ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಶುಕ್ರವಾರ, ಮೇ 8, 2026 ರಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ (ಎಡ) ಅವರು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರೊಂದಿಗೆ. Photo | PTI
ದೇಶ

ಶಾಸಕಾಂಗ ಪಕ್ಷದ ನಾಯಕರಾಗಿ ಸುವೇಂದು ಅಧಿಕಾರಿ ಆಯ್ಕೆ; ಬಂಗಾಳದ ಮೊದಲ ಬಿಜೆಪಿ CM ಆಗಿ ನಾಳೆ ಪ್ರಮಾಣ

ಮೇ 9 ರಂದು ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಬಿಜೆಪಿ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಯಲಿದ್ದು, ಸುವೇಂದು ಅಧಿಕಾರಿ ಅವರು ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕೋಲ್ಕತ್ತಾ: ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಗಿದೆ. ಈ ಮೂಲಕ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಲು ಸುವೇಂದು ಅಧಿಕಾರಿ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅಧಿಕಾರಿ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು ಮತ್ತು ಹೊಸದಾಗಿ ಆಯ್ಕೆಯಾದ ಎಲ್ಲಾ ಬಿಜೆಪಿ ಶಾಸಕರು ಅದನ್ನು ಅನುಮೋದಿಸಿದರು. ನಂತರ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತವಾಗಿ ಸುವೇಂದು ಅಧಿಕಾರಿ ಅವರ ಹೆಸರನ್ನು ಘೋಷಿಸಿದರು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

"ಪಶ್ಚಿಮ ಬಂಗಾಳ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸುವೇಂದು ಅಧಿಕಾರಿ ಅವರು ಆಯ್ಕೆಯಾಗಿದ್ದಾರೆ" ಎಂದು ಪಶ್ಚಿಮ ಬಂಗಾಳದಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಕೇಂದ್ರ ವೀಕ್ಷಕರಾಗಿ ನೇಮಕಗೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮೇ 9 ರಂದು ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಬಿಜೆಪಿ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಯಲಿದ್ದು, ಸುವೇಂದು ಅಧಿಕಾರಿ ಅವರು ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಂಜೆ 6:30ಕ್ಕೆ ರಾಜ್ಯಪಾಲರ ಭೇಟಿ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸುವೇಂದು ಅಧಿಕಾರಿ ಅವರು ಇಂದು ಸಂಜೆ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಎನ್ ರವಿ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು; MG ರಸ್ತೆ, ಮಾಗಡಿ ರೋಡ್ ನಡುವೆ ಸಂಚಾರ ಸ್ಥಗಿತ!

ಇರಾನ್ ಅತ್ಯುನ್ನತ ಮಟ್ಟದ ಅಣು ಪರಿಶೀಲನೆಗೆ ಒಪ್ಪಿದೆ: ಡೊನಾಲ್ಡ್ ಟ್ರಂಪ್

ಹಿಟ್ ಮ್ಯಾನ್ ರೋಹಿತ್ ಶರ್ಮಾ ಮುಡಿಗೆ ಪ್ರತಿಷ್ಠಿತ 'ಪದ್ಮಶ್ರೀ' ಪ್ರಶಸ್ತಿ! Video

RSS ದಾಖಲೆಗಳನ್ನು ಸಲ್ಲಿಸದಿದ್ದರೆ ಕಾನೂನು ಕ್ರಮ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸುಳಿವು

ಉದ್ಯಮಿ ಸಾವಿಗೆ ಬಿಗ್ ಟ್ವಿಸ್ಟ್: ಫೋಟೋಶೂಟ್‌ ವೇಳೆ ಪ್ರಿಯಕರನ ಜತೆ ಸೇರಿ ಭಾವಿ ಪತಿಯನ್ನೇ ಪ್ರಪಾತಕ್ಕೆ ತಳ್ಳಿ ಕೊಂದ ವಧು!