ಏಕನಾಥ್ ಶಿಂಧೆ 
ದೇಶ

ಮಹಾರಾಷ್ಟ್ರ ಡಿಸಿಎಂ Eknath Shinde ಇದ್ದ ಹೆಲಿಕಾಪ್ಟರ್ ದಾರಿ ತಪ್ಪಿ ಅವಘಡ; ಪೈಲಟ್ ಸಮಯ ಪ್ರಜ್ಞೆ, ಸುರಕ್ಷಿತ ಲ್ಯಾಂಡಿಂಗ್; Video!

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಪ್ರಯಾಣಿಸುತ್ತಿದ್ದ ವಿಮಾನವು ಹಾರಾಟದ ವೇಳೆ ಕೆಲಕಾಲ ದಾರಿ ತಪ್ಪಿದ ಘಟನೆ ನಡೆದಿದೆ.

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಪ್ರಯಾಣಿಸುತ್ತಿದ್ದ ವಿಮಾನವು ಹಾರಾಟದ ವೇಳೆ ಕೆಲಕಾಲ ದಾರಿ ತಪ್ಪಿದ ಘಟನೆ ನಡೆದಿದೆ. ಆದರೆ ಪೈಲಟ್‌ನ ಸಮಯಪ್ರಜ್ಞೆ ಮತ್ತು ಚಾಕಚಕ್ಯತೆಯಿಂದ ವಿಮಾನವನ್ನು ಸುರಕ್ಷಿತವಾಗಿ Juhu Airport ನಲ್ಲಿ ಇಳಿಸಲಾಗಿದ್ದು, ಸಂಭವನೀಯ ಅನಾಹುತ ತಪ್ಪಿದೆ.

ಮೂಲಗಳ ಪ್ರಕಾರ, ಹವಾಮಾನ ಹಾಗೂ ತಾಂತ್ರಿಕ ಸಂವಹನದ ಅಡಚಣೆಗಳಿಂದ ವಿಮಾನದ ದಿಕ್ಕಿನಲ್ಲಿ ಗೊಂದಲ ಉಂಟಾಗಿತ್ತು ಎನ್ನಲಾಗಿದೆ. ಪರಿಸ್ಥಿತಿಯನ್ನು ಗಮನಿಸಿದ ಪೈಲಟ್ ತಕ್ಷಣವೇ ವಿಮಾನ ನಿಯಂತ್ರಣ ಕೇಂದ್ರದೊಂದಿಗೆ ಸಂಪರ್ಕ ಸಾಧಿಸಿ, ಸುರಕ್ಷಿತ ಮಾರ್ಗದರ್ಶನದ ಮೂಲಕ ವಿಮಾನವನ್ನು ಜುಹು ವಿಮಾನ ನಿಲ್ದಾಣದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಮಾಡಿದ್ದಾರೆ.

ಘಟನೆ ವೇಳೆ ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಸುರಕ್ಷಿತ ಲ್ಯಾಂಡಿಂಗ್ ಬಳಿಕ ಎಲ್ಲರೂ ನಿಟ್ಟುಸಿರು ಬಿಟ್ಟರು. ಉಪ ಮುಖ್ಯಮಂತ್ರಿ ಶಿಂಧೆ ಅವರು ಸಹ ಪೈಲಟ್‌ನ ತಕ್ಷಣದ ನಿರ್ಧಾರ ಮತ್ತು ಕಾರ್ಯಕ್ಷಮತೆಯನ್ನು ಮೆಚ್ಚಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಕುರಿತು ವಿಮಾನಯಾನ ಅಧಿಕಾರಿಗಳು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ತಾಂತ್ರಿಕ ಮತ್ತು ಹವಾಮಾನ ಸಂಬಂಧಿತ ಅಂಶಗಳ ಪರಿಶೀಲನೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 100ಕ್ಕೆ ಏರಿಕೆ, ಹಲವರಿಗೆ ಗಾಯ

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!