ಫಿರೋಜಾ ಖಾತೂನ್ ಹಾಗೂ ಧರ್ಮೇಂದ್ರ ಸಿಂಗ್ 
ದೇಶ

ಜೈಲಿನಲ್ಲೇ ಅರಳಿದ ಪ್ರೇಮ: ಕೈದಿ ಪ್ರೀತಿಗೆ ಸೋತು ಹಿಂದೂ ಸಂಪ್ರದಾಯದಂತೆ ಮದುವೆಯಾದ ಮುಸ್ಲಿಂ ಅಧಿಕಾರಿ..!

ಧರ್ಮೇಂದ್ರ ಸಿಂಗ್ 2007ರಲ್ಲಿ ಚಂದ್ಲಾ ಪ್ರದೇಶದ ಮುನ್ಸಿಪಲ್ ಕೌನ್ಸಿಲ್ ಉಪಾಧ್ಯಕ್ಷ ಕೃಷ್ಣ ದತ್ ದೀಕ್ಷಿತ್ ಅವರ ಹತ್ಯೆ ಪ್ರಕರಣದಲ್ಲಿ ದೋಷಿಯಾಗಿದ್ದು, ಸತ್ನಾ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು.

ಭೋಪಾಲ್: ಇದು ಯಾವುದೋ ಸಿನೆಮಾ ಕಥೆಯಲ್ಲ, ಮಧ್ಯಪ್ರದೇಶದ ಸತ್ನಾದಲ್ಲಿ ನಡೆದ ನೈಜ ಘಟನೆ. ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಸಹಾಯಕ ಜೈಲರ್ ಆಗಿ ಕಾರ್ಯನಿರ್ವಹಿಸುತ್ತಿರುವ ಫಿರೋಜಾ ಖಾತೂನ್ ಎಂಬ ಮಹಿಳಾ ಅಧಿಕಾರಿಯೊಬ್ಬರು, ಅದೇ ಜೈಲಿನಲ್ಲಿ ಕೊಲೆ ಆರೋಪದ ಮೇಲೆ ಶಿಕ್ಷೆ ಅನುಭವಿಸುತ್ತಿದ್ದ ಧರ್ಮೇಂದ್ರ ಸಿಂಗ್ ಎಂಬುವವರನ್ನು ಪ್ರೀತಿಸಿ, ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದು, ಈ ಮೂಲಕ ಎಲ್ಲರ ಗಮನಸೆಳೆದಿದ್ದಾರೆ.

ಧರ್ಮೇಂದ್ರ ಸಿಂಗ್ 2007ರಲ್ಲಿ ಚಂದ್ಲಾ ಪ್ರದೇಶದ ಮುನ್ಸಿಪಲ್ ಕೌನ್ಸಿಲ್ ಉಪಾಧ್ಯಕ್ಷ ಕೃಷ್ಣ ದತ್ ದೀಕ್ಷಿತ್ ಅವರ ಹತ್ಯೆ ಪ್ರಕರಣದಲ್ಲಿ ದೋಷಿಯಾಗಿದ್ದು, ಸತ್ನಾ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು.

ಅದೇ ಜೈಲಿನಲ್ಲಿ ಸಹಾಯಕ ಜೈಲು ಅಧೀಕ್ಷಕರಾಗಿ ನೇಮಕಗೊಂಡಿದ್ದ ಫಿರೋಜಾ ಖಾತೂನ್ ಅವರಿಗೆ ವಾರಂಟ್ ವಿಭಾಗದ ಜವಾಬ್ದಾರಿ ನೀಡಲಾಗಿತ್ತು.

ಕರ್ತವ್ಯದ ವೇಳೆ ಇಬ್ಬರ ನಡುವಿನ ವೃತ್ತಿಪರ ಸಂಪರ್ಕ ಕ್ರಮೇಣ ಸ್ನೇಹವಾಗಿ, ನಂತರ ಪ್ರೀತಿಯಾಗಿ ಬೆಳೆದಿದೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಸುಮಾರು 14 ವರ್ಷಗಳ ಶಿಕ್ಷೆಯ ಬಳಿಕ ಉತ್ತಮ ನಡವಳಿಕೆ ಆಧಾರದಲ್ಲಿ ಧರ್ಮೇಂದ್ರ ಸಿಂಗ್ ಬಿಡುಗಡೆಗೊಂಡಿದ್ದು, ನಂತರ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದಾರೆ.

ಮೇ 5ರಂದು ಛತ್ತರ್‌ಪುರ ಜಿಲ್ಲೆಯ ಲವಕುಶ್ ನಗರದಲ್ಲಿ ಹಿಂದೂ ಸಂಪ್ರದಾಯದಂತೆ ಇಬ್ಬರ ವಿವಾಹ ನೆರವೇರಿದೆ. ಆದರೆ ಫಿರೋಜಾ ಅವರ ಕುಟುಂಬ ಈ ವಿವಾಹಕ್ಕೆ ಒಪ್ಪಿಲ್ಲ.

ಕುಟುಂಬದ ಅನುಪಸ್ಥಿತಿಯಲ್ಲಿ ವಿಶ್ವ ಹಿಂದೂ ಪರಿಷತ್ (VHP) ಜಿಲ್ಲಾ ಉಪಾಧ್ಯಕ್ಷ ರಾಜ್ ಬಹದ್ದೂರ್ ಮಿಶ್ರಾ ಮತ್ತು ಅವರ ಪತ್ನಿ ಕನ್ಯಾದಾನ ನೆರವೇರಿಸಿದರು. ಬಜರಂಗ ದಳದ ಸದಸ್ಯರೂ ಮದುವೆಯಲ್ಲಿ ಭಾಗವಹಿಸಿದ್ದರು. ಜೈಲು ಅಧಿಕಾರಿಗಳು ಮತ್ತು ಸಹ ಕೈದಿಗಳು ನವ ದಂಪತಿಗಳಿಗೆ ಶುಭ ಹಾರೈಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟಿವಿಕೆ ಮ್ಯಾಜಿಕ್ ನಂಬರ್ ಪಡೆಯದಿದ್ದರೆ, ಎಡಿಎಂಕೆಗೆ ಡಿಎಂಕೆ ಬೆಂಬಲ; ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸ್ಟಾಲಿನ್ ಗೆ !

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಇಂಡಿಯಾ ಬ್ಲಾಕ್‌ನಲ್ಲಿ ಎಬ್ಬಿಸಿದ ತಳಮಳ (ನೇರ ನೋಟ)

Hantavirus ಸೋಂಕಿತರು ಇರುವ MV Hondius ಕ್ರೂಸ್ ಶಿಪ್ ನಲ್ಲಿ ಇಬ್ಬರು ಭಾರತೀಯರು: ವರದಿ!

‘ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಶೀಘ್ರ ಒಪ್ಪಂದಕ್ಕೆ ಬನ್ನಿ, ಇಲ್ಲವಾದರೆ ಹೊಡೆತ ಇನ್ನಷ್ಟು ಭೀಕರವಾಗಲಿದೆ’: ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ..!

ಕ್ಷಿಪಣಿ ದಾಳಿ ಬಳಿಕ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ: ‘ಸಣ್ಣ ಮಟ್ಟದ ದಾಳಿಯಷ್ಟೇ, ಕದನ ವಿರಾಮ ಮುರಿದಿಲ್ಲ’; ಟ್ರಂಪ್..!

SCROLL FOR NEXT