ರಾಹುಲ್ ಗಾಂಧಿ ಜೊತೆ ಸೆಲ್ಫಿ ತೆಗೆದುಕೊಂಡ ವಿಜಯ್ 
ದೇಶ

ತಮಿಳುನಾಡು ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ವಿಜಯ್ ಸೆಲ್ಫಿ ಕ್ಷಣ!

ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ತಮಿಳುನಾಡಿನ 13ನೇ ಮುಖ್ಯಮಂತ್ರಿಯಾಗಿ ವಿಜಯ್ ಅವರಿಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರಮಾಣ ವಚನ ಬೋಧಿಸಿದರು.

ಚೆನ್ನೈ: ನಟ ಮತ್ತು ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ವಿಜಯ್ ಭಾನುವಾರ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ವೇದಿಕೆ ಮೇಲಿದ್ದ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಮೂಲಕ ಸಮಾರಂಭಕ್ಕೆ ವೈಯಕ್ತಿಕ ಸಿನಿಮೀಯ ಮೆರುಗನ್ನು ನೀಡಿದರು.

ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ತಮಿಳುನಾಡಿನ 13ನೇ ಮುಖ್ಯಮಂತ್ರಿಯಾಗಿ ವಿಜಯ್ ಅವರಿಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರಮಾಣ ವಚನ ಬೋಧಿಸಿದರು. ನಂತರ, ಸೂಪರ್‌ಸ್ಟಾರ್ ತಮ್ಮ ಫೋನ್ ತೆಗೆದು ವೇದಿಕೆಯಲ್ಲಿದ್ದ ರಾಹುಲ್ ಗಾಂಧಿ ಮತ್ತು ಇತರ ಗಣ್ಯರೊಂದಿಗೆ ಸೆಲ್ಫಿ ತೆಗೆದುಕೊಂಡರು. ಅಲ್ಲದೆ, ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹಾಜರಿದ್ದ ಜನಸಮೂಹದ 360-ಡಿಗ್ರಿ ವಿಡಿಯೋ ರೆಕಾರ್ಡ್ ಮಾಡಿಕೊಂಡರು.

ವಿಜಯ್ ಅವರ ಪೋಷಕರಾದ ಎಸ್‌ಎ ಚಂದ್ರಶೇಖರ್ ಮತ್ತು ಶೋಭಾ, ನಟಿ ತ್ರಿಶಾ ಮತ್ತು ಸಿನಿಮಾ ಕ್ಷೇತ್ರದ ಇತರರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

234 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 120 ಶಾಸಕರ ಬೆಂಬಲ ಪಡೆದ ವಿಜಯ್ ಜೊತೆಗೆ, ರಾಜ್ಯಪಾಲ ಅರ್ಲೇಕರ್ ಅವರು 'ಬಸ್ಸಿ' ಎನ್ ಆನಂದ್, ಆಧವ್ ಅರ್ಜುನ, ಕೆಎ ಸೆಂಗೋಟ್ಟೈಯನ್, ಕೆಜಿ ಅರುಣ್‌ರಾಜ್, ಪಿ ವೆಂಕಟರಮಣನ್, ಸಿಟಿಆರ್ ನಿರ್ಮಲ್ ಕುಮಾರ್, ಎ ರಾಜ್‌ಮೋಹನ್, ಕೀರ್ತನಾ ಮತ್ತು ಕೆಟಿ ಪ್ರಭು ಅವರನ್ನೊಳಗೊಂಡ ಹೊಸ ಸಚಿವ ಸಂಪುಟಕ್ಕೆ ಪ್ರಮಾಣ ವಚನ ಬೋಧಿಸಿದರು.

ತಮಿಳುನಾಡಿನ ರಾಜಕಾರಣಿಗಳು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸಾಮಾನ್ಯವಾಗಿ ಧರಿಸುವ ಸಾಂಪ್ರದಾಯಿಕ ಧೋತಿ ಮತ್ತು ಶರ್ಟ್‌ ಬದಲಿಗೆ, ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಅವರು ಆಧುನಿಕ ಮತ್ತು ಔಪಚಾರಿಕ ಬಿಳಿ ಶರ್ಟ್, ಕಪ್ಪು ಬಣ್ಣದ ಸೂಟ್ ಮತ್ತು ಪ್ಯಾಂಟ್ ಧರಿಸಿದ್ದರು.

ಪ್ರಮಾಣವಚನ ಸ್ವೀಕರಿಸಿದ ತಕ್ಷಣ ಭಾಷಣದಲ್ಲಿ ನಟ-ರಾಜಕಾರಣಿ ತಮ್ಮ ಗೆಲುವಿಗೆ ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸಿದರು. 'ಬನ್ನಿ, ನಾವೆಲ್ಲರೂ ಒಟ್ಟಾಗಿ ತಮಿಳುನಾಡಿಗೆ ಹೊಸ ಸರ್ಕಾರ ನೀಡೋಣ. ಇದು ಹೊಸ ಆರಂಭ, ಜಾತ್ಯತೀತ, ಸಾಮಾಜಿಕ ನ್ಯಾಯದ ಹೊಸ ಯುಗದ ಆರಂಭ' ಎಂದು ಕರೆ ನೀಡಿದರು.

ಅವರು ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಸಮಾರಂಭದ ಸ್ಥಳದಲ್ಲಿ ಹರ್ಷೋದ್ಗಾರ ಕೇಳಿಬಂತು.

51 ವರ್ಷದ ವಿಜಯ್ ಅವರ ಪಕ್ಕದಲ್ಲಿ ವೇದಿಕೆ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಮೈತ್ರಿಕೂಟದ ಪಾಲುದಾರರಾದ ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ನಾಯಕರು ಇದ್ದರು.

ರಾಹುಲ್ ಗಾಂಧಿ, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಉನ್ನತ ನಾಯಕತ್ವಕ್ಕೆ ಅವರು ಧನ್ಯವಾದ ಅರ್ಪಿಸಿದರು.

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 234 ಸ್ಥಾನಗಳ ಪೈಕಿ 108 ಸ್ಥಾನಗಳನ್ನು ಗೆದ್ದ ಟಿವಿಕೆ, ರಾಜ್ಯದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ರಾಜ್ಯ ರಾಜಕೀಯದ ಇತಿಹಾಸದಲ್ಲಿ ಮೊದಲ ಬಾರಿಗೆ ಎರಡೂ 'ದ್ರಾವಿಡ' ಪಕ್ಷಗಳನ್ನು ಅಧಿಕಾರದಿಂದ ಹೊರಹಾಕಿತು.

ಬಹುಮತ ದೊರಕದ ಕಾರಣ ವಿಜಯ್ ಅವರ ಟಿವಿಕೆ ಪಕ್ಷಕ್ಕೆ, ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟದ ಮಿತ್ರಪಕ್ಷಗಳಾಗಿದ್ದ ಕಾಂಗ್ರೆಸ್ (5), ಸಿಪಿಐ-ಎಂ (2), ಸಿಪಿಐ (2), ವಿಸಿಕೆ (2) ಮತ್ತು ಐಯುಎಂಎಲ್ (2) ಬೆಂಬಲ ನೀಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಲ್ಲಾಳೆ, Video!

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'