ಮೋದಿ ಸಮ್ಮುಖದಲ್ಲಿ ಬಿಹಾರ ಸಂಪುಟ ವಿಸ್ತರಣೆ 
ದೇಶ

ಮೋದಿ ಸಮ್ಮುಖದಲ್ಲಿ ಬಿಹಾರ ಸಂಪುಟ ವಿಸ್ತರಣೆ: ನಿತೀಶ್ ಕುಮಾರ್ ಪುತ್ರ ಸೇರಿ 32 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ, ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭಾಗವಹಿಸಿದ್ದರು.

ಪಾಟ್ನಾ: ಜೆಡಿಯು ಅಧ್ಯಕ್ಷ, ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಸೇರಿದಂತೆ NDAನ 32 ನಾಯಕರು ಗುರುವಾರ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಇಂದು ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿಯಿಂದ 15 ನಾಯಕರು, ಜೆಡಿ(ಯು)ನಿಂದ 13, ಎಲ್‌ಜೆಪಿ(ಆರ್‌ವಿ)ಯಿಂದ ಇಬ್ಬರು ಮತ್ತು ಎಚ್‌ಎಎಂ ಮತ್ತು ಆರ್‌ಎಲ್‌ಎಂನಿಂದ ತಲಾ ಒಬ್ಬರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹೊಸ ಸಂಪುಟಕ್ಕೆ ಐದು ಹೊಸ ಮುಖಗಳನ್ನು ಸೇರಿಸಿಕೊಳ್ಳಲಾಗಿದೆ.

ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ, ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಎನ್ ಡಿಎನ ಹಲವಾರು ಹಿರಿಯ ನಾಯಕರು ಭಾಗವಹಿಸಿದ್ದರು.

ಎರಡು ತಿಂಗಳ ಹಿಂದೆಯೇ ಜೆಡಿಯು ಸೇರಿದ 45 ವರ್ಷದ ನಾಯಕ ನಿಶಾಂತ್ ಅವರು ಪಕ್ಷದ ಹಿರಿಯ ಕಾರ್ಯಕರ್ತರ ಮನವೊಲಿಕೆಗೆ ಮಣಿದು, ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಸಂಪುಟ ಸೇರಲು ಒಪ್ಪಿಕೊಂಡಿದ್ದಾರೆ.

"ನಿಶಾಂತ್ ಅವರು ಪಕ್ಷಕ್ಕೆ ಸೇರಿದಾಗಿನಿಂದ, ಅವರು ಸರ್ಕಾರ ಸೇರಬೇಕೆಂಬುದು ಕಾರ್ಯಕರ್ತರ ಆಶಯವಾಗಿತ್ತು. ಕಳೆದ ತಿಂಗಳು ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಬಹುದಿತ್ತು. ಆದರೆ ಅವರು ಹಿಂಜರಿಯುತ್ತಿದ್ದರು. ಅಂತಿಮವಾಗಿ, ಅವರು ಒಪ್ಪಿಕೊಂಡಿದ್ದಾರೆ" ಎಂದು ಮೂಲಗಳು ಬುಧವಾರ ಪಿಟಿಐಗೆ ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

17 ದಿನಗಳಿಂದ ಸಂಸತ್ತಿನ ಎರಡೂ ಸದನಗಳು ಸ್ತಬ್ಧ; ನಮ್ಮ ಬೇಡಿಕೆಗಳಿಗೆ ಹೆದರಿ PM ಮೋದಿ, ಅಮಿತ್ ಶಾ ಸದನಕ್ಕೆ ಬರುತ್ತಿಲ್ಲ: ಖರ್ಗೆ

Video: ಬಿಡದಿ ಟೌನ್‌ಶಿಪ್ ಪಿಸುಮಾತು ವಿವಾದ: ಮಧು ಬಂಗಾರಪ್ಪ ಜೊತೆಗಿನ ಮಾತುಕತೆ ಬಗ್ಗೆ ಬಿ.ವೈ. ವಿಜಯೇಂದ್ರ ಸ್ಪಷ್ಟನೆ

'ಬೇಡ ಬ್ರೋ': ಬೆಂಗಳೂರು ಪೊಲೀಸರ ಭರ್ಜರಿ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್‌ಗಳ ಬಂಧನ!

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!