ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ನಿವಾಸಿ ಕಟ್ಟಡದಲ್ಲಿ ಅಗ್ನಿ ಅವಘಡ  
ದೇಶ

ಪೂರ್ವ ದೆಹಲಿ: ಎಸಿ ಸ್ಫೋಟದಿಂದ ಅಪಾರ್ಟ್ ಮೆಂಟಿನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಜೀವ ದಹನ -Video

ಈ ಘಟನೆ ನಸುಕಿನ ಜಾವ ಸುಮಾರು 3.48ರ ಸುಮಾರಿಗೆ ವಿವೇಕ್ ವಿಹಾರ್ ಫೇಸ್-1 ರ ನಾಲ್ಕು ಮಹಡಿಗಳ ಕಟ್ಟಡದಲ್ಲಿ ಸಂಭವಿಸಿದ್ದು, ತಕ್ಷಣವೇ ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ.

ಇಂದು ಭಾನುವಾರ ಬೆಳಗಿನ ಜಾವ ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ನಿವಾಸಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ನಸುಕಿನ ಜಾವ ಸುಮಾರು 3.48ರ ಸುಮಾರಿಗೆ ವಿವೇಕ್ ವಿಹಾರ್ ಫೇಸ್-1 ರ ನಾಲ್ಕು ಮಹಡಿಗಳ ಕಟ್ಟಡದಲ್ಲಿ ಸಂಭವಿಸಿದ್ದು, ತಕ್ಷಣವೇ ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ.

ಪೊಲೀಸರ ಪ್ರಕಾರ, ಕಟ್ಟಡದ ಎರಡನೇ, ಮೂರನೇ ಮತ್ತು ನಾಲ್ಕನೇ ಮಹಡಿಗಳಲ್ಲಿರುವ ಫ್ಲ್ಯಾಟ್‌ಗಳಲ್ಲಿ ಬೆಂಕಿ ಆವರಿಸಿಕೊಂಡಿದ್ದು, ದೊಡ್ಡ ಮಟ್ಟದ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಯಿತು.

ಬೆಂಕಿ ಕಾಣಿಸಿಕೊಂಡ ಕಾರಣ ಇನ್ನೂ ತಿಳಿದುಬಂದಿಲ್ಲ.

ಅಗ್ನಿಶಾಮಕ ಕಾರ್ಯಾಚರಣೆಯ ವೇಳೆ ಸುಮಾರು 10 ರಿಂದ 15 ಮಂದಿಯನ್ನು ಸ್ಥಳದಿಂದ ರಕ್ಷಿಸಲಾಗಿದೆ. ಅವರಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದ ಇಬ್ಬರನ್ನು ಗುರು ತೆಗ್ ಬಹಾದೂರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಟ್ಟು 12 ಅಗ್ನಿಶಾಮಕ ವಾಹನಗಳನ್ನು ಬೆಂಕಿ ನಂದಿಸಲು ಬಳಸಲಾಗಿದ್ದು, ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (DDMA), ಸಂಚಾರ ಪೊಲೀಸ್ ಮತ್ತು ಸ್ಥಳೀಯ ಪೊಲೀಸರು ರಕ್ಷಣಾ ಮತ್ತು ಸ್ಥಳಾಂತರ ಕಾರ್ಯದಲ್ಲಿ ಸಹಕರಿಸಿದರು.

ಕೆಲವು ಗಂಟೆಗಳ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಬೆಂಕಿ ಕಾಣಿಸಿಕೊಂಡ ಕಾರಣವನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂದಿನ ಹಂತದ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶೃಂಗೇರಿಯಲ್ಲಿ ಅಂಚೆ ಮತಗಳ ಮರು ಎಣಿಕೆಯಲ್ಲಿ ಮಹತ್ವದ ತಿರುವು, ಡಿ ಜೀವರಾಜ್ ಗೆ ಮುನ್ನಡೆ ?

ಟೆಹ್ರಾನ್ ಶಾಂತಿ ಪ್ರಸ್ತಾವನೆಗೆ ಒಪ್ಪದ ಟ್ರಂಪ್: ಇರಾನ್–ಅಮೆರಿಕ ಸಂಘರ್ಷ ಪುನರಾರಂಭ ಸಾಧ್ಯತೆ, ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ

US-Iran Peace Talks: ಇರಾನ್ ಪ್ರಸ್ತಾವನೆ ಸ್ವೀಕಾರಾರ್ಹವಾಗಿರುತ್ತದೆ ಎಂದೆನಿಸುತ್ತಿಲ್ಲ, ಮರುಪರಿಶೀಲಿಸುತ್ತೇನೆ; ಟ್ರಂಪ್

ಯುದ್ದ ಬಯಸಿದ್ದು ನಾವಲ್ಲ-ಒಂದಿಂಚು ಭೂಮಿಯನ್ನೂ ಬಿಟ್ಟುಕೊಡಲ್ಲ: ಇರಾನ್ ಸರ್ವೋಚ್ಛ ನಾಯಕನ ಪ್ರತಿನಿಧಿ

ಪಶ್ಚಿಮ ಬಂಗಾಳ: ಫಾಲ್ಟಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮೇ 21 ರಂದು ಮರು ಮತದಾನ; ಚುನಾವಣಾ ಆಯೋಗ ಆದೇಶ

SCROLL FOR NEXT