ನಿತೀಶ್ ಕುಮಾರ್ - ಪುತ್ರ ನಿಶಾಂತ್ ಕುಮಾರ್ 
ದೇಶ

ಕೊನೆಗೂ ಬಿಹಾರ ಸಂಪುಟ ಸೇರಲು ನಿತೀಶ್ ಕುಮಾರ್ ಪುತ್ರ ಒಪ್ಪಿಗೆ; ನೂತನ ಸಚಿವರಾಗಿ ನಾಳೆ ಪ್ರಮಾಣ ಸಾಧ್ಯತೆ

ಎರಡು ತಿಂಗಳ ಹಿಂದೆಯೇ ಜೆಡಿಯು ಸೇರಿದ 45 ವರ್ಷದ ನಾಯಕ ನಿಶಾಂತ್ ಅವರು ಪಕ್ಷದ ಹಿರಿಯ ಕಾರ್ಯಕರ್ತರ ಮನವೊಲಿಕೆಗೆ ಮಣಿದು, ಚೌಧರಿ ಸಂಪುಟ ಸೇರಲು ಒಪ್ಪಿಕೊಂಡಿದ್ದಾರೆ.

ಪಾಟ್ನಾ: ಜೆಡಿಯು ಅಧ್ಯಕ್ಷ, ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಅವರು ಕೊನೆಗೂ ಸಾಮ್ರಾಟ್ ಚೌಧರಿ ಸಂಪುಟ ಸೇರಲು ಒಪ್ಪಿಕೊಂಡಿದ್ದಾರೆ ಮತ್ತು ಗುರುವಾರ ನಡೆಯಲಿರುವ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಅವರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಎರಡು ತಿಂಗಳ ಹಿಂದೆಯೇ ಜೆಡಿಯು ಸೇರಿದ 45 ವರ್ಷದ ನಾಯಕ ನಿಶಾಂತ್ ಅವರು ಪಕ್ಷದ ಹಿರಿಯ ಕಾರ್ಯಕರ್ತರ ಮನವೊಲಿಕೆಗೆ ಮಣಿದು, ಚೌಧರಿ ಸಂಪುಟ ಸೇರಲು ಒಪ್ಪಿಕೊಂಡಿದ್ದಾರೆ.

"ನಿಶಾಂತ್ ಅವರು ಪಕ್ಷಕ್ಕೆ ಸೇರಿದಾಗಿನಿಂದ, ಅವರು ಸರ್ಕಾರ ಸೇರಬೇಕೆಂಬುದು ಕಾರ್ಯಕರ್ತರ ಆಶಯವಾಗಿತ್ತು. ಕಳೆದ ತಿಂಗಳು ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಬಹುದಿತ್ತು. ಆದರೆ ಅವರು ಹಿಂಜರಿಯುತ್ತಿದ್ದರು. ಅಂತಿಮವಾಗಿ, ಅವರು ಒಪ್ಪಿಕೊಂಡಿದ್ದಾರೆ" ಎಂದು ಮೂಲಗಳು ಬುಧವಾರ ಪಿಟಿಐಗೆ ತಿಳಿಸಿವೆ.

ನಿತೀಶ್ ಕುಮಾರ್ ಅವರು ರಾಜ್ಯಸಭಾ ಸದಸ್ಯರಾಗಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಎಂಜಿನಿಯರಿಂಗ್ ಪದವೀಧರರಾದ ನಿಶಾಂತ್ ಕುಮಾರ್ ಅವರು ರಾಜಕೀಯ ಪ್ರವೇಶ ಮಾಡಿದ್ದಾರೆ.

ಕುಮಾರ್ ರಾಜೀನಾಮೆ ನೀಡಿದ ನಂತರ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ನೇತೃತ್ವದಲ್ಲಿ ಹೊಸ ಸರ್ಕಾರ ಸ್ಥಾಪನೆಯಾದಾಗ, ಜೆಡಿ(ಯು) ವರಿಷ್ಠ ನಿತೀಶ್ ಕುಮಾರ್ ಅವರ ಉತ್ತರಾಧಿಕಾರಿ ಸಚಿವ ಸಂಪುಟ ಸೇರುತ್ತಾರೆ ಎಂಬ ಊಹಾಪೋಹಗಳು ಹರಡಿದ್ದವು. ಆದಾಗ್ಯೂ, ನಿಶಾಂತ್ ಅದನ್ನು ನಿರಾಕರಿಸಿದರು. ದೊಡ್ಡ ಹುದ್ದೆ ವಹಿಸಿಕೊಳ್ಳುವ ಮುನ್ನ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಲು ಬಯಸುತ್ತೇನೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!