ಸೋನಿಯಾ ಗಾಂಧಿ 
ದೇಶ

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು; ವೈದ್ಯರು ಹೇಳಿದ್ದೇನು?

ಪ್ರಾಥಮಿಕ ಪರೀಕ್ಷೆಯಲ್ಲಿ ಹೊಟ್ಟೆ ಅಥವಾ ಮೂತ್ರನಾಳದ ಸೋಂಕಿನಿಂದ ಬಳಲುತ್ತಿರುವ ಸಾಧ್ಯತೆಯಿದೆ ಎನ್ನಲಾಗಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯವನ್ನು ನಿಗಾವಣೆ ಮಾಡುತ್ತಿದೆ

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ತಡರಾತ್ರಿ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 10.22ರ ಸುಮಾರಿಗೆ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು.

ಪ್ರಾಥಮಿಕ ಪರೀಕ್ಷೆಯಲ್ಲಿ ಹೊಟ್ಟೆ ಅಥವಾ ಮೂತ್ರನಾಳದ ಸೋಂಕಿನಿಂದ ಬಳಲುತ್ತಿರುವ ಸಾಧ್ಯತೆಯಿದೆ ಎನ್ನಲಾಗಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯವನ್ನು ನಿಗಾವಣೆ ಮಾಡುತ್ತಿದೆ. ಅಂಟಿಬಯೋಟಿಕ್ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದಲ್ಲಿ ಯಾವುದೇ ಆತಂಕ ಇಲ್ಲ ಎಂದು ಮೂಲಗಳು ತಿಳಿಸಿವೆ.

ಸೋನಿಯಾ ಗಾಂಧಿಯವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರು ವೈದ್ಯಕೀಯ ನಿಗಾವಣೆಯಲ್ಲಿದ್ದು, ಅವರು ಹೊಟ್ಟೆ ಅಥವಾ ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದಾರೆಯೇ ಎಂದು ನಿರ್ಧರಿಸಲು ವೈದ್ಯರು ಹೆಚ್ಚಿನ ತನಿಖೆಗಳನ್ನು ನಡೆಸುತ್ತಿದ್ದಾರೆ.

ವೈದ್ಯರ ತಂಡವು ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಅಂಟಿಬಯೋಟಿಕ್ ಸೇರಿದಂತೆ ಅಗತ್ಯ ಔಷಧಿಗಳನ್ನು ನೀಡಲಾಗಿದೆ ಎಂದು ಸರ್ ಗಂಗಾ ರಾಮ್ ಆಸ್ಪತ್ರೆಯ ಅಧ್ಯಕ್ಷ ಡಾ ಅಜಯ್ ಸ್ವರೂಪ್ ತಿಳಿಸಿದ್ದಾರೆ.

ಬಹುಶ: ಹವಾಮಾನದಲ್ಲಿನ ಇತ್ತೀಚಿನ ಬದಲಾವಣೆಯಿಂದ ಅಸ್ವಸ್ಥರಾಗಿದ್ದಾಗಿ ಸೋನಿಯಾ ಗಾಂಧಿ ಹೇಳಿಕೊಂಡಿದ್ದಾರೆ. ತದನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ವರದಿಗಳನ್ನು ಪರಿಶೀಲಿಸಿದ ನಂತರ ವೈದ್ಯರು ಮುಂದಿನ ಚಿಕಿತ್ಸೆ ಆರಂಭಿಸಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲಿಯಂ ಉತ್ಪನ್ನಗಳ ಮಿತಬಳಕೆ "ಈಗಿನ ಅಗತ್ಯ"-ಪ್ರಧಾನಿ ಮೋದಿ: ಮುಂದೆ ಕಾದಿದೆಯಾ ಸಂಕಷ್ಟದ ದಿನಗಳು?

1 ಮತದಿಂದ DMK ಅಭ್ಯರ್ಥಿ ಪೆರಿಯಕರುಪ್ಪನ್ ಸೋಲು; ಅಂಚೆ ಮತ ಗೊಂದಲದ ಬಗ್ಗೆ ECI ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ!

Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

ಅತ್ತ ವಿಜಯ್ ಪದಗ್ರಹಣ, ಇತ್ತ ಚಂದ್ರಬಾಬು ನಾಯ್ಡು, Pawan Kalyan ಮನೆಗೆ ಪ್ರಧಾನಿ ಮೋದಿ ದಿಢೀರ್ ಭೇಟಿ: ರಾಜಕೀಯ ವಲಯದಲ್ಲಿ ಸಂಚಲನ!

ಚುನಾವಣೆಗೂ ಮುನ್ನ ಯೋಗಿ ಸರ್ಕಾರದಲ್ಲಿ ಮಹತ್ತರ ಬದಲಾವಣೆ: ಸಂಪುಟ ಪುನಾರಚನೆ; 6 ಹೊಸ ಸಚಿವರ ಸೇರ್ಪಡೆ

SCROLL FOR NEXT