ಹಿಮ ತೆರವು ಹಾಗೂ ರಕ್ಷಣಾ ಕಾರ್ಯಾಚರಣೆಯ ಚಿತ್ರ 
ದೇಶ

ಶ್ರೀನಗರ-ಲೇಹ್ ಹೆದ್ದಾರಿಯ ಝೋಜಿಲಾ ಪಾಸ್ ನಲ್ಲಿ ಭಾರಿ ಹಿಮಪಾತ: ಏಳು ಮಂದಿ ದುರ್ಮರಣ, ಐವರಿಗೆ ಗಾಯ! Video

ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಭಾರಿ ಹಿಮಪಾತದ ಅವಶೇಷಗಳಿಂದ ಸಂತ್ರಸ್ತರನ್ನು ಹೊರತೆಗೆಯಲು ಕಾರ್ಯಾಚರಣೆ ಆರಂಭಿಸಿದ್ದು, ಏಳು ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ-ಲೇಹ್ ಹೆದ್ದಾರಿಯ ಝೋಜಿಲಾ ಪಾಸ್‌ನಲ್ಲಿ ಶುಕ್ರವಾರ ಭಾರಿ ಹಿಮಪಾತ ಸಂಭವಿಸಿದ್ದು, ಅನೇಕ ಪ್ರಯಾಣಿಕ ವಾಹನಗಳು ಡಿಕ್ಕಿ ಹೊಡೆದುಕೊಂಡ ಪರಿಣಾಮ ಏಳು ಜನರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.

ಮಧ್ಯಾಹ್ನ 2.45ರ ಸುಮಾರಿಗೆ ಪಾಸ್‌ನಲ್ಲಿ ಚಲಿಸುತ್ತಿದ್ದ ನಾಲ್ಕು ಪ್ರಯಾಣಿಕರ ವಾಹನಗಳು ಹಿಮಪಾತದಲ್ಲಿ ಸಿಲುಕಿಕೊಂಡಿವೆ. ವಾಹನಗಳು ಹಿಮದ ಅಡಿಯಲ್ಲಿ ಹೂತುಹೋಗಿದ್ದರಿಂದ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಭಾರಿ ಹಿಮಪಾತದ ಅವಶೇಷಗಳಿಂದ ಸಂತ್ರಸ್ತರನ್ನು ಹೊರತೆಗೆಯಲು ಕಾರ್ಯಾಚರಣೆ ಆರಂಭಿಸಿದ್ದು, ಏಳು ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ.

ಗಾಯಗೊಂಡಿದ್ದ ಐವರನ್ನು ದ್ರಾಸ್‌ನಲ್ಲಿರುವ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಇಬ್ಬರು ವ್ಯಕ್ತಿಗಳು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಅವರು ದ್ರಾಸ್ ಸೈಡ್ ದಾಟಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯ ಮೇಲ್ವಿಚಾರಣೆ ಮಾಡುವಂತೆ ಕಾರ್ಗಿಲ್ ನ ಡೆಪ್ಯುಟಿ ಕಮಿಷನರ್ ಮತ್ತು ಎಸ್‌ಎಸ್‌ಪಿ ಅವರಿಗೆ ಸೂಚಿಸಿದ್ದೇನೆ ಎಂದು ಲೆಫ್ಟಿನೆಂಟ್ ಗವರ್ನರ್ ಲಡಾಖ್ ವಿನಯ್ ಕುಮಾರ್ ಸಕ್ಸೇನಾ ಹೇಳಿದ್ದಾರೆ.

ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ವಿಪತ್ತು ಪರಿಹಾರ ಪಡೆಗಳು ಮತ್ತು BRO ಸೇರಿದಂತೆ ಎಲ್ಲಾ ಸರ್ಕಾರಿ ಏಜೆನ್ಸಿಗಳಿಗೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದಿಂದ 15 ದಿನಕ್ಕೊಮ್ಮೆ 7000 ಕೋಟಿ ಆದಾಯ ನಷ್ಟ!

IPL 2026: RCB vs SRH, ಆಸ್ಟ್ರೇಲಿಯಾದ ಈ ಸ್ಟಾರ್ ವೇಗಿ ಆಡಲ್ಲ! ಫ್ಯಾನ್ಸ್ ಗೆ ನಿರಾಸೆ

ಇರಾನ್‌ನ ಉನ್ನತಾಧಿಕಾರಿ ಅರಘ್ಚಿ, ಗಾಲಿಬಾಫ್'ರನ್ನು ಕೊಲ್ಲದಂತೆ ಇಸ್ರೇಲ್ ತಡೆದಿದ್ದೇ ನಾವು: Pakistan

ವಾಣಿಜ್ಯ LPG ಹಂಚಿಕೆ ಹೆಚ್ಚಳ; ಉದ್ಯಮ ವಲಯಕ್ಕೆ ಕೇಂದ್ರ ನೆರವು; ಪ್ರಲ್ಹಾದ ಜೋಶಿ

ವಂದೇ ಭಾರತ್ ಮೊಸರಿನಲ್ಲಿ ಹುಳುಗಳು: ಅಮುಲ್ ಜೊತೆಗಿನ ಒಪ್ಪಂದ ರದ್ದು; ಭಾರಿ ಮೊತ್ತದ ದಂಡ- IRCTC

SCROLL FOR NEXT