ಸುವೇಂದು ಅಧಿಕಾರಿ-ಮಮತಾ ಬ್ಯಾನರ್ಜಿ online desk
ದೇಶ

ಮುಸ್ಲಿಮರ ಮತ ಹಿಜಾಬ್ ಧರಿಸುವ ಮಮತಾ ಗೆ ಹೋಗಿವೆ, ನಾನು ಹಿಂದೂಗಳಿಗಾಗಿ ಕೆಲಸ ಮಾಡುತ್ತೇನೆ: ಬಿಜೆಪಿ ನಾಯಕ ಸುವೇಂದು ಅಧಿಕಾರಿ! Video

ಈ ಭ್ರಷ್ಟ, ಕುಟುಂಬ ಆಧಾರಿತ ಪಕ್ಷಕ್ಕೆ ಯಾವುದೇ ಸಿದ್ಧಾಂತವಿಲ್ಲ. ಗೃಹ ಸಚಿವ ಅಮಿತ್ ಶಾ ಪ್ರಣಾಳಿಕೆಯಲ್ಲಿ ಘೋಷಿಸಿದ ಮತ್ತು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ ಕೆಲಸವನ್ನು ನಾವು ಮಾಡುತ್ತೇವೆ- ಸುವೇಂದು ಅಧಿಕಾರಿ

ಕೋಲ್ಕತ್ತಾ: ಭವಾನಿಪುರ ಮತ್ತು ನಂದಿಗ್ರಾಮ ಎರಡರಿಂದಲೂ ಗೆಲುವು ಸಾಧಿಸಿದ ನಂತರ, ಸುವೇಂದು ಅಧಿಕಾರಿ ನಂದಿಗ್ರಾಮದಲ್ಲಿ ತಮ್ಮ ಗೆಲುವಿಗೆ ಹಿಂದೂ ಮತದಾರರ ಬಲವಾದ ಬೆಂಬಲ ಕಾರಣ ಎಂದು ತೃಣಮೂಲ ಕಾಂಗ್ರೆಸ್ ಮೇಲೆ ತೀವ್ರ ದಾಳಿ ನಡೆಸಿದರು.

“ಈ ಬಾರಿ ನಾನು ಸುಮಾರು ಹತ್ತು ಸಾವಿರ ಮತಗಳಿಂದ ಚುನಾವಣೆಯಲ್ಲಿ ಗೆದ್ದೆ. ನಂದಿಗ್ರಾಮದ ಹಿಂದೂ ಜನರು ನನ್ನನ್ನು ಮತ್ತೆ ಗೆಲ್ಲಿಸಿದರು. ಅಲ್ಲಿ, ಇಡೀ ಮುಸ್ಲಿಂ ಮತಗಳು ಟಿಎಂಸಿಗೆ ಹೋದವು. ನಾನು ನಂದಿಗ್ರಾಮದ ಹಿಂದೂಗಳಿಗಾಗಿ ಕೆಲಸ ಮಾಡುತ್ತೇನೆ. ಟಿಎಂಸಿ ಮುಗಿಯುತ್ತದೆ. 24 ಗಂಟೆಗಳಲ್ಲಿ ಅದು ನಾಶವಾಗುತ್ತದೆ.

ಈ ಭ್ರಷ್ಟ, ಕುಟುಂಬ ಆಧಾರಿತ ಪಕ್ಷಕ್ಕೆ ಯಾವುದೇ ಸಿದ್ಧಾಂತವಿಲ್ಲ. ಗೃಹ ಸಚಿವ ಅಮಿತ್ ಶಾ ಪ್ರಣಾಳಿಕೆಯಲ್ಲಿ ಘೋಷಿಸಿದ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತೆ ಮತ್ತೆ ಭರವಸೆ ನೀಡಿದ ಕೆಲಸವನ್ನು ನಾವು ಮಾಡುತ್ತೇವೆ. ನಾವು ಅದನ್ನು ಪೂರ್ಣಗೊಳಿಸುತ್ತೇವೆ.” ಎಂದು ಹೇಳಿದ್ದಾರೆ.

ನಂದಿಗ್ರಾಮದಲ್ಲಿ 66 ಸಾವಿರ ಮುಸ್ಲಿಮರಿದ್ದರೆ, ಭವಾನಿಪುರದಲ್ಲಿ 35 ಸಾವಿರ ಮುಸ್ಲಿಮರಿದ್ದಾರೆ. ಆದ್ದರಿಂದಲೇ ಭವಾನಿಪುರದಲ್ಲಿ ನನ್ನ ಗೆಲುವಿನ ಅಂತರ ನಂದಿಗ್ರಾಮದಲ್ಲಿ ದಾಖಲಾಗಿದ್ದಕ್ಕಿಂತ ಹೆಚ್ಚಿದೆ, ಮುಸ್ಲಿಮರು ಹಿಜಾಬಿ ಮಮತಾ ಗೆ ಮತ ಹಾಕಿದ್ದಾರೆ. ಮುಸ್ಲಿಮರು ಮಮತಾ ಬ್ಯಾನರ್ಜಿಗೆ ಮತ ಹಾಕಿದರೆ, ಹಿಂದೂಗಳು, ಬೌದ್ಧರು, ಸಿಖ್ಖರು ನನಗೆ ಮತ ಹಾಕಿದ್ದಾರೆ. ಅಷ್ಟೇ ಅಲ್ಲದೇ 10 ಸಾವಿರ ಸಿಪಿಎಂ ಮತಗಳನ್ನು ನ್ನಪರ ತಿರುಗಿಸಿದ್ದಕ್ಕಾಗಿ ತಳಮಟ್ಟದ ಸಿಪಿಎಂ ಕಾರ್ಯಕರ್ತರಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್