ಮಮತಾ ಬ್ಯಾನರ್ಜಿ  
ದೇಶ

'ಜಪ್ಪಯ್ಯ ಅಂದರೂ ಸಿಎಂ ಸ್ಥಾನದಿಂದ ಕೆಳಗಿಳಿಯುವುದಿಲ್ಲ, ಬೇಕಾದರೆ ಕೇಂದ್ರ ಸರ್ಕಾರವೇ ನನ್ನನ್ನು ವಜಾ ಮಾಡಲಿ': ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶಗಳ ನಂತರ ಇಂಡಿಯಾ ಮೈತ್ರಿಕೂಟದಲ್ಲಿ ಇನ್ನಷ್ಟು ಏಕತೆ ಮೂಡಿದೆ ಎಂದೂ ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ನಿರ್ಗಮಿತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷದ ಹೊಸದಾಗಿ ಆಯ್ಕೆಯಾದ ಶಾಸಕರ ಸಭೆಯನ್ನುದ್ದೇಶಿಸಿ ನಿನ್ನೆ ಮಾತನಾಡಿ ಮತ್ತೆ ಬಿಜೆಪಿ ವಿರುದ್ಧ ಗುಡುಗಿದ್ದಾರೆ. ವಿಧಾನಸಭೆ ಚುನಾವಣಾ ಫಲಿತಾಂಶಗಳ ಹಿನ್ನೆಲೆಯಲ್ಲಿ ತಾವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ, ಬೇಕಾದರೆ ಕೇಂದ್ರ ಸರ್ಕಾರವೇ ವಜಾ ಮಾಡಲಿ ಎಂದು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬಲವಂತವಾಗಿ ಸೋಲಿಸಲಾಗಿದೆ ಎಂದು ಅವರು ಹೇಳಿದ್ದು, 1500ಕ್ಕೂ ಹೆಚ್ಚು ತೃಣಮೂಲ ಕಾಂಗ್ರೆಸ್ ಕಚೇರಿಗಳನ್ನು ಕಬಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಬಂಗಾಳ ಚುನಾವಣಾ ಫಲಿತಾಂಶಗಳ ನಂತರ ಇಂಡಿಯಾ ಮೈತ್ರಿಕೂಟದಲ್ಲಿ ಇನ್ನಷ್ಟು ಏಕತೆ ಮೂಡಿದೆ ಎಂದೂ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಚುನಾವಣೆ ನಡೆದಿಲ್ಲ, ದೌರ್ಜನ್ಯ ನಡೆದಿದೆ ಎಂದು ಆರೋಪಿಸಿದ ಅವರು, ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ತೃಣಮೂಲ ಕಾಂಗ್ರೆಸ್ ನೈತಿಕ ಜಯ ಸಾಧಿಸಿದೆ, ನಾನು ಹೋರಾಟ ಮುಂದುವರಿಸುತ್ತೇನೆ ಎಂದೂ ತಿಳಿಸಿದ್ದಾರೆ.

ಬಂಗಾಳದ ನಂತರ ಇಂಡಿಯಾ ತಂಡ ಈಗ ಏಕತೆಯಾಗಿದೆ. ನಾನು ರಾಜೀನಾಮೆ ನೀಡುವುದಿಲ್ಲ. ಬೇಕಾದರೆ ಅವರು ನನ್ನನ್ನು ವಜಾ ಮಾಡಲಿ. ಈ ದಿನವನ್ನು ಕಪ್ಪು ದಿನವಾಗಿ ಆಚರಿಸಬೇಕು. ನಾವು ಬಲವಾಗಿರಬೇಕು. ವಿಧಾನಸಭೆಯ ಮೊದಲ ದಿನ ಕಪ್ಪು ಬಟ್ಟೆ ಧರಿಸಿ ಬನ್ನಿ. ದ್ರೋಹ ಮಾಡಿದವರನ್ನು ಪಕ್ಷದಿಂದ ತೆಗೆದುಹಾಕಲಾಗುವುದು. ನನಗೆ ಬೇಸರವೇನೂ ಇಲ್ಲ, ನಾನು ಅವರನ್ನು ನೈತಿಕವಾಗಿ ಸೋಲಿಸಿದ್ದೇನೆ. ನಾನು ಇಂದು ಸ್ವತಂತ್ರ ಹಕ್ಕಿ. ಎಲ್ಲರಿಗಾಗಿ ಕೆಲಸ ಮಾಡಿದ್ದೇನೆ. ನಾವು ಸೋತಿರಬಹುದು, ಆದರೆ ಹೋರಾಟ ಮುಂದುವರಿಸುತ್ತೇವೆ. ಗೃಹ ಸಚಿವರು ಮತ್ತು ಪ್ರಧಾನಮಂತ್ರಿಗಳು ನೇರವಾಗಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬಲವಂತವಾಗಿ ಸೋಲಿಸಲಾಗಿದೆ. ಪಶ್ಚಿಮ ಬಂಗಾಳ ಪೊಲೀಸ್, ಸಿಆರ್ ಪಿಎಫ್, ಬಿಜೆಪಿ ಮನೋಭಾವದ ಮುಖ್ಯ ಚುನಾವಣಾಧಿಕಾರಿ ಹಾಗೂ ಚುನಾವಣಾ ಆಯೋಗವನ್ನು ನಾನು ಖಂಡಿಸುತ್ತೇನೆ. 1500ಕ್ಕೂ ಹೆಚ್ಚು ಪಕ್ಷದ ಕಚೇರಿಗಳನ್ನು ಕಬಳಿಸಲಾಗಿದೆ. ನನ್ನನ್ನು ಅಂದು ತಳ್ಳಿದ್ದರಿಂದ ಎದೆನೋವು ಕಾಣಿಸಿಕೊಂಡಿತು. ಇದು ಚುನಾವಣೆ ಅಲ್ಲ, ದೌರ್ಜನ್ಯ ಎಂದು ಎಐಟಿಸಿ ಮೂಲಗಳ ಪ್ರಕಾರ ಅವರು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲು ನಿರಾಕರಿಸಿರುವುದು ರಾಜ್ಯದಲ್ಲಿ ಅಪೂರ್ವ ಪರಿಸ್ಥಿತಿಯನ್ನು ಹಾಗೂ ಒಂದು ರೀತಿಯ ಸಂವಿಧಾನಾತ್ಮಕ ಸಂಕಷ್ಟವನ್ನು ಸೃಷ್ಟಿಸಿದೆ.

207 ಸ್ಥಾನಗಳನ್ನು ಗೆದ್ದು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಭಾರತೀಯ ಜನತಾ ಪಾರ್ಟಿ ಸರ್ಕಾರ ರಚನೆಗೆ ಸಿದ್ಧತೆಗಳನ್ನು ಮುಂದುವರಿಸಿದೆ. ಇದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮೊದಲ ಬಾರಿಗೆ ರಚಿಸುತ್ತಿರುವ ಸರ್ಕಾರವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Operation Sindoorಗೆ 1 ವರ್ಷ: 'ಭಾರತ ಯಾವುದನ್ನೂ ಮರೆಯಲ್ಲ-ಯಾರನ್ನೂ ಕ್ಷಮಿಸಲ್ಲ'; ಶತ್ರುರಾಷ್ಟ್ರಕ್ಕೆ ಕಠಿಣ ಸಂದೇಶ ರವಾನಿಸಿದ ಭಾರತೀಯ ಸೇನೆ

ಹಾರ್ಮುಜ್ ನೌಕಾ ದಿಗ್ಬಂಧನ ಉಲ್ಲಂಘನೆ ಆರೋಪ; ಇರಾನ್ ಹಡಗಿನ ಮೇಲೆ ದಾಳಿ, ಅಮೆರಿಕಾ-ಇರಾನ್ ಸಂಘರ್ಷ ತೀವ್ರ..!

Kolkata: ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಿಎ ಗುಂಡೇಟಿಗೆ ಬಲಿ!

ವಿಜಯ್ ಸಿಎಂ ಕನಸಿಗೆ ತಣ್ಣೀರು?: ತಮಿಳುನಾಡಿನಲ್ಲಿ ರಾಜಕೀಯ ಸಂಚಲನ, DMK-AIADMK ಮೈತ್ರಿ ಸರ್ಕಾರ ರಚನೆ?

ವಿಜಯ್ ಗೆ ಬೆಂಬಲ ನೀಡಲ್ಲ- ಎಡಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್; ನಾವು ಇನ್ನೂ ನಿರ್ಧರಿಸಿಲ್ಲ- ವಿಸಿಕೆ

SCROLL FOR NEXT