ಯೋಗಿ ಆದಿತ್ಯನಾಥ್-ಮೋಹನ್ ಭಾಗವತ್ 
ದೇಶ

2027 ಚುನಾವಣೆ: ವಿವಾದಾತ್ಮಕ ಹೇಳಿಕೆ ನೀಡದಂತೆ ಉತ್ತರಪ್ರದೇಶ BJP ನಾಯಕರಿಗೆ RSS ಸಲಹೆ!

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಸಚಿವರು ಮತ್ತು ಪಕ್ಷದ ಶಾಸಕರು ತಮ್ಮ ಕಾರ್ಯಶೈಲಿಯನ್ನು ಸುಧಾರಿಸಿಕೊಳ್ಳುವಂತೆ ಮತ್ತು ವಿವಾದಾತ್ಮಕ ಹೇಳಿಕೆಗಳನ್ನು ನೀಡದಂತೆ RSS ಸಲಹೆ ನೀಡಿದೆ.

ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಸಚಿವರು ಮತ್ತು ಪಕ್ಷದ ಶಾಸಕರು ತಮ್ಮ ಕಾರ್ಯಶೈಲಿಯನ್ನು ಸುಧಾರಿಸಿಕೊಳ್ಳುವಂತೆ ಮತ್ತು ವಿವಾದಾತ್ಮಕ ಹೇಳಿಕೆಗಳನ್ನು ನೀಡದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸಲಹೆ ನೀಡಿದೆ. ಉನ್ನತ ಸ್ಥಾನದಲ್ಲಿರುವ ಮೂಲಗಳ ಪ್ರಕಾರ, ಇಂದು ಮುಖ್ಯಮಂತ್ರಿ ಯೋಗಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ಸಲಹೆಯನ್ನು ನೀಡಲಾಗಿದೆ.

2027ರ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ಕಾರ್ಯಕರ್ತರಲ್ಲಿ ಉಂಟಾಗಿರುವ ಅಸಮಾಧಾನವನ್ನು ಪರಿಹರಿಸುವತ್ತ ಆರ್‌ಎಸ್‌ಎಸ್ ಗಮನ ಹರಿಸಿದೆ. ಕಳೆದ ಎರಡು ತಿಂಗಳುಗಳಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಪ್ರವಾಸದ ಸಂದರ್ಭದಲ್ಲಿ ಪ್ರಾಂತ್ಯವಾರು ಸರಣಿ ಸಭೆಗಳನ್ನು ನಡೆಸಿದ್ದರು. ಇನ್ನು ಮುಖ್ಯಮಂತ್ರಿಗಳು ಸಹ ರಾಜ್ಯಾದ್ಯಂತ ಸಂಘದೊಂದಿಗೆ ಸಮನ್ವಯ ಸಭೆಗಳನ್ನು ಸಹ ನಡೆಸಿದ್ದಾರೆ.

ಸಭೆಯಲ್ಲಿ ಅವಧ್, ಕಾಶಿ, ಬ್ರಜ್, ಕಾನ್ಪುರ, ಗೋರಕ್ಷ ಮತ್ತು ಪಶ್ಚಿಮ ಪ್ರಾಂತ್ಯಗಳ ಬಿಜೆಪಿ ಪದಾಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಕೆಲವು ಸಚಿವರು ಮತ್ತು ಶಾಸಕರ ನಡುವಿನ ಸಮನ್ವಯದ ಕೊರತೆಯಿಂದ ಸಂಘಟನಾ ಕೆಲಸದ ಮೇಲೆ ಪರಿಣಾಮ ಬೀರುತ್ತಿದೆ ಎಂಬುದನ್ನು ಚರ್ಚಿಸಲಾಯಿತು. ವಿವಾದಾತ್ಮಕ ಹೇಳಿಕೆಗಳು ಸರ್ಕಾರದೊಳಗೆ ಸಂಘರ್ಷ ಅಥವಾ ಸರ್ಕಾರ ಮತ್ತು ಸಂಘಟನೆಯ ನಡುವಿನ ಭಿನ್ನಾಭಿಪ್ರಾಯಗಳನ್ನು ಹೆಚ್ಚಿಸಬಹುದು.

ಚುನಾವಣೆಗೆ ಮುಂಚಿತವಾಗಿ ಆರ್‌ಎಸ್‌ಎಸ್, ರಾಜ್ಯ ಸರ್ಕಾರ ಮತ್ತು ಬಿಜೆಪಿ ನಡುವೆ ಒಗ್ಗಟ್ಟನ್ನು ಕಾಪಾಡಿಕೊಳ್ಳುವ ಬಗ್ಗೆ ಸಭೆಯಲ್ಲಿ ಒಪ್ಪಂದ ಮಾಡಿಕೊಳ್ಳಲಾಯಿತು. ಲವ್ ಜಿಹಾದ್, ಅಕ್ರಮ ಮತಾಂತರ ಮತ್ತು ನೇಪಾಳದ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಜಾಗರೂಕತೆಯನ್ನು ಕಾಯ್ದುಕೊಳ್ಳುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಜಾತಿಯ ಬದಲು ರಾಷ್ಟ್ರೀಯತೆಯ ಮೇಲೆ ಕೇಂದ್ರೀಕರಿಸುವ ಅಗತ್ಯವನ್ನು ಆರ್‌ಎಸ್‌ಎಸ್ ಒತ್ತಿ ಹೇಳಿದೆ. ಸಚಿವರು ಮತ್ತು ಶಾಸಕರು ಜಾತಿ ಸಂಬಂಧಿತ ವಿಷಯಗಳ ಬಗ್ಗೆ ಮಾತನಾಡುವುದನ್ನು ತಪ್ಪಿಸಿ ರಾಷ್ಟ್ರೀಯತೆಯ ಮೇಲೆ ಕೇಂದ್ರೀಕರಿಸಬೇಕು ಎಂದು ಸಹ ಸೂಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಗ್ರಾಹಕರಿಗೆ ಶಾಕ್: ಪೆಟ್ರೋಲ್, ಡೀಸೆಲ್ ದರ ಏರಿಕೆ

ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಧನ ಸಮಾವೇಶ: ಗಿನ್ನೆಸ್ ದಾಖಲೆಗೆ ತುಮಕೂರು ಸಜ್ಜು!

IPL 2026: ಸನ್ ರೈಸರ್ಸ್ ವಿರುದ್ಧ ಗೆದ್ದ ಬಳಿಕ 'ವಿಸಿಲ್ ಪೋಡು' ಮೂಲಕ CSK ಅಭಿಮಾನಿಗಳನ್ನು ಕೆಣಕಿದ ಇಶಾನ್ ಕಿಶನ್! Video

Gautam Adaniಗೆ ಬಿಗ್ ರಿಲೀಫ್: ಎಲ್ಲ ಪ್ರಕರಣಗಳ ವಿಚಾರಣೆ ಶಾಶ್ವತವಾಗಿ ಕೈ ಬಿಟ್ಟ ಅಮೆರಿಕ: ವರದಿ

ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ: ಒಡಿಶಾ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

SCROLL FOR NEXT