ದಳಪತಿ ವಿಜಯ್ 
ದೇಶ

ಕೊನೆಗೂ ವಿಜಯ್​ಗೆ ಸಿಕ್ತು ಮ್ಯಾಜಿಕ್​ ನಂಬರ್: CPI, VCKಯಿಂದಲೂ ಬೆಂಬಲ; ಶೀಘ್ರ CM ಆಗಿ 'ದಳಪತಿ' ಪ್ರಮಾಣ!

ಸರ್ಕಾರ ರಚನೆಗೆ ನಟ-ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆಗೆ ಸಿಪಿಐ ಶುಕ್ರವಾರ ಬೇಷರತ್ ಬೆಂಬಲ ಘೋಷಿಸಿದೆ. ಇದರ ಬೆನ್ನಲ್ಲೇ ವಿಸಿಕೆ ಸಹ ಟಿವಿಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ಬರೆದಿದೆ.

ಚೆನ್ನೈ: ತಮಿಳುನಾಡಿನಲ್ಲಿ ಬಹುಮತದ ಕೊರತೆ ಎದುರಿಸುತ್ತಿರುವ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಅವರಿಗೆ ಕೊನೆಗೂ ಮ್ಯಾಜಿಕ್ ನಂಬರ್ ಸಿಕ್ಕಿದ್ದು, ಕಾಂಗ್ರೆಸ್ ನಂತರ ಸಿಪಿಐ ಮತ್ತು ವಿಸಿಕೆ ಸಹ ಬೆಂಬಲ ಘೋಷಿಸಿವೆ. ಹೀಗಾಗಿ ದಳಪತಿ ವಿಜಯ್ ಅವರು ಶೀಘ್ರದಲ್ಲೇ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸರ್ಕಾರ ರಚನೆಗೆ ನಟ-ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆಗೆ ಸಿಪಿಐ ಶುಕ್ರವಾರ ಬೇಷರತ್ ಬೆಂಬಲ ಘೋಷಿಸಿದೆ. ಇದರ ಬೆನ್ನಲ್ಲೇ ವಿಸಿಕೆ ಸಹ ಟಿವಿಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ಬರೆದಿದೆ.

ಇಂದು ಸುದೀರ್ಘ ಚರ್ಚೆಯ ನಂತರ, ಎಡಪಕ್ಷವು(ಸಿಪಿಐ) ಟಿವಿಕೆ ಬೆಂಬಲ ನೀಡಲು ನಿರ್ಧರಿಸಿತು ಮತ್ತು ಅದರ ಪ್ರಕಾರ, ಸರ್ಕಾರ ರಚನೆಗೆ "ಬೇಷರತ್ತಾದ ಬೆಂಬಲ ಬೆಂಬಲ ಪತ್ರವನ್ನು ನೀಡಿದೆ" ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಪತ್ರವನ್ನು ತಮಿಳುನಾಡು ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರಿಗೆ ಕಳುಹಿಸಲಾಗಿದೆ.

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಸಿಪಿಐ ಇಬ್ಬರು ಶಾಸಕರನ್ನು ಹೊಂದಿದೆ.

ಏಪ್ರಿಲ್ 23 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿವಿಕೆ, ಸರ್ಕಾರ ರಚಿಸಲು ಡಿಎಂಕೆ ಮಿತ್ರಪಕ್ಷಗಳಾದ ಸಿಪಿಐ, ಸಿಪಿಐ(ಎಂ) ಮತ್ತು ವಿಸಿಕೆ ಅವರ ಬೆಂಬಲವನ್ನು ಕೋರಿತ್ತು.

ದಳಪತಿ ವಿಜಯ್​ ನೇತೃತ್ವದ ಟಿವಿಕೆಗೆ ಈಗಾಗಲೇ ಕಾಂಗ್ರೆಸ್ ಕಂಡೀಷನಲ್​ ಬೆಂಬಲ ನೀಡಿದೆ. ಇದೀಗ ಸಿಪಿಐ, ಸಿಪಿಎಂ ಹಾಗೂ ವಿಸಿಕೆ ಕೂಡ ಬೆಂಬಲ ಘೋಷಿಸಿದ್ದು, ವಿಜಯ್​ ಸುಲಭವಾಗಿ ಮ್ಯಾಜಿಕ್​ ನಂಬರ್ ದಾಟಿದಂತಾಗಿದೆ.

ಟಿವಿಕೆ ಒಟ್ಟು 107, ಸಿಪಿಐ, 2 ಸಿಪಿಎಂ, 2 ವಿಸಿಕೆ, 2 ಕಾಂಗ್ರೆಸ್ 5 ಐದು ಸೇರಿ 118 ಆಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಲ್ಲಾಳೆ, Video!

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'