ನಟ ವಿಜಯ್ ಮತ್ತು ಎಂಕೆ ಸ್ಟಾಲಿನ್ 
ದೇಶ

ಸರ್ಕಾರ ರಚನೆಗೆ DMK ಮಿತ್ರ ಪಕ್ಷಗಳತ್ತ ವಿಜಯ್ ಕಣ್ಣು; ಕಾಂಗ್ರೆಸ್ ಬಳಿಕ VCK, CPM ಮತ್ತು CBI ಬೆಂಬಲ ಕೋರಿದ TVK!

ನಟ ವಿಜಯ್ ಅವರೇ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿರುವುದರಿಂದ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೂ, 107 ಶಾಸಕರು ಮಾತ್ರ ಇದ್ದಾರೆ.

ಚೆನ್ನೈ: 11 ಸ್ಥಾನಗಳ ಕೊರತೆಯಿರುವ ವಿಜಯ್ ನೇತೃತ್ವದ ಟಿವಿಕೆ ಇದೀಗ ಸರ್ಕಾರ ರಚನೆಗೆ ಬೆಂಬಲ ಕೋರಿ ಬುಧವಾರ ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಸಿಪಿಎಂ ಮತ್ತು ಸಿಪಿಐಗೆ ಔಪಚಾರಿಕವಾಗಿ ಪತ್ರ ಬರೆದಿದೆ.

ನಟ ವಿಜಯ್ ಅವರೇ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿರುವುದರಿಂದ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೂ, 107 ಶಾಸಕರು ಮಾತ್ರ ಇದ್ದಾರೆ.

ಪಕ್ಷಕ್ಕೆ ಬೆಂಬಲ ನೀಡುವಂತೆ ಕೋರಿ ಟಿವಿಕೆಯಿಂದ ಪತ್ರ ಬಂದಿರುವುದನ್ನು ಅಧಿಕೃತ ವಿಸಿಕೆ ಮೂಲಗಳು ದೃಢಪಡಿಸಿವೆ.

ಆದಾಗ್ಯೂ, ಗುರುವಾರ ಚೆನ್ನೈನಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ಪಕ್ಷವು ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ವಿಸಿಕೆಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಈಮಧ್ಯೆ, ಟಿವಿಕೆಗೆ ಬೆಂಬಲ ನೀಡುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಲುವಾಗಿ ಸಿಪಿಐ ಮತ್ತು ಸಿಪಿಎಂ ಮುಂದಿನ ಒಂದೆರಡು ದಿನಗಳಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ಕರೆಯಲಿವೆ ಎನ್ನಲಾಗಿದೆ.

ಸರ್ಕಾರ ರಚಿಸಲು ಟಿವಿಕೆಗೆ ಕಾಂಗ್ರೆಸ್ ಔಪಚಾರಿಕವಾಗಿ ಬೆಂಬಲ ನೀಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದ್ದು, ವಿಜಯ್ ಅವರ ಪಕ್ಷವು ಅಧಿಕಾರಕ್ಕೆ ಬರುವ ಪ್ರಯತ್ನದಲ್ಲಿ ಇದು ನಿರ್ಣಾಯಕ ಹೆಜ್ಜೆಯಾಗಿದೆ.

ತಮಿಳುನಾಡಿನ ಚುನಾವಣೆಯಲ್ಲಿ ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದರೆ, ವಿಸಿಕೆ, ಸಿಪಿಎಂ ಮತ್ತು ಸಿಪಿಐ ತಲಾ ಎರಡು ಸ್ಥಾನಗಳನ್ನು ಗೆದ್ದಿವೆ. ಟಿವಿಕೆ ಬಹುಮತವನ್ನು ತಲುಪಲು ಒಟ್ಟು 11 ಸ್ಥಾನಗಳ ಅಗತ್ಯವಿದೆ.

ಈಮಧ್ಯೆ, ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಇಂದು ಮಧ್ಯಾಹ್ನದ ವೇಳೆಗೆ ಚೆನ್ನೈ ತಲುಪಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್​ ಟ್ವಿಸ್ಟ್: TVK ಬೆಂಬಲಿಸಲು ಕಾಂಗ್ರೆಸ್ ನಿರ್ಧಾರ; DMK ಮೈತ್ರಿಗೆ ಭಾರಿ ಶಾಕ್, ಹೊಸ ಮೈತ್ರಿ ಸರ್ಕಾರ ಅಧಿಕಾರಕ್ಕೆ..!

TVK ಎದುರು ಹೀನಾಯ ಸೋಲು; ಪ್ರಜಾಪ್ರಭುತ್ವದಲ್ಲಿ ಸಾಮಾನ್ಯ: ಮತ್ತೆ ಗೆಲ್ಲುತ್ತೇವೆ, 1996ರ ಇತಿಹಾಸ ಮರುಕಳಿಸಲಿದೆ- DMK

TVK ಬೆಂಬಲ ವಿಷಯವಾಗಿ ಮೈತ್ರಿಯಲ್ಲಿ ಬಿರುಕು: DMK ಬೆನ್ನಿಗೆ ಕಾಂಗ್ರೆಸ್ ಚೂರಿ? AIADMKಯಲ್ಲೂ ಭುಗಿಲೆದ್ದ ಅಸಮಾಧಾನ!

ಸಿಎಂ ಹುದ್ದೆ ತ್ಯಾಗಕ್ಕೆ ಸಿದ್ದರಾಮಯ್ಯ ಸಿದ್ದ: ಹೈಕಮಾಂಡ್ ಆದೇಶಕ್ಕೆ ಪರಮೇಶ್ವರ್ ಬದ್ಧ; ಮುಖ್ಯಮಂತ್ರಿ ಸ್ಥಾನ ಒಲ್ಲೆ ಎಂದಿದ್ದೇಕೆ ಖರ್ಗೆ?

ಸೋಲು ಬಳಿಕವೂ ಹಠಕ್ಕೆ ಬಿದ್ದ ಮಮತಾ ಬ್ಯಾನರ್ಜಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ, ಒದ್ದು ಹೊರಹಾಕಿ ಎಂದು ಜೇಠ್ಮಲಾನಿ ಕಿಡಿ

SCROLL FOR NEXT