ನಿತೀಶ್ ಕುಮಾರ್ - ಪುತ್ರ ನಿಶಾಂತ್ ಕುಮಾರ್ 
ದೇಶ

ಕೊನೆಗೂ ಬಿಹಾರ ಸಂಪುಟ ಸೇರಲು ನಿತೀಶ್ ಕುಮಾರ್ ಪುತ್ರ ಒಪ್ಪಿಗೆ; ನೂತನ ಸಚಿವರಾಗಿ ನಾಳೆ ಪ್ರಮಾಣ ಸಾಧ್ಯತೆ

ಎರಡು ತಿಂಗಳ ಹಿಂದೆಯೇ ಜೆಡಿಯು ಸೇರಿದ 45 ವರ್ಷದ ನಾಯಕ ನಿಶಾಂತ್ ಅವರು ಪಕ್ಷದ ಹಿರಿಯ ಕಾರ್ಯಕರ್ತರ ಮನವೊಲಿಕೆಗೆ ಮಣಿದು, ಚೌಧರಿ ಸಂಪುಟ ಸೇರಲು ಒಪ್ಪಿಕೊಂಡಿದ್ದಾರೆ.

ಪಾಟ್ನಾ: ಜೆಡಿಯು ಅಧ್ಯಕ್ಷ, ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಅವರು ಕೊನೆಗೂ ಸಾಮ್ರಾಟ್ ಚೌಧರಿ ಸಂಪುಟ ಸೇರಲು ಒಪ್ಪಿಕೊಂಡಿದ್ದಾರೆ ಮತ್ತು ಗುರುವಾರ ನಡೆಯಲಿರುವ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಅವರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಎರಡು ತಿಂಗಳ ಹಿಂದೆಯೇ ಜೆಡಿಯು ಸೇರಿದ 45 ವರ್ಷದ ನಾಯಕ ನಿಶಾಂತ್ ಅವರು ಪಕ್ಷದ ಹಿರಿಯ ಕಾರ್ಯಕರ್ತರ ಮನವೊಲಿಕೆಗೆ ಮಣಿದು, ಚೌಧರಿ ಸಂಪುಟ ಸೇರಲು ಒಪ್ಪಿಕೊಂಡಿದ್ದಾರೆ.

"ನಿಶಾಂತ್ ಅವರು ಪಕ್ಷಕ್ಕೆ ಸೇರಿದಾಗಿನಿಂದ, ಅವರು ಸರ್ಕಾರ ಸೇರಬೇಕೆಂಬುದು ಕಾರ್ಯಕರ್ತರ ಆಶಯವಾಗಿತ್ತು. ಕಳೆದ ತಿಂಗಳು ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಬಹುದಿತ್ತು. ಆದರೆ ಅವರು ಹಿಂಜರಿಯುತ್ತಿದ್ದರು. ಅಂತಿಮವಾಗಿ, ಅವರು ಒಪ್ಪಿಕೊಂಡಿದ್ದಾರೆ" ಎಂದು ಮೂಲಗಳು ಬುಧವಾರ ಪಿಟಿಐಗೆ ತಿಳಿಸಿವೆ.

ನಿತೀಶ್ ಕುಮಾರ್ ಅವರು ರಾಜ್ಯಸಭಾ ಸದಸ್ಯರಾಗಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಎಂಜಿನಿಯರಿಂಗ್ ಪದವೀಧರರಾದ ನಿಶಾಂತ್ ಕುಮಾರ್ ಅವರು ರಾಜಕೀಯ ಪ್ರವೇಶ ಮಾಡಿದ್ದಾರೆ.

ಕುಮಾರ್ ರಾಜೀನಾಮೆ ನೀಡಿದ ನಂತರ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ನೇತೃತ್ವದಲ್ಲಿ ಹೊಸ ಸರ್ಕಾರ ಸ್ಥಾಪನೆಯಾದಾಗ, ಜೆಡಿ(ಯು) ವರಿಷ್ಠ ನಿತೀಶ್ ಕುಮಾರ್ ಅವರ ಉತ್ತರಾಧಿಕಾರಿ ಸಚಿವ ಸಂಪುಟ ಸೇರುತ್ತಾರೆ ಎಂಬ ಊಹಾಪೋಹಗಳು ಹರಡಿದ್ದವು. ಆದಾಗ್ಯೂ, ನಿಶಾಂತ್ ಅದನ್ನು ನಿರಾಕರಿಸಿದರು. ದೊಡ್ಡ ಹುದ್ದೆ ವಹಿಸಿಕೊಳ್ಳುವ ಮುನ್ನ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಲು ಬಯಸುತ್ತೇನೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು; ಇಂದಿರಾನಗರ - ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತ!

ಅಮೆರಿಕ- ಇರಾನ್ ಶಾಂತಿ ಒಪ್ಪಂದ: ಜೂನ್ 17 ರಿಂದ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 11 ಹಡಗುಗಳು! ಇನ್ನೂ ಎಷ್ಟಿವೆ ಗೊತ್ತಾ?

ಬೆಂಗಳೂರು ಮೂಲದ CRED ನಲ್ಲಿ Meta ಹೂಡಿಕೆ: ವಾಟ್ಸಾಪ್ ನ ಜಾಗತಿಕ ಮುಖ್ಯಸ್ಥರಾಗಿ ಶಾ ನೇಮಕಕ್ಕೆ ಕಾರಣಗಳೇನು?PhonePe, GooglePayಗೆ ಬೀಳುತ್ತಾ ಹೊಡೆತ?

ಮುಖ್ಯಮಂತ್ರಿ ಸಿ. ವಿಜಯ್ ಹುಟ್ಟುಹಬ್ಬ: ಎಲ್ಲಾ ವದಂತಿಗಳಿಗೆ ತೆರೆ ಎಳೆದ ಆಪ್ತ ಗೆಳತಿ ತ್ರಿಶಾ ಕೃಷ್ಣನ್!

ಉದ್ಧವ್ ಸೇನೆ ತೊರೆದು ಶಿಂಧೆ ಸೇನೆ ಸೇರಿದ ಬಂಡಾಯ ಸಂಸದರಿಗೆ ಬಂಪರ್ ಗಿಫ್ಟ್; ಅಭಿವೃದ್ಧಿ ಹಣ ಬಿಡುಗಡೆ