ಬಿಹಾರ ಸಿಎಂ ನಿತೀಶ್ ಕುಮಾರ್ 
ದೇಶ

ಬಿಹಾರ: MLC ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ! ಮುಂದಿನ ಸಿಎಂ ಯಾರು?

ಚುನಾಯಿತ ಸದಸ್ಯರು ರಾಜ್ಯಸಭೆಗೆ ಆಯ್ಕೆಯಾದ 14 ದಿನಗಳೊಳಗೆ ರಾಜ್ಯ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು ಎಂದು ನಿಯಮವಿದೆ. ಇದರ ಪ್ರಕಾರ ನಿತೀಶ್ ಕುಮಾರ್ ಇಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು MLC ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಬಿಹಾರದ ಸುದೀರ್ಘ ಅವಧಿಯ ಸಿಎಂ ಆಗಿರುವ ನಿತೀಶ್ ಕುಮಾರ್ ಕಳೆದ ತಿಂಗಳು ರಾಜ್ಯಸಭೆಗೆ ನೇಮಕವಾಗುವ ಮೂಲಕ ಸಿಎಂ ಸ್ಥಾನವನ್ನು ತ್ಯಜಿಸುವ ಸುಳಿವು ನೀಡಿದ್ದರು.

ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಮರಳಲು ಸಜ್ಜಾಗಿರುವ ನಿತೀಶ್ ಕುಮಾರ್ ಅವರು ಎಷ್ಟು ದಿನಗಳವರೆಗೆ ಮುಂದುವರೆಯಲಿದ್ದಾರೆ ಎಂಬ ಬಗ್ಗೆ ಅನುಮಾನಗಳು ಮುಂದುವರೆದಿತ್ತು.

ಚುನಾಯಿತ ಸದಸ್ಯರು ರಾಜ್ಯಸಭೆಗೆ ಆಯ್ಕೆಯಾದ 14 ದಿನಗಳೊಳಗೆ ರಾಜ್ಯ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು ಎಂದು ನಿಯಮವಿದೆ. ಇದರ ಪ್ರಕಾರ ನಿತೀಶ್ ಕುಮಾರ್ ಇಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಮಧ್ಯೆ ಜನತಾದಳ (ಯುನೈಟೆಡ್) ಅಧ್ಯಕ್ಷ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಜೆಡಿಯು ನಾಯಕ ಅನಿಲ್ ಹೆಗ್ಡೆ ಅವರು ಸುದ್ದಿಗೋಷ್ಠಿಯಲ್ಲಿ ಚುನಾವಣಾ ಪ್ರಕ್ರಿಯೆಯನ್ನು ವಿವರಿಸಿದ ನಂತರ ಈ ವಿಷಯ ತಿಳಿಸಿದರು.

ನಾಮಪತ್ರ ಸಲ್ಲಿಸಲು ಮಾರ್ಚ್ 22 ಕೊನೆಯ ದಿನವಾಗಿತ್ತು. ಮಾರ್ಚ್ 23 ರಂದು ಪರಿಶೀಲನೆ ನಡೆಸಲಾಗಿದ್ದು, ನಾಮಪತ್ರ ಹಿಂಪಡೆಯಲು ಇಂದು ಬೆಳಗ್ಗೆ 11 ಗಂಟೆಗೆ ಗಡುವು ನೀಡಲಾಗಿತ್ತು. ಅಂತಿಮವಾಗಿ ನಿತೀಶ್ ಕುಮಾರ್ ಅವರೇ ಸ್ಪರ್ಧೆಯಲ್ಲಿ ಇರುವುದರಿಂದ ಅವಿರೋಧವಾಗಿ ಆಯ್ಕೆಯಾದರು ಎಂದು ಅವರು ಪ್ರಕಟಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕುವೈತ್‌ನಲ್ಲಿ ವಿದ್ಯುತ್ ಸ್ಥಾವರದ ಮೇಲೆ ಇರಾನ್ ದಾಳಿ, ಭಾರತೀಯ ಕಾರ್ಮಿಕ ಸಾವು!

West Asia war ಎಫೆಕ್ಟ್: ಷೇರು ಮಾರುಕಟ್ಟೆ ಆರಂಭಿಕ ವಹಿವಾಟಿನಲ್ಲಿ 1,191.24 ಅಂಕ ಕುಸಿತ; ಹೂಡಿಕೆದಾರರಿಗೆ ಭಾರೀ ನಷ್ಟ

ಇರಾನ್ ಬೆಂಬಲಿತ ಹೌತಿಗಳು ಯುದ್ಧಕ್ಕೆ ಎಂಟ್ರಿ; ಜಾಗತಿಕ ತೈಲ ಮತ್ತು ನೈಸರ್ಗಿಕ ಅನಿಲ ಸಾಗಣೆಗೆ ಆತಂಕ (ಜಾಗತಿಕ ಜಗಲಿ)

ವಿಶಾಖಪಟ್ಟಣಂ: ಲವರ್ ಕೊಂದು, ಮೃತದೇಹವನ್ನು ತುಂಡರಿಸಿ 'ಫ್ರೀಡ್ಜ್ 'ನಲ್ಲಿಟ್ಟಿದ್ದ ನೌಕಪಡೆಯ ಉದ್ಯೋಗಿ ಬಂಧನ!

‘ಮಸೀದಿ ಕೆಡವಿದ್ರೆ ದೇಗುಲ ಸಿಕ್ಕಂತೆಯೇ ದೇಗುಲ ಕೆಡವಿದ್ರೆ ಸ್ತೂಪ ಸಿಗುತ್ತದೆ’: ವಿವಾದದ ಕಿಡಿ ಹೊತ್ತಿಸಿದ ಸಚಿವ ಪ್ರಿಯಾಂಕ್ ಖರ್ಗೆ

SCROLL FOR NEXT