ಎಂಕೆ ಸ್ಟಾಲಿನ್ 
ದೇಶ

ಕಾಂಗ್ರೆಸ್‌ನಿಂದ ದ್ರೋಹ, ಸೌಜನ್ಯಕ್ಕಾದರೂ ಧನ್ಯವಾದ ಹೇಳಲಿಲ್ಲ: ಎಂ.ಕೆ ಸ್ಟಾಲಿನ್ ಕಿಡಿ

ಮೈತ್ರಿಕೂಟದ ಭಾಗವಾಗಿ ಗೆದ್ದ ಕಾಂಗ್ರೆಸ್ ಶಾಸಕರು ಕನಿಷ್ಠ ಪಕ್ಷ ಸೌಜನ್ಯಕ್ಕಾದರೂ ಕೃತಜ್ಞತೆ ಸಲ್ಲಿಸಲು ಪಕ್ಷದ ಪ್ರಧಾನ ಕಚೇರಿಗೆ ಬರಲಿಲ್ಲ ಎಂದು ಮಾಜಿ ಸಿಎಂ ಹೇಳಿದ್ದಾರೆ.

ಚೆನ್ನೈ: ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ಶನಿವಾರ ತಮ್ಮ ದೀರ್ಘಕಾಲದ ಮಿತ್ರ ಪಕ್ಷ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದು, ಸೌಜನ್ಯಕ್ಕಾದರೂ ಧನ್ಯವಾದ ಹೇಳಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್ 23ರಂದು ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಕಾಂಗ್ರೆಸ್ ಒಂದೇ ದಿನದಲ್ಲಿ ತಮ್ಮ ಪಕ್ಷದೊಂದಿಗಿನ ಸಂಬಂಧವನ್ನು ಕಡಿದುಕೊಂಡಿತು. ಮೈತ್ರಿಕೂಟದ ಭಾಗವಾಗಿ ಗೆದ್ದ ಕಾಂಗ್ರೆಸ್ ಶಾಸಕರು ಕನಿಷ್ಠ ಪಕ್ಷ ಸೌಜನ್ಯಕ್ಕಾದರೂ ಕೃತಜ್ಞತೆ ಸಲ್ಲಿಸಲು ಪಕ್ಷದ ಪ್ರಧಾನ ಕಚೇರಿಗೆ ಬರಲಿಲ್ಲ ಎಂದು ಮಾಜಿ ಸಿಎಂ ಹೇಳಿದ್ದಾರೆ.

ತಮಿಳುನಾಡಿನ ಹಕ್ಕುಗಳನ್ನು ರಕ್ಷಿಸಲು ಮತ್ತು ತಮಿಳರ ಕಲ್ಯಾಣಕ್ಕಾಗಿ ಡಿಎಂಕೆ ಜೊತೆ ಹೋರಾಟ ಮುಂದುವರಿಸುವುದಾಗಿ ಘೋಷಿಸಿದ ಕಮ್ಯುನಿಸ್ಟ್ ಪಕ್ಷಗಳು ಮತ್ತು ವಿಸಿಕೆ ಅನ್ನು ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಅವರು ಶ್ಲಾಘಿಸಿದ್ದಾರೆ.

“ಚುನಾವಣಾ ಫಲಿತಾಂಶ ಪ್ರಕಟವಾದ ನಂತರ, ನೀವು ನಡೆಯುತ್ತಿರುವ ಘಟನೆಗಳನ್ನು ನೋಡುತ್ತಿದ್ದೀರಿ. ವಿಧಾನಸಭಾ ಚುನಾವಣಾ ಫಲಿತಾಂಶ ಯಾವುದೇ ಪಕ್ಷಕ್ಕೆ ಸರ್ಕಾರ ರಚಿಸಲು ಬಹುಮತ ಸಿಗದ ರೀತಿಯಲ್ಲಿ ಬಂದಿದೆ” ಎಂದು ಸ್ಟಾಲಿನ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟವು ಸರ್ಕಾರ ರಚಿಸಲು ಬೇಕಾದ ಸ್ಥಾನಗಳನ್ನು ಗಳಿಸಲಿಲ್ಲ. ಆದರೆ ನಾವು ಗಮನಾರ್ಹ ಸಂಖ್ಯೆಯ ಮತಗಳನ್ನು ಪಡೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಅವರು, “ಹೊಸ ಸರ್ಕಾರ ರಚನೆಗೆ ನಾವು ಅಡ್ಡಿಯಾಗುವುದಿಲ್ಲ ಮತ್ತು ಡಿಎಂಕೆ ರಚನಾತ್ಮಕ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುತ್ತದೆ ಎಂದು ನಾನು ಈಗಾಗಲೇ ಹೇಳಿದ್ದೇನೆ” ಎಂದರು.

ಸಿಪಿಐ, ಸಿಪಿಐ(ಎಂ) ಹಾಗೂ ವಿಸಿಕೆ ಪಕ್ಷಗಳು ಸರ್ಕಾರ ರಚಿಸಲು ವಿಜಯ್ ಅವರಿಗೆ ಬೆಂಬಲ ನೀಡಿದ್ದರೂ ಸೈದ್ಧಾಂತಿಕವಾಗಿ ಡಿಎಂಕೆ ನೇತೃತ್ವದ ಮೈತ್ರಿಕೂಟದ ಭಾಗವಾಗಿ ಮುಂದುವರೆಯುವುದಾಗಿ ಹೇಳಿವೆ. ಅವರ ಈ ನಿರ್ಧಾರ ಮತ್ತು ವಿಶ್ವಾಸಕ್ಕೆ ನಾನು ಚಿರಋಣಿ ಎಂದು ಸ್ಟಾಲಿನ್ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಉದ್ದೇಶಪೂರ್ವಕವಾಗಿ ದಾರಿತಪ್ಪಿಸಲಾಗುತ್ತಿದೆ': Op Sindoor ಕುರಿತು ರಾಜನಾಥ್ ಸಿಂಗ್ ಹೇಳಿಕೆಗಳ ಕುರಿತ ಪೋಸ್ಟ್‌ಗಳಿಗೆ ಕೇಂದ್ರದ ಪ್ರತಿಕ್ರಿಯೆ

ಅಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪ, ಪಾಕಿಸ್ತಾನ, ಜಮ್ಮು ಮತ್ತು ಕಾಶ್ಮೀರ ಮತ್ತು ದೆಹಲಿಯಲ್ಲಿ ಕಂಪನದ ಅನುಭವ

ಸಿಸಿಟಿವಿ ನಾಪತ್ತೆ, SOP ನಿರ್ಲಕ್ಷ್ಯ, ಶೌಚಾಲಯದಲ್ಲಿ ಹಣ!: ರಾಮ ಮಂದಿರ ದೇಣಿಗೆ ಕುರಿತು ಎಸ್‌ಐಟಿ ತನಿಖೆಯಲ್ಲಿ 'ವಂಚನೆ'ಯ ಜಾಲ ಬಯಲು!

ನಟ ಕಿಚ್ಚ ಸುದೀಪ್ ಹೊಸ ಕ್ಯಾರವ್ಯಾನ್: 6.5 ಕೋಟಿ ರೂ ಮೌಲ್ಯ, ಹೈಟೆಕ್ ಸೌಲಭ್ಯದ 'ರಸ್ತೆ ಮೇಲಿನ ವಿಮಾನ', Video

'ಅವ್ರು ನಿಜವಾದ ರಾಮ ಭಕ್ತರಲ್ಲ: ದೇಣಿಗೆ ವಿವಾದ, ಪ್ರಧಾನಿ ಮೋದಿಯ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್!