ಮೋದಿ ಸಮ್ಮುಖದಲ್ಲಿ ಬಿಹಾರ ಸಂಪುಟ ವಿಸ್ತರಣೆ 
ದೇಶ

ಮೋದಿ ಸಮ್ಮುಖದಲ್ಲಿ ಬಿಹಾರ ಸಂಪುಟ ವಿಸ್ತರಣೆ: ನಿತೀಶ್ ಕುಮಾರ್ ಪುತ್ರ ಸೇರಿ 32 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ, ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭಾಗವಹಿಸಿದ್ದರು.

ಪಾಟ್ನಾ: ಜೆಡಿಯು ಅಧ್ಯಕ್ಷ, ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಸೇರಿದಂತೆ NDAನ 32 ನಾಯಕರು ಗುರುವಾರ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಇಂದು ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿಯಿಂದ 15 ನಾಯಕರು, ಜೆಡಿ(ಯು)ನಿಂದ 13, ಎಲ್‌ಜೆಪಿ(ಆರ್‌ವಿ)ಯಿಂದ ಇಬ್ಬರು ಮತ್ತು ಎಚ್‌ಎಎಂ ಮತ್ತು ಆರ್‌ಎಲ್‌ಎಂನಿಂದ ತಲಾ ಒಬ್ಬರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹೊಸ ಸಂಪುಟಕ್ಕೆ ಐದು ಹೊಸ ಮುಖಗಳನ್ನು ಸೇರಿಸಿಕೊಳ್ಳಲಾಗಿದೆ.

ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ, ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಎನ್ ಡಿಎನ ಹಲವಾರು ಹಿರಿಯ ನಾಯಕರು ಭಾಗವಹಿಸಿದ್ದರು.

ಎರಡು ತಿಂಗಳ ಹಿಂದೆಯೇ ಜೆಡಿಯು ಸೇರಿದ 45 ವರ್ಷದ ನಾಯಕ ನಿಶಾಂತ್ ಅವರು ಪಕ್ಷದ ಹಿರಿಯ ಕಾರ್ಯಕರ್ತರ ಮನವೊಲಿಕೆಗೆ ಮಣಿದು, ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಸಂಪುಟ ಸೇರಲು ಒಪ್ಪಿಕೊಂಡಿದ್ದಾರೆ.

"ನಿಶಾಂತ್ ಅವರು ಪಕ್ಷಕ್ಕೆ ಸೇರಿದಾಗಿನಿಂದ, ಅವರು ಸರ್ಕಾರ ಸೇರಬೇಕೆಂಬುದು ಕಾರ್ಯಕರ್ತರ ಆಶಯವಾಗಿತ್ತು. ಕಳೆದ ತಿಂಗಳು ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಬಹುದಿತ್ತು. ಆದರೆ ಅವರು ಹಿಂಜರಿಯುತ್ತಿದ್ದರು. ಅಂತಿಮವಾಗಿ, ಅವರು ಒಪ್ಪಿಕೊಂಡಿದ್ದಾರೆ" ಎಂದು ಮೂಲಗಳು ಬುಧವಾರ ಪಿಟಿಐಗೆ ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TVK ಸರ್ಕಾರ ರಚನೆಯ ಕಸರತ್ತು: ಇಂದು ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್; ಗವರ್ನರ್ ಹೇಳಿದ್ದೇನು?

ಸುವೇಂದು ಅಧಿಕಾರಿ ಆಪ್ತನ ಹತ್ಯೆ ಬೆನ್ನಲ್ಲೇ ಆರ್ ಜಿ ಕರ್ ಸಂತ್ರಸ್ತೆ ತಾಯಿ ಮನೆ ಬಳಿ ಬಾಂಬ್ ದಾಳಿ; 5 ಬಿಜೆಪಿ ಕಾರ್ಯಕರ್ತರಿಗೆ ಗಾಯ

'50 ಕೋಟಿ ಖರ್ಚು ಮಾಡುವ ಶಕ್ತಿಯಿಲ್ಲ: ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಗುಡ್ ಬೈ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ'

ಬೆಂಕಿಗೆ ತುಪ್ಪ ಸುರಿದ ಬಾಂಗ್ಲಾ ನಾಯಕ; ಬಂಗಾಳ ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಿ, 17 ಕೋಟಿ ಮುಸ್ಲಿಮರು ನಿಮ್ಮ ಜತೆ ಇದ್ದಾರೆ: ಮಮತಾಗೆ ಆಗ್ರಹ

ವಿಜಯ್‌ಗೆ ಸರ್ಕಾರ ರಚಿಸಲು ಆಹ್ವಾನಿಸದಿದ್ದರೆ ಜನಾದೇಶಕ್ಕೆ ಅಗೌರವ ತೋರಿದಂತೆ: TVK ಪರ ಕಮಲ್ ಹಾಸನ್ ಬ್ಯಾಟಿಂಗ್

SCROLL FOR NEXT