ತಲೆ ಬುರುಡೆಯಲ್ಲಿ ಸಿಲುಕಿದ ರಕ್ತಸಿಕ್ತ ಮಚ್ಚಿನೊಂದಿಗೆ ಬಂದ ಯುವಕ 
ದೇಶ

Mumbai: ತಲೆ ಬುರುಡೆಯಲ್ಲಿ ಸಿಲುಕಿದ ರಕ್ತಸಿಕ್ತ ಮಚ್ಚಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ ! ಶಾಕಿಂಗ್ ವಿಡಿಯೋ

ವಿವಾದವೊಂದಕ್ಕೆ ಸಂಬಂಧಿಸಿದಂತೆ ರೋಹಿತ್ ಮೇಲೆ ಈ ರೀತಿಯ ಹಲ್ಲೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಎದುರಾಳಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಮಚ್ಚೊಂದು ರೋಹಿತ್ ತಲೆ ಬುರುಡೆಯಲ್ಲಿ ಸಿಲುಕಿಕೊಂಡಿದೆ ಎನ್ನಲಾಗಿದೆ.

ಮುಂಬೈ: ತಲೆಯಲ್ಲಿ ಸಿಲುಕಿದ ರಕ್ತಸಿಕ್ತ ಮಚ್ಚಿನೊಂದಿಗೆ ಯುವಕನೋರ್ವ ಆಸ್ಪತ್ರೆಗೆ ಬಂದಿರುವ ಭಯಾನಕ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಮನ್ಖುರ್ಡ್‌ನ ಪಿಎಂಜಿಪಿ ಕಾಲೋನಿ ಪ್ರದೇಶದಲ್ಲಿ ವೈಯಕ್ತಿಕ ದ್ವೇಷಕ್ಕಾಗಿ ನಡೆದ ಕ್ರೂರ ಹಲ್ಲೆ ಪ್ರಕರಣ ಇದಾಗಿದೆ. ಗಾಯಾಳು ವ್ಯಕ್ತಿಯನ್ನು ರೋಹಿತ್ ನಾಗನಾಥ್ ಪವಾರ್ ಎಂದು ಗುರುತಿಸಲಾಗಿದೆ. ಅವರ ಮೇಲೆ ಮೇ 1 ರಂದು ರಾತ್ರಿ 11:45 ರ ಸುಮಾರಿಗೆ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿವಾದವೊಂದಕ್ಕೆ ಸಂಬಂಧಿಸಿದಂತೆ ರೋಹಿತ್ ಮೇಲೆ ಈ ರೀತಿಯ ಹಲ್ಲೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಎದುರಾಳಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಮಚ್ಚೊಂದು ರೋಹಿತ್ ತಲೆ ಬುರುಡೆಯಲ್ಲಿ ಸಿಲುಕಿಕೊಂಡಿದೆ ಎನ್ನಲಾಗಿದೆ.

ದಾಳಿ ಬಳಿಕ ರೋಹಿತ್, ತಲೆ ಬುರುಡೆಯಲ್ಲಿ ಸಿಲುಕಿರುವ ಮಚ್ಚಿನೊಂದಿಗೆ ಆಸ್ಪತ್ರೆಗೆ ಬಂದಿದ್ದು, ಕೈಯಲ್ಲಿ ಮೊಬೈಲ್ ಫೋನ್ ಹಿಡಿದು ನಿಂತಿರುವ ಆಘಾತಕಾರಿ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕೂಡಲೇ ಚಿಕಿತ್ಸೆ ನೀಡದ ವೈದ್ಯರ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಕಿಡಿಕಾರಿದ್ದಾರೆ.

ಇದೊಂದು ಗಂಭೀರ ಪ್ರಕರಣವಾಗಿದ್ದು, ಆರೋಪಿಗಳ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಘಟನೆ ವರದಿಯಾದ ತಕ್ಷಣ ಮಂಖುರ್ಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮೇ 2 ರಂದು ನಡೆದ ಹಲ್ಲೆಯಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ ಮೂವರು ಅಪ್ರಾಪ್ತ ವಯಸ್ಕರನ್ನು ಪೊಲೀಸರು ಗುರುತಿಸಿ ವಶಕ್ಕೆ ಪಡೆದಿದ್ದಾರೆ. ಬಾಲಾಪರಾಧಿಗಳನ್ನು ಡೋಂಗ್ರಿ ರಿಮಾಂಡ್ ಹೋಂಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ ರೋಹಿತ್ ಪವಾರ್ ಅವರನ್ನು ಲೋಕಮಾನ್ಯ ತಿಲಕ್ ಮುನ್ಸಿಪಲ್ ಜನರಲ್ ಆಸ್ಪತ್ರೆಗೆ (ಸಿಯಾನ್ ಆಸ್ಪತ್ರೆ) ದಾಖಲಿಸಲಾಗಿದ್ದು, ತಲೆಬುರುಡೆಯಲ್ಲಿ ಸಿಲುಕಿದ ಮಚ್ಚನ್ನು ವೈದ್ಯರು ತೆಗೆದಿದ್ದು, ಅವರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ, ಆದರೂ ಅವರು ವೈದ್ಯರ ನಿಗಾವಣೆಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೊನೆಗೂ ವಿಜಯ್​ಗೆ ಸಿಕ್ತು ಮ್ಯಾಜಿಕ್​ ನಂಬರ್: CPI, VCKಯಿಂದಲೂ ಬೆಂಬಲ; ಶೀಘ್ರ CM ಆಗಿ ದಳಪತಿ ಪ್ರಮಾಣ!

ವಿಜಯ್ ಸಾಧನೆ ಅಚ್ಚರಿ ತಂದಿದೆ, ಆದ್ರೆ ಗ್ಯಾರಂಟಿಗಳಿಗೆ 6-7 ಲಕ್ಷ ಕೋಟಿ ಬೇಕು, ಹಣ ಹೇಗೆ ಹೊಂದಿಸ್ತಾರೆ? ದೇವರೇ ಕಾಪಾಡಬೇಕು: HDK

ಶಾಸಕಾಂಗ ಪಕ್ಷದ ನಾಯಕರಾಗಿ ಸುವೇಂದು ಅಧಿಕಾರಿ ಆಯ್ಕೆ; ಬಂಗಾಳದ ಮೊದಲ ಬಿಜೆಪಿ CM ಆಗಿ ನಾಳೆ ಪ್ರಮಾಣ

LPG, ಟೊಮ್ಯಾಟೊ ಬೆಲೆ ಏರಿಕೆ ಎಫೆಕ್ಟ್: ಏಪ್ರಿಲ್‌ನಲ್ಲಿ ಸಸ್ಯಾಹಾರಿ, ಮಾಂಸಾಹಾರಿ ಥಾಲಿ ಊಟದ ಬೆಲೆ ಗಣನೀಯ ಹೆಚ್ಚಳ: Crisil

ದಳಪತಿ ವಿಜಯ್ ಸಂಪುಟದಲ್ಲಿ VCKಗೆ ಒಂದು, CPIಗೆ ಎರಡು ಸಚಿವ ಸ್ಥಾನ; ಕಾಂಗ್ರೆಸ್ ಗೆ ಎಷ್ಟು?

SCROLL FOR NEXT