ಕೆ. ಸುಧಾಕರನ್ - ರಾಹುಲ್ ಗಾಂಧಿ 
ದೇಶ

ಕೇರಳದಲ್ಲಿ 100 ಸ್ಥಾನ ಗೆಲ್ಲುತ್ತೇವೆ: ರಾಹುಲ್ ಗಾಂಧಿ

ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ 100 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ತಿಳಿಸಿದ್ದಾರೆ.

ನವದೆಹಲಿ: ಕೇರಳದಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ "ಒಗ್ಗಟ್ಟಾಗಿದೆ ಮತ್ತು ಬಲಿಷ್ಠವಾಗಿದೆ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ 100 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ತಿಳಿಸಿದ್ದಾರೆ.

ಏಪ್ರಿಲ್ 9 ರ ಚುನಾವಣೆಗೆ ಮುಂಚಿತವಾಗಿ ರಾಹುಲ್ ಗಾಂಧಿ ಪಕ್ಷದ ಹಿರಿಯ ನಾಯಕ ಮತ್ತು ಕಣ್ಣೂರು ಲೋಕಸಭಾ ಸಂಸದ ಕೆ. ಸುಧಾಕರನ್ ಹಾಗೂ ಅವರ ಕುಟುಂಬ ಸದಸ್ಯರನ್ನು ಇಂದು ಭೇಟಿ ಮಾಡಿದರು. ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಉಪಸ್ಥಿತರಿದ್ದರು.

ಕೇರಳದ ಮಾಜಿ ಕ್ಯಾಬಿನೆಟ್ ಸಚಿವ ಮತ್ತು ಮಾಜಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಸುಧಾಕರನ್ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದರು. ಆದರೆ ಪಕ್ಷದ ನಾಯಕತ್ವವು ಅವರನ್ನು ಕಣದಿಂದ ಹೊರಗುಳಿಯುವಂತೆ ಮನವೊಲಿಸಿದೆ.

ಈ ನಿರ್ಧಾರದಿಂದ ಅವರು ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ಸೂಚಿಸಿವೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ. ವೇಣುಗೋಪಾಲ್ ಅವರೊಂದಿಗೆ "ಸುಧಾಕರನ್ ಮತ್ತು ಅವರ ಕುಟುಂಬದೊಂದಿಗೆ ಭೇಟಿಯಾದೆ. ಕೆ. ಸುಧಾಕರನ್ ಅವರು ಕೇರಳದ ಜನರಿಗಾಗಿ ತಮ್ಮ ಜೀವನ ಮುಡಿಪಾಗಿಟ್ಟಿದ್ದಾರೆ. ಅವರಲ್ಲಿ ಕಾಂಗ್ರೆಸ್ ಸೈನಿಕನ ಶಕ್ತಿ ಮತ್ತು ನಿಷ್ಠೆ ಇದೆ" ಎಂದು ಹೇಳಿದ್ದಾರೆ.

"ಯುಡಿಎಫ್ ಒಗ್ಗಟ್ಟಿನಿಂದ ಕೂಡಿದೆ ಮತ್ತು ಬಲಿಷ್ಠವಾಗಿದೆ. ಕೇರಳದಲ್ಲಿ 100 ಸ್ಥಾನಗಳೊಂದಿಗೆ ನಾವು ಭರ್ಜರಿ ಗೆಲುವಿನತ್ತ ಸಾಗುತ್ತಿದ್ದೇವೆ" ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹೇಳಿದ್ದಾರೆ.

ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕೇರಳದಲ್ಲಿ ಕಳೆದ ಒಂದು ದಶಕದಿಂದ ಅಧಿಕಾರದಿಂದ ಹೊರಗುಳಿದಿದ್ದು, ಸಿಪಿಐ-ಎಂ ನೇತೃತ್ವದ ಎಡಪಂಥೀಯರಿಂದ ಅಧಿಕಾರವನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೌದಿ ದೊರೆ ಜತೆ ಪ್ರಧಾನಿ ಮೋದಿ ಮಾತುಕತೆ; ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆ

IPL 2026: ಚೊಚ್ಚಲ ಪಂದ್ಯದಲ್ಲೇ RCB ಪರ 3 ವಿಕೆಟ್ ಕಬಳಿಸಿದ ಜಾಕೋಬ್ ಡಫಿ!

'ಉಪಚುನಾವಣೆ ಫಲಿತಾಂಶಕ್ಕೂ, ಸಿಎಂ ಕುರ್ಚಿಗೂ ಲಿಂಕ್ ಮಾಡಬೇಡಿ': ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

ಟ್ರಂಪ್‌ಗೆ ಮತ್ತೊಂದು ಜಲಾಘಾತ: ಇರಾನ್ ಪರ ಯುದ್ಧಕ್ಕೆ ಯೆಮೆನ್ ಎಂಟ್ರಿ; ಇಸ್ರೇಲ್ ಮೇಲೆ ಮೊದಲ ಕ್ಷಿಪಣಿ ಹಾರಿಸಿದ ಹೌತಿಗಳು!

ಗ್ರಾಹಕರಿಗೆ ಗುಡ್ ನ್ಯೂಸ್: ಹಾರ್ಮುಜ್ ಮೂಲಕ ಗುಜರಾತ್ ತಲುಪಿದ LPG ಹೊತ್ತ ಮತ್ತೊಂದು ಹಡಗು

SCROLL FOR NEXT