ಟಿವಿಕೆ ವಿಜಯ್ 
ದೇಶ

'ನಾನು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತೇನೆ, ನನ್ನ ಲಕ್ಷುರಿ ಜೀವನ ಬಿಟ್ಟು, ನೋವುಗಳನ್ನು ಸಹಿಸಿಕೊಂಡು ನಿಮ್ಮ ಋಣ ತೀರಿಸಲು ಬಂದಿದ್ದೇನೆ, ಒಂದು ಬಾರಿ ಅವಕಾಶ ನೀಡಿ': ಟಿವಿಕೆ ವಿಜಯ್ -Video

ಪಕ್ಷ ಅಧಿಕಾರಕ್ಕೆ ಬಂದರೆ, 29 ವರ್ಷಕ್ಕಿಂತ ಮೇಲ್ಪಟ್ಟ ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 4,000 ರೂಪಾಯಿ ನೆರವು ನೀಡಲಾಗುವುದು ಎಂದು ವಿಜಯ್ ಘೋಷಿಸಿದರು.

ಚೆನ್ನೈ: ಏಪ್ರಿಲ್ 23ರಂದು ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ತಾವು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದಾಗಿ ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಇಂದು ಭಾನುವಾರ ಘೋಷಿಸಿದ್ದಾರೆ.

ಚೆನ್ನೈನ ಪೆರಂಬೂರು ಮತ್ತು ತಿರುಚಿರಾಪಳ್ಳಿ ಈಸ್ಟ್ ಕ್ಷೇತ್ರಗಳಿಂದ “ಸಿ ಜೋಸೆಫ್ ವಿಜಯ್” ಎಂಬ ಹೆಸರಿನಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದರು.

ಮೂಲತಃ ನಟರಾಗಿ ದೇಶಾದ್ಯಂತ ಜನಪ್ರಿಯರಾಗಿರುವ ಇಂದು ರಾಜಕಾರಣಿಯಾಗಿರುವ ದಳಪತಿ ವಿಜಯ್ ಅವರು ಪಕ್ಷದ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನೂ ಪ್ರಕಟಿಸಿದರು.

ಸಾಮಾನ್ಯ ಕಾರ್ಯದರ್ಶಿ ಎನ್ ಆನಂದ್ ಟಿ ನಗರದಿಂದ, ಖಜಾಂಚಿ ವೆಂಕಟರಾಮನ್ ಮೈಲಾಪುರದಿಂದ, ಚುನಾವಣಾ ಪ್ರಚಾರ ನಿರ್ವಹಣಾ ಸಾಮಾನ್ಯ ಕಾರ್ಯದರ್ಶಿ ಆದವ್ ಅರ್ಜುನಾ ವಿಲ್ಲಿವಾಕ್ಕಂನಿಂದ ಸ್ಪರ್ಧಿಸಲಿದ್ದಾರೆ. ಉಪ ಸಾಮಾನ್ಯ ಕಾರ್ಯದರ್ಶಿಗಳಾದ ಸಿಟಿಆರ್ ನಿರ್ಮಲ್ ಕುಮಾರ್ ತಿರುಪ್ಪರಂಕುಂದ್ರಂನಿಂದ ಮತ್ತು ರಾಜ್ ಮೋಹನ್ ಎಗ್ಮೋರ್‌ನಿಂದ ಸ್ಪರ್ಧಿಸಲಿದ್ದಾರೆ.

ಹೊಸ ಸೇರ್ಪಡೆಗಳಲ್ಲಿ, ಇತ್ತೀಚೆಗೆ ಟಿವಿಕೆಗೆ ಸೇರ್ಪಡೆಗೊಂಡು ಎಐಎಡಿಎಂಕೆಯಿಂದ ಹೊರಹಾಕಲ್ಪಟ್ಟ ಕೆಎ ಸೆಂಗೊಟ್ಟಯ್ಯನ್ ಗೋಬಿಚೆಟ್ಟಿಪಾಳಯಂನಿಂದ ಸ್ಪರ್ಧಿಸಲಿದ್ದಾರೆ. ಮಾಜಿ ಐಆರ್‌ಎಸ್ ಅಧಿಕಾರಿ ಮತ್ತು ಪಕ್ಷದ ಪ್ರಚಾರ ಕಾರ್ಯದರ್ಶಿ ಕೆಜಿ ಅರುಣ್‌ರಾಜ್ ತಿರುಚೆಂಗೋಡ್‌ನಿಂದ ಅಭ್ಯರ್ಥಿಯಾಗಿದ್ದಾರೆ.

ಪಕ್ಷ ಅಧಿಕಾರಕ್ಕೆ ಬಂದರೆ, 29 ವರ್ಷಕ್ಕಿಂತ ಮೇಲ್ಪಟ್ಟ ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 4,000 ರೂಪಾಯಿ ನೆರವು ನೀಡಲಾಗುವುದು ಎಂದು ವಿಜಯ್ ಘೋಷಿಸಿದರು.

ಯುವಕರಿಗಾಗಿ “ಗ್ಯಾರಂಟಿ” ಎಂದು ಕರೆಯಲಾದ ಕಾರ್ಯಯೋಜನೆಯನ್ನು ಅನಾವರಣಗೊಳಿಸಿದ ಅವರು, ಮಾದಕ ವಸ್ತುಗಳಿಲ್ಲದ ತಮಿಳುನಾಡು ನಿರ್ಮಾಣ, 12ನೇ ತರಗತಿಯಿಂದ ಪಿಎಚ್‌ಡಿ ವರೆಗೆ 20 ಲಕ್ಷದವರೆಗೆ ಜಾಮೀನು ಇಲ್ಲದ ಸಾಲ ಭರವಸೆ ಸೇರಿದಂತೆ ಹಲವು ಭರವಸೆಗಳನ್ನು ನೀಡಿದರು.

ಮುಖ್ಯ ಚುನಾವಣಾ ಪೈಪೋಟಿ ತಮ್ಮ ಜನರ ಮೈತ್ರಿ ಟಿವಿಕೆ ಮತ್ತು ಎಂ ಕೆ ಸ್ಟಾಲಿನ್ ಮೈತ್ರಿ ನಡುವೆಯೇ ನಡೆಯಲಿದೆ ಎಂದು ವಿಜಯ್ ಹೇಳಿದರು. ಆಡಳಿತ ಮೈತ್ರಿಯನ್ನು ಪ್ಯಾಚ್‌ಅಪ್ ಎಂದು ಟೀಕಿಸಿದ ಅವರು, ಜನರೊಂದಿಗೆ ನಿಲ್ಲುವವರನ್ನೇ ನಾನು ಅಭ್ಯರ್ಥಿಗಳಾಗಿ ಆಯ್ಕೆ ಮಾಡಿದ್ದೇನೆ ಎಂದರು.

ಆಡಳಿತ ಮೈತ್ರಿ ಪಾಲುದಾರರನ್ನು ಟೀಕಿಸಿದ ಅವರು, ಎಡಪಕ್ಷಗಳು, ಎಂಡಿಎಂಕೆ ಮತ್ತು ಡಿಎಂಡಿಕೆ ಸೇರಿದ್ದ ಜನ ಕಲ್ಯಾಣ ಮೈತ್ರಿ ಡಿಎಂಕೆ ನೇತೃತ್ವದ ಮೈತ್ರಿಗೆ ಸೇರಿದೆ ಎಂದು ಹೇಳಿ, ಅದನ್ನು ಒಡೆದ ಗಾಜಿನ ತುಂಡುಗಳನ್ನು ಜೋಡಿಸಿದಂತೆ ರೂಪಿಸಲಾಗಿದೆ ಎಂದು ಟೀಕಿಸಿದರು.

ತಮಿಳು ನಾಡು ರಾಜ್ಯದ 234 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 23ರಂದು ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia Conflict- ವದಂತಿಗಳಿಗೆ ಕಿವಿಗೊಡಬೇಡಿ, ಎಚ್ಚರಿಕೆ ಇರಲಿ, ಸವಾಲನ್ನು ಒಟ್ಟಾಗಿ ಎದುರಿಸೋಣ: ಪ್ರಧಾನಿ ಮೋದಿ-Video

ಟ್ರಂಪ್ ಎಚ್ಚರಿಕೆಗೆ ಬಗ್ಗದ ಇರಾನ್: ಸೌದಿ ವಾಯುನೆಲೆ ಮೇಲೆ ಮುಂದುವರೆದ ಕ್ಷಿಪಣಿ ದಾಳಿ; ಅಮೆರಿಕಾದ 15 ಸೈನಿಕರಿಗೆ ಗಾಯ, ಐವರ ಸ್ಥಿತಿ ಗಂಭೀರ

'ನಾವು ಓದುವಾಗ ಹಿಂದಿ ಭಾಷೆ ಕಡ್ಡಾಯ ಇರಲಿಲ್ಲ, ಪರೀಕ್ಷೆಗೆ ಅದು ಕಡ್ಡಾಯ ಆಗಬಾರದು': ಸಿಎಂ ಸಿದ್ದರಾಮಯ್ಯ

IPL 2026: ಚಿನ್ನಸ್ವಾಮಿಯಲ್ಲಿ RCB ಬ್ಯಾಟಿಂಗ್ ಅಬ್ಬರ; ಟಿ20 ಲೀಗ್​ನ ವಿಶ್ವ ದಾಖಲೆಯೇ ಉಡೀಸ್..!

IPL ಟಿಕೆಟ್ ವಿವಾದ: ಎರೆಡರಡು VIP ಪಾಸ್ ಪಡೆದರೂ ಮೈದಾನಕ್ಕೆ ಬಾರದ ಶಾಸಕರು, ಟೀಕೆ ಶುರು

SCROLL FOR NEXT