ಹಾರ್ಮುಜ್ ಜಲಸಂಧಿ (ಸಂಗ್ರಹ ಚಿತ್ರ) 
ದೇಶ

ಹಾರ್ಮುಜ್ ಜಲಸಂಧಿ ಸಮೀಪ ದುರಂತ: ಹಡಗಿನಲ್ಲಿ ಭಾರೀ ಬೆಂಕಿ, ಭಾರತೀಯ ನಾವಿಕ ಸಾವು

ಬೆಂಕಿ ಕಾಣಿಸಿಕೊಂಡ ಬಳಿಕ ಹಡಗು ಪಲ್ಟಿಯಾಗಿದ್ದು, ಘಟನೆಯಲ್ಲಿ ಒಬ್ಬ ಭಾರತೀಯ ನಾವಿಕ ಸಾವನ್ನಪ್ಪಿದ್ದರೆ, ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ದುಬೈ: ಹಾರ್ಮುಜ್ ಜಲಸಂಧಿ ಸಮೀಪದಲ್ಲಿ ಸಂಚರಿಸುತ್ತಿದ್ದ ಮರದ ಹಡಗಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಭಾರತೀಯ ನಾವಿಕನೊಬ್ಬ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಘಟನೆ ವೇಳೆ ಸರಕುಗಳನ್ನು ಸಾಗಿಸುತ್ತಿದ್ದ ಹಡಗಿನಲ್ಲಿ ಒಟ್ಟು 18 ಭಾರತೀಯ ಸಿಬ್ಬಂದಿ ಇದ್ದರು ಎಂದು ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಬೆಂಕಿ ಕಾಣಿಸಿಕೊಂಡ ಬಳಿಕ ಹಡಗು ಪಲ್ಟಿಯಾಗಿದ್ದು, ಘಟನೆಯಲ್ಲಿ ಒಬ್ಬ ಭಾರತೀಯ ನಾವಿಕ ಸಾವನ್ನಪ್ಪಿದ್ದರೆ, ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ದುಬೈ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

ಉಳಿದ ಭಾರತೀಯರನ್ನು ಆ ಪ್ರದೇಶದಲ್ಲಿ ಸಾಗುತ್ತಿದ್ದ ಮತ್ತೊಂದು ಹಡಗಿನಲ್ಲಿ ರಕ್ಷಿಸಲಾಗಿದೆ. ಬೆಂಕಿಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ದುಬೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ರಕ್ಷಿಸಲ್ಪಟ್ಟ ಭಾರತೀಯರನ್ನು ಭೇಟಿ ಮಾಡಿ ಮಾಹಿತಿ ಪಡೆದಿದ್ದಾರೆ. ಅಲ್ಲದೆ, ಹಡಗಿನ ಮಾಲೀಕರ ಸಂಪರ್ಕದಲ್ಲಿದ್ದು, ಅಗತ್ಯ ಸಹಾಯ ಒದಗಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಐತಿಹಾಸಿಕ: ಪ.ಬಂಗಾಳದ ನೂತನ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ, ಹೊಸ ರಾಜಕೀಯ ಯುಗಕ್ಕೆ ಚಾಲನೆ

ಝಲ್ ಮುರಿ, ಸಿಹಿತಿನಿಸು ಮತ್ತು ರವೀಂದ್ರನಾಥ ಟಾಗೋರ್: ಬಿಜೆಪಿ ಬಂಗಾಳ ಪ್ರಮಾಣವಚನ ಸಮಾರಂಭದಲ್ಲಿ ಬಂಗಾಳಿ ಸೊಗಡು

ಸಂಸ್ಥಾಪಕ ಪಿತೃಗಳ ಕನಸುಗಳ ಸಾಕಾರ, ಸೋನಾರ್ ಬಾಂಗ್ಲಾ ಯುಗ ಅಧಿಕೃತ ಆರಂಭ: ಸಿಎಂ ಸುವೇಂದು ಅಧಿಕಾರಿ ಮೊದಲ ಮಾತು

ಆರ್ಥಿಕ ನಷ್ಟದಲ್ಲಿ OMC, ಜನಸಾಮಾನ್ಯರಿಗೆ ಶೀಘ್ರದಲ್ಲೇ ಕಾದಿದೆ ಬಿಗ್ ಶಾಕ್!

ಎಡಪಕ್ಷಗಳ ಬೆಂಬಲ ಸಿಕ್ಕರೂ ಟಿವಿಕೆಗೆ ಸಿಕ್ಕಿಲ್ಲ ಸರ್ಕಾರ ರಚನೆ ಭಾಗ್ಯ, ಮ್ಯಾಜಿಕ್ ಸಂಖ್ಯೆಗೆ 2 ಸ್ಥಾನ ಕೊರತೆ; ಇಂದು ಇಲ್ಲ ವಿಜಯ್ ಪ್ರಮಾಣ ವಚನ-Video

SCROLL FOR NEXT