ಎಸ್ ಜೈಶಂಕರ್ 
ದೇಶ

ಪಾಕಿಸ್ತಾನದಂತೆ ಭಾರತ 'ಬ್ರೋಕರ್ ದೇಶವಲ್ಲ': ಸರ್ವ ಪಕ್ಷ ಸಭೆಯಲ್ಲಿ ಜೈಶಂಕರ್ ಲೇವಡಿ!

ಇಂದು ದೆಹಲಿಯಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಮಾತನಾಡಿದ ವಿದೇಶಾಂಗ ಸಚಿವ ಎಸ್ ಜೈಶಂಕರ್, ಪಾಕಿಸ್ತಾನವನ್ನು ಬ್ರೂಕರ್ ರಾಷ್ಟ್ರ ಎಂದು ಲೇವಡಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಮಧ್ಯಪ್ರಾಚ್ಯ ಯುದ್ಧದಲ್ಲಿ ಮಧ್ಯಸ್ಥಿಕೆ ವಹಿಸುವ ಪಾಕಿಸ್ತಾನದ ಪ್ರಯತ್ನವನ್ನು ಭಾರತ ಲೇವಡಿ ಮಾಡಿದೆ. ಜಾಗತಿಕ ರಾಜತಾಂತ್ರಿಕತೆಯಲ್ಲಿ ಪ್ರಮುಖ ಪಾತ್ರವನ್ನು ಬಯಸುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಪದ ಬಳಸಿ ವಾಗ್ದಾಳಿ ನಡೆಸಿದೆ.

ಇಂದು ದೆಹಲಿಯಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಮಾತನಾಡಿದ ವಿದೇಶಾಂಗ ಸಚಿವ ಎಸ್ ಜೈಶಂಕರ್, ಪಾಕಿಸ್ತಾನವನ್ನು ಬ್ರೂಕರ್ ರಾಷ್ಟ್ರ ಎಂದು ಲೇವಡಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಾರತ ಪಾಕಿಸ್ತಾನದಂತೆ ಮಧ್ಯವರ್ತಿ ರಾಷ್ಟ್ರವಾಗಿ ಕಾರ್ಯನಿರ್ವಹಿಸುವುದಿಲ್ಲ ಎಂದು ಸಚಿವರು ಹೇಳಿರುವುದಾಗಿ ಸಭೆಯಲ್ಲಿದ್ದ ಸದಸ್ಯರೊಬ್ಬರು ತಿಳಿಸಿದ್ದಾರೆ.

ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಲು ಮುಂದಾಗಿದೆ. ಪಾಕಿಸ್ತಾನದ ಶೆಹಬಾಜ್ ಷರೀಫ್ ಅವರ ನಿರ್ಧಾರವನ್ನು ಸುಗಮಗೊಳಿಸಲು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉತ್ಸುಕತೆಯನ್ನು ವ್ಯಕ್ತಪಡಿಸಿದ ಪೋಸ್ಟ್ ಹಂಚಿಕೊಂಡ ನಂತರ ರಾಜತಾಂತ್ರಿಕತೆಯ ಊಹಾಪೋಹಗಳು ತೀವ್ರಗೊಂಡಿವೆ.

ಮಧ್ಯಪ್ರಾಚ್ಯ ಬಿಕ್ಕಟ್ಟನ್ನು ನಿಭಾಯಿಸುವುದನ್ನು ಸರ್ಕಾರ ಸಮರ್ಥಿಸಿಕೊಂಡಿದೆ. ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಂವಹನದ ಮೂಲಕ ಭಾರತವು ತೊಡಗಿಸಿಕೊಂಡಿದೆ. ಇರಾನ್‌ನಿಂದ ಇಲ್ಲಿಯವರೆಗೆ 4,25,000 ಭಾರತೀಯರನ್ನು ಮರಳಿ ಕರೆತರಲಾಗಿದೆ. ಇರಾನ್‌ನಲ್ಲಿ ಉಳಿದಿರುವ ಭಾರತೀಯರನ್ನು ರಕ್ಷಿಸಲು ಪ್ರಯತ್ನಗಳು ನಡೆಯುತ್ತಿವೆ ಸಭೆಯಲ್ಲಿದ್ದ ಸದಸ್ಯರಿಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇಂಧನ ಭದ್ರತೆಯ ಬಗ್ಗೆ ಚಿಂತಿಸಬೇಕಾಗಿಲ್ಲ ಎಂಬ ಭರವಸೆಯನ್ನು ನೀಡಲಾಗಿದೆ. ಭಾರತದ ಕಚ್ಚಾ ಆಮದುಗಳ ಗಮನಾರ್ಹ ಭಾಗವು ರಷ್ಯಾದಿಂದ ಬಂದಿದೆ. ಯುಎಸ್ ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರನಾಗಿ ಉಳಿದಿದ್ದು, ಇಸ್ರೇಲ್ ಕಾರ್ಯತಂತ್ರದ ಪ್ರಮುಖ ಪಾಲುದಾರನಾಗಿ ಇರುವುದಾಗಿ ಸಭೆಯಲ್ಲಿ ತಿಳಿಸಲಾಗಿದೆ.

ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವುದರೊಂದಿಗೆ ಇರಾನ್‌ನೊಂದಿಗೆ ನಿರಂತರ ಸಂಪರ್ಕದೊಂದಿಗೆ ಮಧ್ಯಪ್ರಾಚ್ಯದಾದ್ಯಂತ ಭಾರತ ಸಮತೋಲಿತ ಸಂಬಂಧಗಳನ್ನು ನಿರ್ವಹಿಸುತ್ತದೆ ಎಂದು ಹೇಳಲಾಗಿದೆ. ಬಳಿಕ ಮಾತನಾಡಿದ ಕಿರಣ್ ರಿಜಿಜು, ಸರ್ವಪಕ್ಷ ಸಭೆಯಲ್ಲಿ ಕೇಳಿ ಬಂದ ಎಲ್ಲ ಪ್ರಶ್ನೆಗಳಿಗೂ ಸರ್ಕಾರ ಉತ್ತರ ನೀಡಿದ್ದು, ಎಲ್ಲರೂ ಒಗ್ಗಟ್ಟಾಗಿ ನಿಲ್ಲುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

101 ಕ್ಷಿಪಣಿ ದಾಳಿ ಬೆನ್ನಲ್ಲೇ USS ಅಬ್ರಹಾಂ ಲಿಂಕನ್ ಪಲಾಯನ; ನಮ್ಮ ವ್ಯಾಪ್ತಿಯೊಳಗೆ ಬಂದರೆ, ನಾಶ ಮಾಡ್ತೀವೀ: ಇರಾನ್ ಎಚ್ಚರಿಕೆ!

ಕೇಂದ್ರ ಸರ್ಕಾರವೇ ಸಾಲ ಮಾಡುತ್ತೆ; ಆರ್ಥಿಕ ಶಿಸ್ತು, ಜನರ ಕಲ್ಯಾಣ, ಅಭಿವೃದ್ಧಿಯತ್ತ ಗಮನ ಹರಿಸಿದೆ: ಬಜೆಟ್ ಕುರಿತು ಸಿಎಂ ಸಿದ್ದರಾಮಯ್ಯ

ಅರ್ಜುನ್ ತೆಂಡೊಲ್ಕರ್ ಬಗ್ಗೆ ಹೇಳೋದಕ್ಕೆ ನೀನು ಯಾರು? ಆರ್. ಅಶ್ವಿನ್ ವಿರುದ್ಧ ಯುವರಾಜ್ ಸಿಂಗ್ ತಂದೆ ಆಕ್ರೋಶ; ಗಡ್ಡ ಕತ್ತರಿಸುವ ಸವಾಲು!

PNG ಗೆ ಬದಲಾಯಿಸಲು ನಿರಾಕರಿಸುವ ಮನೆಗಳಿಗೆ ಎಲ್‌ಪಿಜಿ ಪೂರೈಕೆ ನಿಲ್ಲಿಸಲು ಸರ್ಕಾರದ ನಿರ್ಧಾರ

'ನನ್ನ ಸಹೋದರನಿಗೆ ಫೋನ್ ಮಾಡಿ, ಆದೇಶ ಪ್ರಶ್ನಿಸಲು ಎಷ್ಟು ಧೈರ್ಯ': ನ್ಯಾಯಾಂಗ ನಿಂದನೆ ವಾರ್ನಿಂಗ್ ನೀಡಿದ CJI; ಏನಿದು ಕೇಸ್?

SCROLL FOR NEXT