ಪಿಣರಾಯಿ ವಿಜಯನ್  
ದೇಶ

ಕೇರಳದಲ್ಲಿ ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಲಾಭವಾಗುವ ಸಾಧ್ಯತೆ ಕಡಿಮೆ: ಸಿಎಂ ಪಿಣರಾಯಿ ವಿಜಯನ್

ಬಿಜೆಪಿ ತಿರುವನಂತಪುರ ಮಹಾನಗರ ಪಾಲಿಕೆಯನ್ನು ಗೆದ್ದಿದೆ ಎಂದರೆ, ಕೇರಳದ ಸಂಪೂರ್ಣ ಜನಸಂಖ್ಯೆ ಆ ಪಕ್ಷವನ್ನು ಒಪ್ಪಿಕೊಂಡಿದೆ ಎಂದು ಅರ್ಥವಲ್ಲ ಎಂದು ಹೇಳಿದರು.

ಕೇರಳ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ (BJP)ಯ ಪ್ರಭಾವ ಹೆಚ್ಚುತ್ತಿದೆ ಎಂಬ ಮಾತನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಳ್ಳಿಹಾಕಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಸ್ಥಾನಗಳನ್ನು ಗೆಲ್ಲುವುದು ಅಸಾಧ್ಯವೆಂದು ಹೇಳಿದ್ದಾರೆ.

ANI ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಕೇರಳದಲ್ಲಿ ಬಿಜೆಪಿಯ ಪ್ರಭಾವವನ್ನು ಹೆಚ್ಚಿಸಲು ಕೆಲವು ಗುಂಪುಗಳು ಸಕ್ರಿಯವಾಗಿ ಕೆಲಸ ಮಾಡುತ್ತಿವೆ ಎಂದರು. ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಿರುವನಂತಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಗೆಲುವನ್ನೂ ಅವರು ಉಲ್ಲೇಖಿಸಿದರು. ಆದರೆ ಇದನ್ನು ಕೇರಳದ ಜನತೆ ಸಂಪೂರ್ಣವಾಗಿ ಬಿಜೆಪಿಯನ್ನು ಒಪ್ಪಿಕೊಂಡಿದ್ದಾರೆ ಎಂದು ಅರ್ಥೈಸಬಾರದು ಎಂದರು.

ಬಿಜೆಪಿ ತಿರುವನಂತಪುರ ಮಹಾನಗರ ಪಾಲಿಕೆಯನ್ನು ಗೆದ್ದಿದೆ ಎಂದರೆ, ಕೇರಳದ ಸಂಪೂರ್ಣ ಜನಸಂಖ್ಯೆ ಆ ಪಕ್ಷವನ್ನು ಒಪ್ಪಿಕೊಂಡಿದೆ ಎಂದು ಅರ್ಥವಲ್ಲ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಪ್ರಭಾವವನ್ನೂ ತಳ್ಳಿಹಾಕಿದರು.

ರಾಹುಲ್ ಗಾಂಧಿ ಮತ್ತು ಇತರ ರಾಷ್ಟ್ರೀಯ ನಾಯಕರ ಉಪಸ್ಥಿತಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಕೇರಳದಲ್ಲಿ ಲಾಭವಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಹುಲ್ ಗಾಂಧಿ ಮತ್ತು ಇತರ ನಾಯಕರು ಕೆಲಸ ಮಾಡುತ್ತಿರುವ ಸ್ಥಳಗಳಲ್ಲಿ ಕಾಂಗ್ರೆಸ್ ಯಾವ ಬೆಳವಣಿಗೆಯನ್ನು ಸಾಧಿಸಿದೆ? ಅಲ್ಲಿ ಯಾವುದೇ ಪ್ರಮುಖ ಬೆಳವಣಿಗೆ ಕಾಣಿಸುತ್ತಿಲ್ಲ. ಅವರ ಆಗಮನದಿಂದ ಕೇರಳದಲ್ಲಿ ಯಾವುದೇ ವಿಶೇಷ ಬದಲಾವಣೆ ಉಂಟಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

ವೈಯಕ್ತಿಕ ಮಹತ್ವಾಕಾಂಕ್ಷೆಯಿಂದ ಕೆಲ ನಾಯಕರು ಸಿಪಿಐಎಂ ವಿರುದ್ಧ ತಿರುಗಿಬಿದ್ದಿದ್ದು, ಅಪರೂಪದ ಹಾಗೂ ಗಂಭೀರ ವಿಚಾರ ಎಂದು ಹೇಳಿದರು. ಈ ಬಂಡಾಯ ಅಭ್ಯರ್ಥಿಗಳು ಎಡಪಂಥೀಯ ಜನತಾಂತ್ರಿಕ ಮೈತ್ರಿ (LDF) ಗೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.

ವಿಜಯನ್ ಅವರು ಬಂಡಾಯಗಾರರನ್ನು ದ್ರೋಹಿಗಳು ಎಂದು ಕರೆದಿದ್ದು, ಅವರು ವಿರೋಧಿಗಳ ಕೈಯಲ್ಲಿ ಸಾಧನಗಳಾಗಿ ಕೆಲಸ ಮಾಡುತ್ತಿದ್ದಾರೆ. ಪಕ್ಷದ ಕಾರ್ಯಕರ್ತರು ಅವರೊಂದಿಗೆ ಸಹಕರಿಸಬಾರದು ಎಂದೂ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ತಾರಕಕ್ಕೇರಿದ ಅಮೆರಿಕಾ-ಇರಾನ್ ಸಂಘರ್ಷ; ಟ್ರಂಪ್ ಬೆದರಿಕೆಗೆ ಮಣಿಯದ ಟೆಹ್ರಾನ್, ವಿದ್ಯುತ್ ಸ್ಥಾವರ ನಾಶಪಡಿಸಿದರೆ ಭೀಕರ ಪ್ರತಿದಾಳಿ ಎಚ್ಚರಿಕೆ

West Asia war: ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ; 48 ಗಂಟೆಗಳಲ್ಲಿ 'ಹಾರ್ಮುಜ್ ಜಲಸಂಧಿ' ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ನಾಶ; ಇರಾನ್'ಗೆ ಟ್ರಂಪ್ ಕಠಿಣ ಎಚ್ಚರಿಕೆ

ಕರ್ನಾಟಕ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಧಿಕೃತ ಘೋಷಣೆ, ನಾಳೆ ನಾಮಪತ್ರ ಸಲ್ಲಿಕೆ

ಉಡುಪಿ: 'ಸಮಾಧಾನ ಮಹೋತ್ಸವ' ವಿರೋಧಿಸಿ ಪ್ರತಿಭಟನೆ; ಹಿಂದು ಜಾಗರಣಾ ವೇದಿಕೆಯ ಮುಖಂಡರು, ಕಾರ್ಯಕರ್ತರು ಸೇರಿ 38 ಮಂದಿ ವಶಕ್ಕೆ

ಚಿತ್ರದುರ್ಗದಲ್ಲಿ ಭೀಕರ ಆ್ಯಸಿಡ್ ದಾಳಿ: ಮಹಿಳೆ, ಮಕ್ಕಳು ಸೇರಿ ಐವರಿಗೆ ಗಂಭೀರ ಗಾಯ, ಆರೋಪಿಗಾಗಿ ಪೊಲೀಸರ ಶೋಧ

SCROLL FOR NEXT