ಪ್ರಧಾನಿ ಮೋದಿ- ರಾಹುಲ್ ಗಾಂಧಿ 
ದೇಶ

'ರಾಜಿ ಮಾಡಿಕೊಂಡ ಪ್ರಧಾನಿ ದೇಶ ನಡೆಸಲು ಅಸಮರ್ಥ': ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಟೀಕೆ; Video

12 ವರ್ಷಗಳಲ್ಲಿ ದೇಶವನ್ನು ಇಂತಹ ಸ್ಥಿತಿಗೆ ತಳ್ಳಲಾಗಿದೆ. ಈಗ ಜನರಿಗೆ ಏನು ಖರೀದಿಸಬೇಕು, ಎಲ್ಲಿ ಹೋಗಬೇಕು ಎಂಬುದನ್ನೂ ಸರ್ಕಾರ ಹೇಳುವ ಪರಿಸ್ಥಿತಿ ಬಂದಿದೆ. ತಮ್ಮ ವೈಫಲ್ಯದಿಂದ ತಪ್ಪಿಸಿಕೊಳ್ಳಲು ಸರ್ಕಾರ ಹೊಣೆಗಾರಿಕೆಯನ್ನು ಜನರ ಮೇಲೆ ಹಾಕುತ್ತಿದೆ.

ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮ ಎದುರಿಸಲು ಜನರು ಇಂಧನ ಬಳಕೆ ಕಡಿಮೆ ಮಾಡಬೇಕು, ಚಿನ್ನ ಖರೀದಿ ಹಾಗೂ ವಿದೇಶ ಪ್ರವಾಸವನ್ನು ಮುಂದೂಡಬೇಕು ಎಂದು ಕರೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಮೋದಿ ಜೀ ಜನರಿಗೆ ತ್ಯಾಗ ಮಾಡಲು ಕರೆ ನೀಡಿದ್ದಾರೆ. ಚಿನ್ನ ಖರೀದಿಸಬೇಡಿ, ವಿದೇಶಕ್ಕೆ ಹೋಗಬೇಡಿ, ಪೆಟ್ರೋಲ್ ಕಡಿಮೆ ಬಳಸಿ, ರಸಗೊಬ್ಬರ ಹಾಗೂ ಅಡುಗೆ ಎಣ್ಣೆ ಬಳಕೆಯನ್ನು ಇಳಿಸಿ, ಮೆಟ್ರೋ ಬಳಸಿರಿ, ವರ್ಕ್ ಫ್ರಮ್ ಹೋಮ್ ಮಾಡಿ ಎಂದಿದ್ದಾರೆ. ಇವು ಸಲಹೆಗಳ ಮಾತಲ್ಲ, ಸರ್ಕಾರದ ವೈಫಲ್ಯದ ಸಾಕ್ಷಿ ಎಂದು ಟೀಕಿಸಿದ್ದಾರೆ.

“12 ವರ್ಷಗಳಲ್ಲಿ ದೇಶವನ್ನು ಇಂತಹ ಸ್ಥಿತಿಗೆ ತಳ್ಳಲಾಗಿದೆ. ಈಗ ಜನರಿಗೆ ಏನು ಖರೀದಿಸಬೇಕು, ಎಲ್ಲಿ ಹೋಗಬೇಕು ಎಂಬುದನ್ನೂ ಸರ್ಕಾರ ಹೇಳುವ ಪರಿಸ್ಥಿತಿ ಬಂದಿದೆ. ತಮ್ಮ ವೈಫಲ್ಯದಿಂದ ತಪ್ಪಿಸಿಕೊಳ್ಳಲು ಸರ್ಕಾರ ಹೊಣೆಗಾರಿಕೆಯನ್ನು ಜನರ ಮೇಲೆ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.

ಇವರು ರಾಜಿ ಮಾಡಿಕೊಂಡ ಪ್ರಧಾನಮಂತ್ರಿಯಾಗಿದ್ದು, ದೇಶ ನಡೆಸುವ ಸಾಮರ್ಥ್ಯವನ್ನು ಕಳೆದುಕೊಂಡಿದ್ದಾರೆಂದು ಕಿಡಿಕಾರಿದ್ದಾರೆ.

ಇದರ ನಡುವೆ ಕಾಂಗ್ರೆಸ್ ಪಕ್ಷವೂ ಪ್ರಧಾನಿ ವಿರುದ್ಧ ತೀವ್ರ ಟೀಕೆ ನಡೆಸಿದ್ದು, ಅಮೆರಿಕಾ–ಇರಾನ್ ಯುದ್ಧ ಮೂರು ತಿಂಗಳು ಕಳೆದರೂ ದೇಶದ ಇಂಧನ ಭದ್ರತೆ ಕುರಿತು ಸರ್ಕಾರದ ಬಳಿ ಸ್ಪಷ್ಟ ಯೋಜನೆ ಇಲ್ಲ ಎಂದು ಆರೋಪಿಸಿದೆ.

ಭಾನುವಾರ ಹೈದರಾಬಾದ್‌ನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ದೇಶದ ವಿದೇಶಿ ವಿನಿಮಯದ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ಹೇಳಿ, ಪೆಟ್ರೋಲ್–ಡೀಸೆಲ್ ಬಳಕೆ ಕಡಿಮೆ ಮಾಡುವುದು, ಮೆಟ್ರೋ ಮತ್ತು ಕಾರ್‌ಪೂಲ್ ಬಳಸುವುದು, ವಿದ್ಯುತ್ ವಾಹನಗಳಿಗೆ ಆದ್ಯತೆ ನೀಡುವುದು, ಚಿನ್ನ ಖರೀದಿ ಮತ್ತು ವಿದೇಶ ಪ್ರವಾಸವನ್ನು ಒಂದು ವರ್ಷ ಮುಂದೂಡುವಂತೆ ಕರೆ ನೀಡಿದ್ದರು.

ಇದೇ ವೇಳೆ ಅಡುಗೆ ಎಣ್ಣೆ ಬಳಕೆ ಕಡಿಮೆ ಮಾಡುವುದು, ರಾಸಾಯನಿಕ ಗೊಬ್ಬರ ಬಳಕೆ ಇಳಿಸುವುದು, ನೈಸರ್ಗಿಕ ಕೃಷಿ ಹಾಗೂ ಸ್ವದೇಶಿ ಉತ್ಪನ್ನಗಳಿಗೆ ಉತ್ತೇಜನ ನೀಡುವಂತೆ ಪ್ರಧಾನಿ ಸಲಹೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!