ಟಿವಿಕೆ ವಿಜಯ್ ಅವರ ಚೆನ್ನೈ ನಿವಾಸದ ಹೊರಗೆ ಪ್ರಾರ್ಥನೆ ಮಾಡಿ ಅಳುತ್ತಿರುವ ಅಭಿಮಾನಿ 
ದೇಶ

'ವಿಜಯ್ ಖಂಡಿತಾ ಸಿಎಂ ಆಗುತ್ತಾರೆ': ಚೆನ್ನೈ ನಿವಾಸ ಮುಂದೆ ಕಣ್ಣೀರು ಹಾಕುತ್ತಾ ಮಂಡಿಯೂರಿ ಪ್ರಾರ್ಥನೆ ಮಾಡಿದ ಅಭಿಮಾನಿ-Viral Video

ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ ವಿಜಯ್ ಅವರಿಗಾಗಿ ಪ್ರಾರ್ಥನೆ ಸಲ್ಲಿಸಲು ಬಂದಿದ್ದ ಬೆಂಬಲಿಗ, ಪ್ರಾರ್ಥನೆ ಮುಗಿದ ಬಳಿಕ ವಿಜಯ್ ಮನೆ ಎದುರು ಮೊಣಕಾಲೂರಿ ಕಣ್ಣೀರು ಹಾಕುತ್ತಿರುವ ದೃಶ್ಯ ವಿಡಿಯೋದಲ್ಲಿ ಕಾಣಿಸಿದೆ.

ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ರಾಜಕೀಯ ಪರಿಸ್ಥಿತಿ ಉದ್ವಿಗ್ನವಾಗಿರುವ ನಡುವೆ, ನಟ-ರಾಜಕಾರಣಿ ವಿಜಯ್ ಅವರ ಬೆಂಬಲಿಗನೊಬ್ಬ ಭಾವನಾತ್ಮಕವಾಗಿ ಕಣ್ಣೀರಿಟ್ಟ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿನ್ನೆ ಗುರುವಾರ ಚೆನ್ನೈನ ನೀಲಂಕರೈ ಪ್ರದೇಶದಲ್ಲಿರುವ ವಿಜಯ್ ನಿವಾಸದ ಹೊರಗೆ ಈ ಘಟನೆ ನಡೆದಿದೆ.

ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ ವಿಜಯ್ ಅವರಿಗಾಗಿ ಪ್ರಾರ್ಥನೆ ಸಲ್ಲಿಸಲು ಬಂದಿದ್ದ ಬೆಂಬಲಿಗ, ಪ್ರಾರ್ಥನೆ ಮುಗಿದ ಬಳಿಕ ವಿಜಯ್ ಮನೆ ಎದುರು ಮೊಣಕಾಲೂರಿ ಕಣ್ಣೀರು ಹಾಕುತ್ತಿರುವ ದೃಶ್ಯ ವಿಡಿಯೋದಲ್ಲಿ ಕಾಣಿಸಿದೆ. ಪಿಟಿಐ ಸುದ್ದಿಸಂಸ್ಥೆಯ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ, ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡುತ್ತಾ ಆತ ಭಾವುಕರಾಗಿದ್ದಾನೆ. ಜೊತೆಗೆ ವಿಜಯ್ ಮನೆ ಮುಂದೆ ಪೊಲೀಸ್ ಸಿಬ್ಬಂದಿ ಕಾಣಿಸದಿರುವುದನ್ನೂ ಪ್ರಶ್ನಿಸಿದ್ದಾನೆ.

“ವಿಜಯ್ ಅವರು ಖಂಡಿತವಾಗಿಯೂ ಮುಖ್ಯಮಂತ್ರಿ ಆಗುತ್ತಾರೆ. ಸುದ್ದಿಚಾನೆಲ್‌ಗಳು ಏನು ಬೇಕಾದರೂ ಹೇಳಲಿ, ಆದರೆ ಅಂತಿಮವಾಗಿ ಆ ಸ್ಥಾನಕ್ಕೆ ಬರುವವರು ಅವರೇ. ಎಷ್ಟು ಅಡೆತಡೆಗಳು ಬಂದರೂ ಅವರು ಎದುರಿಸಿ ಮುಂದೆ ಸಾಗುತ್ತಾರೆ. ನನಗೆ ತುಂಬ ನೋವಾಗುತ್ತಿದೆ. ಇಲ್ಲಿ ಒಬ್ಬ ಪೊಲೀಸ್ ಅಧಿಕಾರಿಯೂ ಇಲ್ಲ. ಏನು ಹೇಳಬೇಕು ಅನ್ನೋದೂ ಗೊತ್ತಾಗುತ್ತಿಲ್ಲ. ತುಂಬ ವಿಚಿತ್ರ ಅನಿಸುತ್ತಿದೆ. ಇಷ್ಟು ಹೋರಾಟ ಮಾಡಿ ಇಲ್ಲಿ ಬಂದಿರುವಾಗ ಕೆಲವರು ಹೀಗೆ ವರ್ತಿಸುವುದು ನೋವು ಕೊಡುತ್ತಿದೆ,” ಎಂದು ಬೆಂಬಲಿಗ ಕಣ್ಣೀರು ಹಾಕುತ್ತಾ ಹೇಳಿದ್ದಾನೆ.

ಮತ್ತೊಂದು ವೈರಲ್ ವಿಡಿಯೋದಲ್ಲಿ ವಿಜಯ್ ನಿವಾಸದ ಹೊರಗಿನ ಪೊಲೀಸ್ ಭದ್ರತಾ ವ್ಯವಸ್ಥೆಯನ್ನು ತೆಗೆದುಹಾಕಲಾಗಿದೆ ಎನ್ನಲಾಗಿದೆ. ಬುಧವಾರದವರೆಗೆ ನಟನ ಮನೆ ಎದುರು ನೂರಾರು ಪೊಲೀಸ್ ಸಿಬ್ಬಂದಿ ನಿಯೋಜಿತರಾಗಿದ್ದರು.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ವಿಜಯ್ ಸರ್ಕಾರ ರಚಿಸಲು ಪ್ರಯತ್ನಿಸುತ್ತಿರುವ ಸಮಯದಲ್ಲೇ ಈ ಭಾವನಾತ್ಮಕ ದೃಶ್ಯಗಳು ಗಮನ ಸೆಳೆದಿವೆ.

ಬುಧವಾರ ವಿಜಯ್ ಅವರು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಡಿಎಂಕೆ ಜೊತೆಗಿನ ಪೂರ್ವ ಚುನಾವಣಾ ಮೈತ್ರಿಯಿಂದ ಹೊರಬಂದು ಕಾಂಗ್ರೆಸ್ ಪಕ್ಷವು ವಿಜಯ್ ಪಕ್ಷಕ್ಕೆ ಬೆಂಬಲ ನೀಡಿದೆ.

234 ಸದಸ್ಯರ ವಿಧಾನಸಭೆಯಲ್ಲಿ ಟಿವಿಕೆ 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

ಆದರೆ ಕಾಂಗ್ರೆಸ್‌ನ ಐದು ಶಾಸಕರ ಬೆಂಬಲ ಸಿಕ್ಕಿದ್ದರೂ ವಿಜಯ್ ಅವರಿಗೆ ಇನ್ನೂ ಬಹುಮತದ ಸಂಖ್ಯೆಗೆ ಕೊರತೆಯಿದೆ. ಸರ್ಕಾರ ರಚಿಸಲು ಆಹ್ವಾನಿಸುವ ಮೊದಲು 118 ಶಾಸಕರ ಬೆಂಬಲವನ್ನು ತೋರಿಸುವಂತೆ ರಾಜ್ಯಪಾಲ ಅರ್ಲೇಕರ್ ವಿಜಯ್ ಅವರಿಗೆ ಸೂಚಿಸಿದ್ದಾರೆ.

ವಿಜಯ್ ಗೆದ್ದಿರುವ ಎರಡು ಕ್ಷೇತ್ರಗಳಲ್ಲಿ ಒಂದನ್ನು ತೆರವುಗೊಳಿಸಬೇಕಾಗಿರುವುದರಿಂದ ಅವರ ಬಲ 107ಕ್ಕೆ ಇಳಿಯಬಹುದು. ಜೊತೆಗೆ ಒಬ್ಬ ಶಾಸಕ ಸ್ಪೀಕರ್ ಆಗುವ ಸಾಧ್ಯತೆ ಇದ್ದು, ಸಾಮಾನ್ಯವಾಗಿ ವಿಶ್ವಾಸಮತ ಯಾಚನೆ ವೇಳೆ ಸಮಬಲದ ಪರಿಸ್ಥಿತಿ ಉಂಟಾದಾಗ ಮಾತ್ರ ಸ್ಪೀಕರ್ ಮತ ಚಲಾಯಿಸುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟಿವಿಕೆ ಮ್ಯಾಜಿಕ್ ನಂಬರ್ ಪಡೆಯದಿದ್ದರೆ, ಎಡಿಎಂಕೆಗೆ ಡಿಎಂಕೆ ಬೆಂಬಲ; ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸ್ಟಾಲಿನ್ ಗೆ !

‘ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಶೀಘ್ರ ಒಪ್ಪಂದಕ್ಕೆ ಬನ್ನಿ, ಇಲ್ಲವಾದರೆ ಹೊಡೆತ ಇನ್ನಷ್ಟು ಭೀಕರವಾಗಲಿದೆ’: ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ..!

ಕ್ಷಿಪಣಿ ದಾಳಿ ಬಳಿಕ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ: ‘ಸಣ್ಣ ಮಟ್ಟದ ದಾಳಿಯಷ್ಟೇ, ಕದನ ವಿರಾಮ ಮುರಿದಿಲ್ಲ’; ಟ್ರಂಪ್..!

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಮಿಂಚು ಸಹಿತ ಭಾರೀ ಮಳೆ

ಮನ್ರೇಗಾ ಪುನರ್ ಸ್ಥಾಪನೆಗೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ..!

SCROLL FOR NEXT