ಕಾಂಗ್ರೆಸ್ ಬೆಂಬಲಿಗರ ಚಿತ್ರ 
ದೇಶ

ಕುದುರೆ ವ್ಯಾಪಾರದ ಭೀತಿ: ತಮಿಳುನಾಡು ಕಾಂಗ್ರೆಸ್ ಶಾಸಕರು ಹೈದರಾಬಾದ್‌ಗೆ ಶಿಫ್ಟ್!

ತಮಿಳುನಾಡು ಕಾಂಗ್ರೆಸ್‌ ಶಾಸಕರನ್ನು ಬೆಂಗಳೂರಿನ ಈಗಲ್‌ಟನ್ ರಿಸಾರ್ಟ್‌ಗೆ ಸ್ಥಳಾಂತರಿಸಲಾಗಿದೆ ಎಂಬ ಊಹಾಪೋಹ ಹಬ್ಬಿತ್ತು.

ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಬಗ್ಗೆ ಅನಿಶ್ಚಿತತೆ ಮುಂದುವರೆದಿದ್ದು, ಸಂಭಾವ್ಯ ಕುದುರೆ ವ್ಯಾಪಾರ ತಡೆಗಟ್ಟುವ ನಿಟ್ಟಿನಲ್ಲಿ ಐವರು ಕಾಂಗ್ರೆಸ್ ಶಾಸಕರು ಶನಿವಾರ ಹೈದರಾಬಾದ್‌ಗೆ ಶಿಫ್ಟ್ ಆಗಿದ್ದಾರೆ.

ತಮಿಳುನಾಡು ಕಾಂಗ್ರೆಸ್‌ ಶಾಸಕರನ್ನು ಬೆಂಗಳೂರಿನ ಈಗಲ್‌ಟನ್ ರಿಸಾರ್ಟ್‌ಗೆ ಸ್ಥಳಾಂತರಿಸಲಾಗಿದೆ ಎಂಬ ಊಹಾಪೋಹ ಹರಡಿತ್ತು.

ಈ ಹಿಂದೆ ತೆಲಂಗಾಣದಲ್ಲಿ ಪಕ್ಷದ ವ್ಯವಹಾರಗಳ ಉಸ್ತುವಾರಿ ವಹಿಸಿದ್ದ ಮೇಲೂರಿನ ಕಾಂಗ್ರೆಸ್ ಶಾಸಕ ಪಿ. ವಿಶ್ವನಾಥನ್ ಅವರು ಹೈದರಾಬಾದ್‌ನಲ್ಲಿ ವಾಸವಿದ್ದ ಐದು ಶಾಸಕರ ಗುಂಪನ್ನು ಮುನ್ನಡೆಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಟಿವಿಕೆಗೆ ಕಾಂಗ್ರೆಸ್ ಈಗಾಗಲೇ ಬೆಂಬಲ ಘೋಷಿಸಿದೆ ಮತ್ತು ಟಿವಿಕೆ ಸರ್ಕಾರ ರಚನೆಯಾದರೆ ವಿಶ್ವನಾಥನ್ ಸಚಿವರಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಏಪ್ರಿಲ್ 23 ರಂದು ತಮಿಳುನಾಡಿನಲ್ಲಿ ನಡೆದ ತನ್ನ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಂತರ ಸರ್ಕಾರ ರಚಿಸಲು ಬೆಂಬಲ ನೀಡುವಂತೆ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ) ಮತ್ತು ವಿಸಿಕೆ ಪಕ್ಷಗಳನ್ನು ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸಂಪರ್ಕಿಸಿತ್ತು.

ಎಡ ಪಕ್ಷಗಳ ದೀರ್ಘಕಾಲದ ಮಿತ್ರ ಪಕ್ಷವಾದ ವಿಸಿಕೆ, ಕಮ್ಯುನಿಸ್ಟ್ ಪಕ್ಷಗಳು ತೆಗೆದುಕೊಂಡ ನಿಲುವನ್ನು ಅನುಸರಿಸಿ, ಟಿವಿಕೆಗೆ ತನ್ನ ಬೆಂಬಲವನ್ನು ಅಧಿಕೃತವಾಗಿ ಘೋಷಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು; ಇಂದಿರಾನಗರ - ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತ!

ಅಮೆರಿಕ- ಇರಾನ್ ಶಾಂತಿ ಒಪ್ಪಂದ: ಜೂನ್ 17 ರಿಂದ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 11 ಹಡಗುಗಳು! ಇನ್ನೂ ಎಷ್ಟಿವೆ ಗೊತ್ತಾ?

ಬೆಂಗಳೂರು ಮೂಲದ CRED ನಲ್ಲಿ Meta ಹೂಡಿಕೆ: ವಾಟ್ಸಾಪ್ ನ ಜಾಗತಿಕ ಮುಖ್ಯಸ್ಥರಾಗಿ ಶಾ ನೇಮಕಕ್ಕೆ ಕಾರಣಗಳೇನು?PhonePe, GooglePayಗೆ ಬೀಳುತ್ತಾ ಹೊಡೆತ?

ಮುಖ್ಯಮಂತ್ರಿ ಸಿ. ವಿಜಯ್ ಹುಟ್ಟುಹಬ್ಬ: ಎಲ್ಲಾ ವದಂತಿಗಳಿಗೆ ತೆರೆ ಎಳೆದ ಆಪ್ತ ಗೆಳತಿ ತ್ರಿಶಾ ಕೃಷ್ಣನ್!

ಉದ್ಧವ್ ಸೇನೆ ತೊರೆದು ಶಿಂಧೆ ಸೇನೆ ಸೇರಿದ ಬಂಡಾಯ ಸಂಸದರಿಗೆ ಬಂಪರ್ ಗಿಫ್ಟ್; ಅಭಿವೃದ್ಧಿ ಹಣ ಬಿಡುಗಡೆ