ಕಾಂಗ್ರೆಸ್ ನಾಯಕ ಪವನ್ ಖೇರಾ 
ದೇಶ

ಅಬಕಾರಿ ಸುಂಕ ಕಡಿತದಿಂದ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗಲ್ಲ; ಗ್ರಾಹಕರು, ಡೀಲರ್‌ಗಳಿಗೂ ಲಾಭ ಇಲ್ಲ! Video

"ವಾಸ್ತವವಾಗಿ ಸರ್ಕಾರ ಕಡಿಮೆ ಮಾಡಿರುವುದು 'ವಿಶೇಷ ಹೆಚ್ಚುವರಿ ಅಬಕಾರಿ ಸುಂಕ' - ತೈಲ ಮಾರುಕಟ್ಟೆ ಕಂಪನಿಗಳು ಸರ್ಕಾರಕ್ಕೆ ಪಾವತಿಸುವ ಲೆವಿ. 'ವಿಶೇಷ' ಮತ್ತು 'ಹೆಚ್ಚುವರಿ' ಪದಗಳು ಈ ತೆರಿಗೆ ಎಷ್ಟು ಅನಗತ್ಯ ಎಂಬುದನ್ನು ಬಹಿರಂಗಪಡಿಸುತ್ತವೆ"

ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ್ದು, ಇದು ಗ್ರಾಹಕರು ಅಥವಾ ಡೀಲರ್‌ಗಳಿಗೆ ತಕ್ಷಣವೇ ಯಾವುದೇ ಲಾಭವಾಗುವುದಿಲ್ಲ ಎಂದು ಕಾಂಗ್ರೆಸ್ ಶುಕ್ರವಾರ ಹೇಳಿದೆ.

ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 3 ರೂ.ಗೆ ಇಳಿಸಿದೆ ಮತ್ತು ಡೀಸೆಲ್ ಮೇಲಿನ ಸುಂಕವನ್ನು ಸಂಪೂರ್ಣವಾಗಿ ತೆಗೆದುಹಾಕಿದೆ. ಆದಾಗ್ಯೂ, ಈ ಕ್ರಮವು ಪೆಟ್ರೋಲ್, ಡೀಸಲ್ ಬೆಲೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವಿರೋಧ ಪಕ್ಷ ವಾದಿಸಿದೆ.

"ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 'ಕಡಿಮೆಯಾಗುತ್ತಿದೆ' ಎಂಬ ಹೆಡ್ ಲೈನ್ ಗಳನ್ನು ನೋಡಿ, ಸರ್ಕಾರವು ನಿಮ್ಮ ಜೇಬಿಗೆ ಬಿಗ್ ರಿಲೀಫ್ ನೀಡುತ್ತಿದೆ ಎಂದು ಭಾವಿಸಿದರೆ, ನೀವು ತಪ್ಪಾಗಿ ಭಾವಿಸುತ್ತಿದ್ದೀರಿ ಅಂತ" ಎಂದು ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಹೇಳಿದ್ದಾರೆ.

ಪ್ರಸ್ತುತ, ಡೀಲರ್‌ಗಳು ಮತ್ತು ಗ್ರಾಹಕರಿಗೆ ಇಂಧನ ಬೆಲೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅವರು ಹೇಳಿದ್ದಾರೆ.

"ವಾಸ್ತವವಾಗಿ ಸರ್ಕಾರ ಕಡಿಮೆ ಮಾಡಿರುವುದು 'ವಿಶೇಷ ಹೆಚ್ಚುವರಿ ಅಬಕಾರಿ ಸುಂಕ' - ತೈಲ ಮಾರುಕಟ್ಟೆ ಕಂಪನಿಗಳು ಸರ್ಕಾರಕ್ಕೆ ಪಾವತಿಸುವ ಲೆವಿ. 'ವಿಶೇಷ' ಮತ್ತು 'ಹೆಚ್ಚುವರಿ' ಪದಗಳು ಈ ತೆರಿಗೆ ಎಷ್ಟು ಅನಗತ್ಯ ಎಂಬುದನ್ನು ಬಹಿರಂಗಪಡಿಸುತ್ತವೆ" ಎಂದು ಖೇರಾ X ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾದಾಗಿನಿಂದ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ನಷ್ಟವನ್ನು ಅನುಭವಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

"ಸರ್ಕಾರವು ಈಗ ಆ ಹೊರೆಯ ಒಂದು ಸಣ್ಣ ಭಾಗವನ್ನು ಮಾತ್ರ ಕಮ್ಮಿ ಮಾಡಲು ಒಪ್ಪಿಕೊಂಡಿದೆ. ಅಂದರೆ 'ವಿಶೇಷ ಹೆಚ್ಚುವರಿ' ಲೆವಿಯನ್ನು ಮಾತ್ರ ಕಡಿಮೆ ಮಾಡಿದೆ - ಅದು ಕೂಡ ಸುಮಾರು ಒಂದು ತಿಂಗಳ ನಂತರ" ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋವಿಡ್‌ ಗೆದ್ದಂತೇ, ಪಶ್ಚಿಮ ಏಷ್ಯಾ ಸಂಘರ್ಷದ ಬಿಕ್ಕಟ್ಟು ಜಯಿಸುತ್ತೇವೆ: ಮತ್ತೆ 'ವೋಕಲ್ ಫಾರ್ ಲೋಕಲ್' ಮಂತ್ರ ಜಪಿಸಿದ ಮೋದಿ

IPL 2026: ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್; RCB ಅಗ್ರಸ್ಥಾನ ಭದ್ರ!

ತಮಿಳುನಾಡು ಸಿಎಂ ವಿಜಯ್‌ಗೆ Z+ ಭದ್ರತೆ: ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ

ಲಂಕಾದಿಂದ ಭಾರತಕ್ಕೆ 11 ಗಂಟೆಗಳ ಕಾಲ ಈಜಿದ ಬೆಂಗಳೂರು ದಂಪತಿ!

ದೇಶದಲ್ಲಿ ಇಂಧನ ಕೊರತೆ ಇಲ್ಲ, ಆದ್ರೆ...: ಪ್ರಧಾನಿ ಮೋದಿ ಹೇಳಿಕೆಗೆ ಕಾರಣ ನೀಡಿದ IGoM

SCROLL FOR NEXT