ನಟ ವಿಜಯ್  
ದೇಶ

Tamilnadu: ರಾಜಕೀಯ ದ್ವೇಷ; ಟಿವಿಕೆ ಪ್ರಚಾರ ಕಚೇರಿಗೆ ದುಷ್ಕರ್ಮಿಗಳಿಂದ ಬೆಂಕಿ!

ಶ್ರೀರಂಗಂ ಬಳಿಯ ಕಾಮನಾಯಕನ್ ಪಾಳ್ಯಂ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ನಟ ವಿಜಯ್ ನೇತೃತ್ವದ ತಮಿಳುಕ ವೆಟ್ರಿ ಕಳಗಂ (TVK) ಪಕ್ಷದ ಪ್ರಚಾರ ಕಚೇರಿಯನ್ನು ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟುಹಾಕಿದ್ದಾರೆ.

ಶ್ರೀರಂಗಂ: ತಮಿಳುನಾಡು ವಿಧಾನಸಭಾ ಚುನಾವಣೆ ಮುಗಿದಿದ್ದರೂ ರಾಜಕೀಯ ದ್ವೇಷ ಹೊಗೆಯಾಡುತ್ತಲೇ ಇದೆ.

ಶ್ರೀರಂಗಂ ಬಳಿಯ ಕಾಮನಾಯಕನ್ ಪಾಳ್ಯಂ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ನಟ ವಿಜಯ್ ನೇತೃತ್ವದ ತಮಿಳುಕ ವೆಟ್ರಿ ಕಳಗಂ (TVK) ಪಕ್ಷದ ಪ್ರಚಾರ ಕಚೇರಿಯನ್ನು ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟುಹಾಕಿದ್ದಾರೆ.

ಶ್ರೀರಂಗಂ ಕ್ಷೇತ್ರದ ಪಕ್ಷದ ಚುನಾವಣಾ ಕಚೇರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕಟ್ಟಡದ ಪ್ರವೇಶದ್ವಾರದಲ್ಲಿ ನೆರಳು ನೀಡುವ ಹುಲ್ಲಿನ ಛಾವಣಿಗೆ ಬೆಂಕಿ ತಗುಲಿದೆ. ಹೆಚ್ಚಿನ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 23 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮೇ 4 ರಂದು ನಡೆಯಲಿದೆ. ಇದರ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ.

ಸಾಮಾಜಿಕ ಮಾಧ್ಯಮದಲ್ಲಿ, ಇಬ್ಬರು ಅಪರಿಚಿತ ವ್ಯಕ್ತಿಗಳು ಮೋಟಾರ್ ಸೈಕಲ್‌ನಲ್ಲಿ ಪರಾರಿಯಾಗುತ್ತಿರುವ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ. ಇವರೇ ಅಪರಾಧಿಗಳು ಎನ್ನಲಾಗುತ್ತಿದೆ. ಆದಾಗ್ಯೂ, ವೀಡಿಯೊ ದೃಶ್ಯಾವಳಿಯನ್ನು ಇನ್ನೂ ಪರಿಶೀಲಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಿವಿಕೆ ನೀಡಿದ ದೂರಿನ ಆಧಾರದ ಮೇಲೆ, ಪೆಟ್ಟೈವೈತಲೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ!

ಮದ್ಯಪಾನ ಮಾಡಿ ವಿಧಾನಸಭೆಗೆ ಬಂದ್ರಾ ಪಂಜಾಬ್ ಸಿಎಂ ಭಗವಂತ್ ಮಾನ್? ಡೋಪ್ ಪರೀಕ್ಷೆಗೆ ವಿಪಕ್ಷಗಳ ಒತ್ತಾಯ; Video

ಡಿಸಿಎಂ DKS ಪುತ್ರಿಗೆ ಹೆಣ್ಣು ಮಗು ಜನನ: ತಾತನಾದ ಖುಷಿ; ಆಸ್ಪತ್ರೆಗೆ ದೌಡಾಯಿಸಿದ ಡಿ.ಕೆ ಶಿವಕುಮಾರ್

ರಾಹುಲ್ ಗಾಂಧಿಗೆ ಅಲಹಾಬಾದ್ ಹೈಕೋರ್ಟ್ ಬಿಗ್ ರಿಲೀಫ್!

'BJP ಬಂಗಾಳ ಗೆದ್ದರೆ... ನಮಗೆ ಉಳಿಗಾಲವಿಲ್ಲ: ಬಾಂಗ್ಲಾದೇಶ ಸಂಸತ್ತಿನಲ್ಲಿ NCP ಸಂಸದನ ಅಳಲು, Video!

SCROLL FOR NEXT