ಮಳೆಯ ನಡುವೆಯೂ ಜನರು ಸಾಲಿನಲ್ಲಿ ನಿಂತು ತಮ್ಮ ಮತಗಳನ್ನು ಚಲಾಯಿಸಲು ಕಾಯುತ್ತಿದ್ದಾರೆ 
ದೇಶ

West Bengal: ಚುನಾವಣಾ ಅಕ್ರಮ ಪತ್ತೆ; ಪ. ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

ಮಗ್ರಹತ್ ಪಶ್ಚಿಮ್ ವಿಧಾನಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಹಾಗೂ ಡೈಮಂಡ್ ಹಾರ್ಬರ್ ಕ್ಷೇತ್ರದ ನಾಲ್ಕು ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಆದೇಶ ನೀಡಲಾಗಿದೆ.

ಇಂದು ಶನಿವಾರ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿನ 15 ಮತಗಟ್ಟೆಗಳಲ್ಲಿ ಮರು ಮತದಾನ ಬೆಳಗ್ಗೆ 7 ಗಂಟೆಗೆ ಆರಂಭವಾಯಿತು. ಚುನಾವಣಾ ಅಕ್ರಮಗಳ ವರದಿಗಳ ಹಿನ್ನೆಲೆ ಭಾರತೀಯ ಚುನಾವಣಾ ಆಯೋಗ ಮರುಮತದಾನಕ್ಕೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಈ ಮತದಾನ ನಡೆಯುತ್ತಿದೆ.

ಮಗ್ರಹತ್ ಪಶ್ಚಿಮ್ ವಿಧಾನಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಹಾಗೂ ಡೈಮಂಡ್ ಹಾರ್ಬರ್ ಕ್ಷೇತ್ರದ ನಾಲ್ಕು ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಆದೇಶ ನೀಡಲಾಗಿದೆ. ಅಧಿಕಾರಿಯೊಬ್ಬರು ತಿಳಿಸಿದಂತೆ, ಮತದಾನ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದ್ದು, ಸಂಜೆ 6 ಗಂಟೆಯವರೆಗೆ ಮುಂದುವರಿಯಲಿದೆ. ಈ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಏಪ್ರಿಲ್ 29ರಂದು ನಡೆದ ರಾಜ್ಯ ಚುನಾವಣೆಯ ಎರಡನೇ ಹಂತದಲ್ಲಿ ನಡೆಯಿತು.

ಮರುಮತದಾನ ಆದೇಶವು ಕ್ಷೇತ್ರಗಳ ರಿಟರ್ನಿಂಗ್ ಅಧಿಕಾರಿಗಳು ಮತ್ತು ವೀಕ್ಷಕರಿಂದ ಪಡೆದ ವರದಿಗಳು ಹಾಗೂ ವಸ್ತುನಿಷ್ಠ ಪರಿಸ್ಥಿತಿಗಳ ಆಧಾರದ ಮೇಲೆ ಹೊರಡಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಭಾರತೀಯ ಜನತಾ ಪಾರ್ಟಿ ಕೆಲವು ಮತಗಟ್ಟೆಗಳಲ್ಲಿ ವ್ಯಾಪಕ ಚುನಾವಣಾ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದೆ. ಈ ಕ್ಷೇತ್ರಗಳು ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿದ್ದು, ಇದನ್ನು ತೃಣಮೂಲ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಪ್ರತಿನಿಧಿಸುತ್ತಿದ್ದಾರೆ.

ಈ ಆರೋಪಗಳನ್ನು ಸ್ಥಳದಲ್ಲೇ ಪರಿಶೀಲಿಸಲು ಚುನಾವಣಾ ಆಯೋಗವು ತನ್ನ ವಿಶೇಷ ವೀಕ್ಷಕ ಸುಬ್ರತ ಗುಪ್ತ ಅವರನ್ನು ನಿಯೋಜಿಸಿದೆ.

ಇದಲ್ಲದೆ, ಫಾಲ್ತ ವಿಧಾನಸಭಾ ಕ್ಷೇತ್ರದಲ್ಲಿ ಮರುಮತದಾನ ನಡೆಸುವ ಕುರಿತು ಚುನಾವಣಾ ಆಯೋಗ ತೀರ್ಮಾನ ಕೈಗೊಳ್ಳಲಿದೆ.

ಭಾರೀ ಭದ್ರತಾ ವ್ಯವಸ್ಥೆಗಳ ನಡುವೆ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳು ಏಪ್ರಿಲ್ 23 ಮತ್ತು ಏಪ್ರಿಲ್ 29ರಂದು ಎರಡು ಹಂತಗಳಲ್ಲಿ ನಡೆದವು. ಮತ ಎಣಿಕೆ ಮೇ 4ರಂದು ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ಜೊತೆ ಮಾತುಕತೆ ನಡೆಸಲು ಪಾಕಿಸ್ತಾನಿ ಮಧ್ಯವರ್ತಿಗಳಿಗೆ ಹೊಸ ಪ್ರಸ್ತಾವನೆ ಕಳುಹಿಸಿದ ಇರಾನ್!

ನಾಯಕತ್ವ ಬದಲಾವಣೆ ಚರ್ಚೆ ನಡುವೆ ಕೌತುಕ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ-ಬಿ.ಕೆ ಹರಿಪ್ರಸಾದ್ ಮಾತುಕತೆ! Video

IPL 2026: ರಾಹುಲ್ ಭರ್ಜರಿ ಬ್ಯಾಟಿಂಗ್; ರಾಜಸ್ಥಾನ ವಿರುದ್ಧ ಡೆಲ್ಲಿ 7 ವಿಕೆಟ್ ಗೆಲುವು!

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ!

ಕದನ ವಿರಾಮ ಇದ್ದರೂ, ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ನಾಲ್ವರು ಸಾವು!

SCROLL FOR NEXT