ದೇಶ

ಅಭಿಮಾನಿಗಳ ಹುಚ್ಚಾಟ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿಜಯ್ ಬೆಂಬಲಿಗ; ಸಾವು-ಬದುಕಿನ ನಡುವೆ ಹೋರಾಟ!

ತಮಿಳುನಾಡು ರಾಜಕೀಯದಲ್ಲಿ ಸರ್ಕಾರ ರಚನೆಯ ಸುತ್ತಲಿನ ಸಸ್ಪೆನ್ಸ್ ಮುಂದುವರೆದಿದೆ. ಟಿವಿಕೆ ಮುಖ್ಯಸ್ಥ ವಿಜಯ್ ಅವರ ಪ್ರಮಾಣವಚನ ಸಮಾರಂಭಕ್ಕೆ ಅವಕಾಶ ಸಿಗುತ್ತಿಲ್ಲ ಎಂದು ಬೇಸರಗೊಂಡು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಸರ್ಕಾರ ರಚನೆಯ ಸುತ್ತಲಿನ ಸಸ್ಪೆನ್ಸ್ ಮುಂದುವರೆದಿದೆ. ಟಿವಿಕೆ ಮುಖ್ಯಸ್ಥ ವಿಜಯ್ ಅವರ ಪ್ರಮಾಣವಚನ ಸಮಾರಂಭಕ್ಕೆ ಅವಕಾಶ ಸಿಗುತ್ತಿಲ್ಲ ಎಂದು ಬೇಸರಗೊಂಡು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. 40 ವರ್ಷದ ಇಸ್ಕಕಿಯಪ್ಪ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಸುಟ್ಟಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಶೇಕಡ 40ರಷ್ಟು ಸುಟ್ಟ ಗಾಯಗಳಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ವಿಜಯ್ ಮುಖ್ಯಮಂತ್ರಿಯಾಗುವುದರಲ್ಲಿ ವಿಳಂಬವಾದ ಬಗ್ಗೆ ಅವರು ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಮಧ್ಯೆ ವಿಸಿಕೆಯ ಬೆಂಬಲದಿಂದ ಟಿವಿಕೆಗೆ ಅತ್ಯಂತ ಮಹತ್ವದ ಎರಡು ಸ್ಥಾನಗಳು ಸೇರ್ಪಡೆಯಾಗಿದೆ. ವಿಜಯ್ ನೇತೃತ್ವದ ಮೈತ್ರಿಗೆ ಈಗಾಗಲೇ 116 ಶಾಸಕರ ಬೆಂಬಲವಿತ್ತು. ಇದರಲ್ಲಿ ಕಾಂಗ್ರೆಸ್‌ನ ಐದು ಶಾಸಕರು ಹಾಗೂ ಎಡಪಂಥೀಯ ಪಕ್ಷಗಳ ನಾಲ್ವರು ಶಾಸಕರೂ ಸೇರಿದ್ದಾರೆ. ವಿಸಿಕೆಯ ಇಬ್ಬರು ಶಾಸಕರ ಬೆಂಬಲ ಸಿಕ್ಕಿದ್ದರಿಂದ ಮೈತ್ರಿಯ ಬಲ 118ಕ್ಕೆ ಏರಿತ್ತು. ಜೊತೆಗೆ ಐಯುಎಂಎಲ್ ನ ಇಬ್ಬರು ಶಾಸಕರು ಸಹ ಬೆಂಬಲ ಸೂಚಿಸಿದ್ದರಿಂದ ಟಿವಿಕೆ ಬಲ 120ಕ್ಕೆ ತಲುಪಿದೆ. ಇನ್ನು ಮ್ಯಾಜಿಕ್ ನಂಬರ್ ಸಿಗುತ್ತಿದ್ದಂತೆ ವಿಜಯ್ ಸಂಜೆ ಲೋಕಭವನಕ್ಕೆ ತೆರಳಿ 120 ಶಾಸಕರ ಬೆಂಬಲದ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದು ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

108 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಟಿವಿಕೆ ಹೊರಹೊಮ್ಮಿದ ಬಳಿಕ ವಿಜಯ್ ನಾಲ್ಕು ದಿನದಲ್ಲಿ ನಾಲ್ಕು ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಆದರೆ ಪ್ರಯತ್ನಗಳು ವಿಫಲವಾಗಿದ್ದವು. ಆದರೆ ಇಂದು 5ನೇ ಬಾರಿಗೆ ರಾಜ್ಯಪಾಲರನ್ನು ವಿಜಯ್ ಭೇಟಿಯಾಗಿದ್ದು ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿದ್ದಾರೆ. ಇನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ವಿಜಯ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video