ಸಾಂದರ್ಭಿಕ ಚಿತ್ರ 
ದೇಶ

ರನ್‌ವೇಯಲ್ಲಿ ಮಂಗಗಳ ಹಾವಳಿ, ಇಂಡಿಗೋ ವಿಮಾನ ಟೇಕ್ ಆಫ್ ರದ್ದು!

ಲಖನೌ ವಿಮಾನ ನಿಲ್ದಾಣದಲ್ಲಿ ಮಂಗಗಳ ಗುಂಪೊಂದು ರನ್ ದಾಟುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ರಾಯಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕ್ ಆಫ್ ನ್ನು ಸ್ಥಗಿತಗೊಳಿಸಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಲಖನೌ: ವಿಮಾನ ನಿಲ್ದಾಣದಲ್ಲಿ ಮಂಗಗಳ ಗುಂಪು ರನ್‌ವೇ ದಾಟುತ್ತಿರುವುದು ಕಂಡುಬಂದ ನಂತರ ಇಂಡಿಗೋ ವಿಮಾನ ಟೇಕ್ ಆಫ್ ರದ್ದುಪಡಿಸಿದ ಘಟನೆ ಉತ್ತರ ಪ್ರದೇಶದ ಲಖನೌ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಲಖನೌ ವಿಮಾನ ನಿಲ್ದಾಣದಲ್ಲಿ ಮಂಗಗಳ ಗುಂಪೊಂದು ರನ್ ದಾಟುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ರಾಯಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕ್ ಆಫ್ ನ್ನು ಸ್ಥಗಿತಗೊಳಿಸಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಸುಮಾರು 150 ಪ್ರಯಾಣಿಕರನ್ನು ಹೊತ್ತ 6E 6521 ವಿಮಾನ ಗುರುವಾರ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ರನ್ ವೇಯಿಂದ ಸ್ವಲ್ಪ ಕೆಳಗೆ ಹಾರಾಟ ನಡೆಸುವಾಗ, ಮಂಗಗಳು ರನ್ ವೇ ದಾಟುತ್ತಿರುವುದನ್ನು ಪೈಲಟ್ ನೋಡಿದ್ದಾರೆ.

ತಕ್ಷಣ ಟೇಕ್ ಆಫ್ ರದ್ದುಗೊಳಿಸಿದ್ದು, ವಾಯು ಸಂಚಾರ ನಿಯಂತ್ರಣಕ್ಕೆ ಮಾಹಿತಿ ನೀಡಿದ್ದಾರೆ. ನಂತರ ವಿಮಾನ ಹಿಂತಿರುಗಿದ್ದು, ಸುಮಾರು ಒಂದು ಗಂಟೆಯ ನಂತರ ಇಂಧನ ತುಂಬಿಸಿಕೊಂಡು ಹೊರಟಿದೆ. ಇದರಿಂದಾಗಿ ಇತರ ಕೆಲವು ವಿಮಾನಗಳ ನಿರ್ಗಮನ ವೇಳಾಪಟ್ಟಿಯ ಮೇಲೆ ಪರಿಣಾಮ ಬೀರಿತು.

ಘಟನೆಗೆ 10 ನಿಮಿಷಗಳ ಮುನ್ನಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ರನ್‌ವೇ ಬಳಿ ಮಂಗಗಳು ಇರುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿತ್ತು. ಮಾಹಿತಿ ಬಂದ ಕೂಡಲೇ, ಇಂಡಿಗೋ ವಿಮಾನವು ಹೊರಡಲು ನಿಗದಿಯಾಗಿತ್ತು. ಆದರೆ ರನ್‌ವೇಯಲ್ಲಿ ಮಂಗಗಳ ಕಾಟದಿಂದ ಟೇಕ್-ಆಫ್ ಅನ್ನು ರದ್ದುಗೊಳಿಸಲಾಯಿತು.

ಘಟನೆಯ ನಂತರ ವಿಮಾನ ನಿಲ್ದಾಣದ ವನ್ಯಜೀವಿ ನಿರ್ವಹಣಾ ತಂಡ ಕಾರ್ಯಾಚರಣೆ ನಡೆಸಿ ಮಂಗಗಳನ್ನು ಓಡಿಸಿ, ರನ್‌ವೇಯನ್ನು ತೆರವುಗೊಳಿಸಿತು. ಬಳಿಕ ವಿಮಾನ ಕಾರ್ಯಾಚರಣೆಗಳು ಸಾಮಾನ್ಯವಾಗಿ ಪುನರಾರಂಭಗೊಂಡವು ಎಂದು ವಿಮಾನ ನಿಲ್ದಾಣದ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಆರೋಪ: ಪವನ್ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು

ಯಾರೋ ಸಿಂಪಲ್ ಸುಧಾ ಗಂಡ ಅಂತೆ ನನಗೆ ಗೊತ್ತಿಲ್ಲ: ವಾರಕ್ಕೆ 75 ಗಂಟೆ ಕೆಲಸ ಮಾಡಬೇಕಂತೆ; ನಾರಾಯಣ ಮೂರ್ತಿ ವಿರುದ್ಧ ಹರಿಪ್ರಸಾದ್ ಗರಂ

ರಾಹುಲ್- ಸೋನಿಯಾ ಗಾಂಧಿ ಏನೇ ಹೇಳಿದ್ರು ಪ್ರಸಾದವೆಂದು ಸ್ವೀಕಾರ: ಕೇಂದ್ರ ಜನಸಾಮಾನ್ಯರ ನೋವು ಅರಿಯಬೇಕು; ಡಿ.ಕೆ. ಶಿವಕುಮಾರ್

ನರ್ಮದಾ ನದಿಯಲ್ಲಿ ಪ್ರವಾಸಿ ಬೋಟ್ ಜಲಸಮಾಧಿ: ಸಾವಿನ ಸಂಖ್ಯೆ 9ಕ್ಕೆ ಏರಿಕೆ; ಎದೆಗೆ ಅಪ್ಪಿಕೊಂಡ ಸ್ಥಿತಿಯಲ್ಲಿ ತಾಯಿ-ಮಗು ಶವಪತ್ತೆ

ನಾಯಕತ್ವ ಹಗ್ಗಜಗ್ಗಾಟ ನಡುವೆ ಗುಪ್ತಚರ ಮುಖ್ಯಸ್ಥರ ಬದಲಾವಣೆ: ಅಧಿಕಾರ ಇನ್ನೂ ನನ್ನ ಕೈಯಲ್ಲೇ ಇದೆ, ಕಠಿಣ ಸಂದೇಶ ರವಾನಿಸಿದ ಸಿದ್ದರಾಮಯ್ಯ..?

SCROLL FOR NEXT