ಸೋನಿಯಾ ಗಾಂಧಿ 
ದೇಶ

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು; ವೈದ್ಯರು ಹೇಳಿದ್ದೇನು?

ಪ್ರಾಥಮಿಕ ಪರೀಕ್ಷೆಯಲ್ಲಿ ಹೊಟ್ಟೆ ಅಥವಾ ಮೂತ್ರನಾಳದ ಸೋಂಕಿನಿಂದ ಬಳಲುತ್ತಿರುವ ಸಾಧ್ಯತೆಯಿದೆ ಎನ್ನಲಾಗಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯವನ್ನು ನಿಗಾವಣೆ ಮಾಡುತ್ತಿದೆ

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ತಡರಾತ್ರಿ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 10.22ರ ಸುಮಾರಿಗೆ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು.

ಪ್ರಾಥಮಿಕ ಪರೀಕ್ಷೆಯಲ್ಲಿ ಹೊಟ್ಟೆ ಅಥವಾ ಮೂತ್ರನಾಳದ ಸೋಂಕಿನಿಂದ ಬಳಲುತ್ತಿರುವ ಸಾಧ್ಯತೆಯಿದೆ ಎನ್ನಲಾಗಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯವನ್ನು ನಿಗಾವಣೆ ಮಾಡುತ್ತಿದೆ. ಅಂಟಿಬಯೋಟಿಕ್ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದಲ್ಲಿ ಯಾವುದೇ ಆತಂಕ ಇಲ್ಲ ಎಂದು ಮೂಲಗಳು ತಿಳಿಸಿವೆ.

ಸೋನಿಯಾ ಗಾಂಧಿಯವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರು ವೈದ್ಯಕೀಯ ನಿಗಾವಣೆಯಲ್ಲಿದ್ದು, ಅವರು ಹೊಟ್ಟೆ ಅಥವಾ ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದಾರೆಯೇ ಎಂದು ನಿರ್ಧರಿಸಲು ವೈದ್ಯರು ಹೆಚ್ಚಿನ ತನಿಖೆಗಳನ್ನು ನಡೆಸುತ್ತಿದ್ದಾರೆ.

ವೈದ್ಯರ ತಂಡವು ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಅಂಟಿಬಯೋಟಿಕ್ ಸೇರಿದಂತೆ ಅಗತ್ಯ ಔಷಧಿಗಳನ್ನು ನೀಡಲಾಗಿದೆ ಎಂದು ಸರ್ ಗಂಗಾ ರಾಮ್ ಆಸ್ಪತ್ರೆಯ ಅಧ್ಯಕ್ಷ ಡಾ ಅಜಯ್ ಸ್ವರೂಪ್ ತಿಳಿಸಿದ್ದಾರೆ.

ಬಹುಶ: ಹವಾಮಾನದಲ್ಲಿನ ಇತ್ತೀಚಿನ ಬದಲಾವಣೆಯಿಂದ ಅಸ್ವಸ್ಥರಾಗಿದ್ದಾಗಿ ಸೋನಿಯಾ ಗಾಂಧಿ ಹೇಳಿಕೊಂಡಿದ್ದಾರೆ. ತದನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ವರದಿಗಳನ್ನು ಪರಿಶೀಲಿಸಿದ ನಂತರ ವೈದ್ಯರು ಮುಂದಿನ ಚಿಕಿತ್ಸೆ ಆರಂಭಿಸಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ