ಅಪ್ರಾಪ್ತ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ 
ದೇಶ

ಕ್ಷುಲ್ಲಕ ಕಾರಣಕ್ಕೆ ತಂದೆಯೊಂದಿಗೆ ಜಗಳ: ಆಟೋದಲ್ಲಿ ಕುಳಿತಿದ್ದ 4 ವರ್ಷದ ಮಗುವಿನ ಕಾಲಿಡಿದು ರಸ್ತೆಗೆ ಬಡಿದ ಕಿರಾತಕ!

ಹುಡುಗನ ತಂದೆಯೊಂದಿಗಿನ ಜಗಳಕ್ಕೆ ಸೇಡು ತೀರಿಸಿಕೊಳ್ಳಲು ಪವಾರ್ ಬಾಲಕನನ್ನು ನೆಲಕ್ಕೆ ಬಡಿದಿದ್ದಾನೆ. ನಂತರ ಕಬ್ಬಿಣದ ರಾಡ್‌ನಿಂದ ತಲೆ ಮೇಲೆ ಹಲ್ಲೆ ನಡೆಸಿದ್ದಾನೆ.

ಮುಂಬೈ: ಮಹಾರಾಷ್ಟ್ರದ ಮುಂಬೈಗೆ ಹೊಂದಿಕೊಂಡ ಪ್ರದೇಶವಾದ ಇಲ್ಲಿ ವಸೈನಲ್ಲಿ ಕ್ಷುಲ್ಲಕ ವಿಷಯಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿದೆ. ವ್ಯಕ್ತಿಯೊಬ್ಬ ಮತ್ತೊಬ್ಬ ವ್ಯಕ್ತಿಯೊಂದಿಗೆ ಜಗಳವಾಡಿದ ನಂತರ ಆತನ ನಾಲ್ಕು ವರ್ಷದ ಮಗನನ್ನು ಕಾಲಿಡಿದು ಬಟ್ಟೆ ಹೊಗೆದಂತೆ ನೆಲಕ್ಕೆ ಬಡಿದಿರುವ ಆಘಾತಕಾರಿ ಘಟನೆ ನಡೆದಿದೆ.

ಈ ಕ್ರೂರ ಘಟನೆ ಹೌಸಿಂಗ್ ಸೊಸೈಟಿಯಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವಿಡಿಯೋದಲ್ಲಿ ಹಳದಿ ಟೀ ಶರ್ಟ್ ಧರಿಸಿದ ವಿಘ್ನೇಶ್ ಎಂದು ಗುರುತಿಸಲಾದ ಬಾಲಕ ನಿಲ್ಲಿಸಿದ್ದ ಆಟೋರಿಕ್ಷಾದಲ್ಲಿ ಕುಳಿತು ಇತರ ಮಕ್ಕಳೊಂದಿಗೆ ಆಟವಾಡುತ್ತಿರುವುದನ್ನು ಕಾಣಬಹುದು. ಆ ಮಗುವಿನ ತಂದೆಯೊಂದಿಗೆ ಸಣ್ಣ ವಿಷಯಕ್ಕೆ ಜಗಳವಾಡಿದ ಆರೋಪಿ ಸಂದೀಪ್ ಪವಾರ್, ವಿಘ್ನೇಶ್ ಬಳಿಗೆ ನಡೆದು ಅವನ ಕಾಲುಗಳನ್ನು ಹಿಡಿದು ವಾಹನದಿಂದ ಹೊರಗೆಳೆದಿದ್ದಾನೆ.

ಆ ಹುಡುಗನ ತಂದೆಯೊಂದಿಗಿನ ಜಗಳಕ್ಕೆ ಸೇಡು ತೀರಿಸಿಕೊಳ್ಳಲು ನಂತರ ಪವಾರ್ ಬಾಲಕನನ್ನು ನೆಲಕ್ಕೆ ಅಪ್ಪಳಿಸಿದ್ದಾನೆ. ನಂತರ ಕಬ್ಬಿಣದ ರಾಡ್‌ನಿಂದ ತಲೆ ಮೇಲೆ ಹಲ್ಲೆ ನಡೆಸಿದ್ದಾನೆ. ಮತ್ತೊಮ್ಮೆ ಬಾಲಕನನ್ನು ರಸ್ತೆ ಮೇಲೆ ಎಸೆದಿದ್ದಾನೆ.

ಬಾಲಕನನ್ನು ಮೀರಾ ರಸ್ತೆಯಲ್ಲಿರುವ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸದ್ಯ ಆತನಿಗೆ ತೀವ್ರ ನಿಗಾ ಘಟಕದಲ್ಲಿಟ್ಟು (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ. ಆತನ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಂತರ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯು ಪ್ರದೇಶದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ನಿವಾಸಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಯುದ್ಧಕ್ಕೆ ಹೌತಿಗಳ ಪ್ರವೇಶ: 2ನೇ ಕದನರಂಗ; ಬಾಬ್ ಅಲ್-ಮಂದಾಬ್‌ ಜಲಸಂಧಿ ಬಂದ್ ಆದರೆ ಭಾರತಕ್ಕೇನು ಸಂಕಷ್ಟ? ಇಲ್ಲಿದೆ ಮಾಹಿತಿ

ಖಜಾನೆ ಖಾಲಿ? ಇರಾನ್ ಯುದ್ಧಕ್ಕೆ ಹಣ ನೀಡಲು ಅರಬ್ ರಾಷ್ಟ್ರಗಳಿಗೆ ಅಮೆರಿಕ ಒತ್ತಾಯ..: ವೈಟ್ ಹೌಸ್ ಹೇಳಿದ್ದೇನು?

ವಿಕ್ಷಿತ್‌ ಕೇರಳಗಾಗಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಕೇಸರಿ ಪಕ್ಷ ನೀಡಿದ ಭರವಸೆಗಳೇನು?

ಇರಾನ್ ಯುದ್ಧದ ನಡುವೆ ಅಮೆರಿಕಕ್ಕೆ ದೊಡ್ಡ ಹಿನ್ನಡೆ: ತನ್ನ ವಾಯುನೆಲೆ ಬಳಕೆ ನಿರಾಕರಿಸಿದ ಇಟಲಿ!

ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ಮೂರೇ ತಿಂಗಳಲ್ಲಿ UCC ಜಾರಿ: ಹಿಮಂತ ಶರ್ಮಾ

SCROLL FOR NEXT