂಡೀಗಢ: ಪಂಜಾಬ್ ರಾಜ್ಯ ಗೋದಾಮು ನಿಗಮದ(ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್ ರಾಂಧವಾ ಅವರ ಆತ್ಮಹತ್ಯೆ ಪ್ರಕರಣದ ವಿವಾದದ ನಡುವೆಯೇ ಪಂಜಾಬ್ ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ಅವರು ಶನಿವಾರ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.

ಮೂಲಗಳ ಪ್ರಕಾರ, ತಮ್ಮ ರಾಜಕೀಯ ಆಪ್ತರಿಗೆ ಗೋದಾಮು ಟೆಂಡರ್ ನೀಡುವಂತೆ ಭುಲ್ಲರ್ ಅವರು ರಾಂಧವಾ ಅವರ ಮೇಲೆ ಒತ್ತಡ ಹೇರಿದ್ದರು ಎಂದು ಆರೋಪಿಸಲಾಗಿದೆ.

ಅಧಿಕಾರಿ ಸಚಿವರು ಹೇಳಿದವರಿಗೆ ಟೆಂಡರ್ ನಿರಾಕರಿಸಿದಾಗ, ಅವರನ್ನು ಸಚಿವರ ನಿವಾಸಕ್ಕೆ ಕರೆಸಿ, ಹಲ್ಲೆ ನಡೆಸಿ, ಬಳಿಕ ಬ್ಲ್ಯಾಕ್‌ಮೇಲ್ ಮಾಡಲು 10 ಲಕ್ಷ ರೂ. ಲಂಚ ಸ್ವೀಕರಿಸಿದ್ದಾಗಿ ಕ್ಯಾಮೆರಾದಲ್ಲಿ "ತಪ್ಪೊಪ್ಪಿಕೊಳ್ಳುವಂತೆ" ಒತ್ತಾಯಿಸಲಾಯಿತು ಎಂದು ಆರೋಪಿಸಲಾಗಿದೆ.

ಗುರುವಾರ ಸಂಜೆ ವಿಷ ಸೇವಿಸಿ ರಾಂಧವಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಸ್ವಲ್ಪ ಮೊದಲು ಒಂದು ವಿಡಿಯೋ ಕಾಣಿಸಿಕೊಂಡಿದ್ದು, ಅದರಲ್ಲಿ ಅವರು, "ನಿಮ್ಮ ಸ್ನೇಹಿತ, ಸಚಿವ ಲಾಲ್ಜಿತ್ ಭುಲ್ಲರ್ ಅವರ ಭಯದಿಂದ ವಿಷ ಸೇವಿಸಿದ್ದಾರೆ, ನಾನು ಈಗ ಬದುಕುಳಿಯುವುದಿಲ್ಲ" ಎಂದು ಹೇಳಿದ್ದಾರೆ.

ಘಟನೆಯ ನಂತರ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರು ಭುಲ್ಲರ್ ಅವರ ರಾಜೀನಾಮೆ ಕೇಳಿದ್ದು, ಆರೋಪದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ಅಧಿಕಾರಿಯ ಸಾವಿಗೆ ಕಾರಣವಾದ ಸಂದರ್ಭಗಳ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ಪಂಜಾಬ್ ಮುಖ್ಯ ಕಾರ್ಯದರ್ಶಿ ಕೆಎಪಿ ಸಿನ್ಹಾ ಅವರಿಗೆ ಸಿಎಂ ಸೂಚಿಸಿದ್ದಾರೆ.

"ನಾನು ತಕ್ಷಣ ಸಚಿವರ ರಾಜೀನಾಮೆ ಕೇಳಿದ್ದೇನೆ ಮತ್ತು ಅವರ ಇಲಾಖೆಯ ಜವಾಬ್ದಾರಿಯನ್ನು ಬೇರೆ ಸಚಿವರಿಗೆ ನೀಡುತ್ತೇವೆ. ಆತ್ಮಹತ್ಯೆಯ ತನಿಖೆಯಲ್ಲಿ ರಾಜಿಯಾಗದಂತೆ ನೋಡಿಕೊಳ್ಳಲು, ನಾವು ರಾಜೀನಾಮೆಯನ್ನು ತೆಗೆದುಕೊಂಡಿದ್ದೇವೆ. ಈ ಕಷ್ಟದ ಸಮಯದಲ್ಲಿ ನಾವು ಕುಟುಂಬದೊಂದಿಗೆ ನಿಲ್ಲುತ್ತೇವೆ" ಎಂದು ಮಾನ್ ಹೇಳಿದ್ದಾರೆ.

ರಾಜೀನಾಮೆ ಸಲ್ಲಿಸಿದ ನಂತರ ತಮ್ಮ ವಿರುದ್ಧದ ಆರೋಪಗಳನ್ನು ಆಧಾರರಹಿತ ಮತ್ತು ಸುಳ್ಳು ಎಂದಿರುವ ಭುಲ್ಲರ್, ನ್ಯಾಯಯುತ ತನಿಖೆಗೆ ಸಹಕರಿಸಲು ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಗುಡ್​​ ನ್ಯೂಸ್: ವಾಣಿಜ್ಯ ಬಳಕೆ LPG ಹಂಚಿಕೆ ಶೇ. 50ಕ್ಕೆ ಹೆಚ್ಚಿಸಿದ ಕೇಂದ್ರ

Pakistan: ಮುರಿಡ್ಕೆಯಲ್ಲಿ ರಕ್ತಪಾತ; ನಮಾಜ್ ಮುಗಿಸಿ ಹೊರಬಂದ LeT ಕಮಾಂಡರ್ ಸಲಾಫಿಗೆ ಗುಂಡಿಕ್ಕಿದ 'ಧುರಂಧರ್'; Video!

ಉಪ ಚುನಾವಣೆ: ಕಾಂಗ್ರೆಸ್ ಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು, ನಾಳೆಯೊಳಗೆ ಹೆಸರು ಅಂತಿಮ- ಸುರ್ಜೇವಾಲಾ

ಜಗನ್ ಮೋಹನ್ ರೆಡ್ಡಿ ಕುಟುಂಬದಲ್ಲಿ ಆಸ್ತಿ ಕಲಹ ಮತ್ತಷ್ಟು ತೀವ್ರ: ಮಗಳ ಬೆಂಬಲಕ್ಕೆ ನಿಂತ ವಿಜಯಮ್ಮ!

ಹೈದರಾಬಾದ್‌: ಬೆಕ್ಕು ಸಾಕಲು ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ವೈದ್ಯೆ 'ಆತ್ಮಹತ್ಯೆ'

SCROLL FOR NEXT