ಪಿಣರಾಯಿ ವಿಜಯನ್ 
ದೇಶ

ಕೇರಳ ಚುನಾವಣೆಯಲ್ಲಿ ಹೀನಾಯ ಸೋಲು: ಸಿಎಂ ಸ್ಥಾನಕ್ಕೆ ಪಿಣರಾಯಿ ವಿಜಯನ್ ರಾಜೀನಾಮೆ!

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, 140 ಸದಸ್ಯರ ವಿಧಾನಸಭೆಯಲ್ಲಿ ಯುಡಿಎಫ್ 102 ಸ್ಥಾನಗಳನ್ನು ಗೆದ್ದಿದೆ. ಆದರೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನೇತೃತ್ವದ LDF 35 ಸ್ಥಾನಗಳನ್ನು ಗೆದ್ದಿದೆ.

ತಿರುವನಂತಪುರ: ಏಪ್ರಿಲ್ 9 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ (LDF) ಹೀನಾಯ ಸೋಲಿನ ನಂತರ, ಪಿಣರಾಯಿ ವಿಜಯನ್ ಸೋಮವಾರ ಕೇರಳ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಒಂದು ದಶಕದ ಕಾಲದ ಅವರ ಅಧಿಕಾರಾವಧಿ ಅಂತ್ಯಗೊಂಡಿದೆ.

ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ರಾಜೀನಾಮೆಯನ್ನು ಅಂಗೀಕರಿಸಿದ್ದು, ಪರ್ಯಾಯ ವ್ಯವಸ್ಥೆ ಮಾಡುವವರೆಗೆ ವಿಜಯನ್ ಅವರನ್ನು ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ಸೂಚಿಸಿದ್ದಾರೆ ಎಂದು ರಾಜ್ ಭವನ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ 10 ವರ್ಷಗಳಲ್ಲಿ ಸತತ ಎರಡು ಅವಧಿಗೆ ರಾಜ್ಯವನ್ನು ಮುನ್ನಡೆಸಿದ ವಿಜಯನ್, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ (UDF) ಅದ್ಭುತ ಗೆಲುವು ಸಾಧಿಸಿದ ನಂತರ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, 140 ಸದಸ್ಯರ ವಿಧಾನಸಭೆಯಲ್ಲಿ ಯುಡಿಎಫ್ 102 ಸ್ಥಾನಗಳನ್ನು ಗೆದ್ದಿದೆ. ಆದರೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನೇತೃತ್ವದ LDF 35 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಮೂರು ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಖಾತೆ ತೆರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!