ಕೆ.ಸಿ ವೇಣುಗೋಪಾಲ್ 
ದೇಶ

ಕೇರಳ CM ಆಯ್ಕೆ ಕಗ್ಗಂಟು: ವೇಣುಗೋಪಾಲ್ ಪರ ಕಾಂಗ್ರೆಸ್ ಹೈಕಮಾಂಡ್ ಒಲವು; ಮಲ್ಲಿಕಾರ್ಜುನ ಖರ್ಗೆಯಿಂದ ಇಂದೇ ಘೋಷಣೆ?

ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಅವರಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬೆಂಬಲವಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಿರುವನಂತಪುರ: ಕೇರಳದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತನ್ನ ಆಯ್ಕೆಯನ್ನು ಇನ್ನೂ ಬಹಿರಂಗಪಡಿಸಿಲ್ಲ, ಆದರೆ ಈ ಸಂಬಂಧ ಅಂತಿಮ ನಿರ್ಧಾರ ತೆಗೆದುಕೊಂಡಿರುವ ಸೂಚನೆಗಳಿದ್ದು.. ಸೋಮವಾರ ಅಥವಾ ಮಂಗಳವಾರ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಅವರಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬೆಂಬಲವಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇತರ ಇಬ್ಬರು ಅಭ್ಯರ್ಥಿಗಳಾದ ವಿ ಡಿ ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ನಾಲ್ಕು ಗಂಟೆಗಳ ಕಾಲ ನಡೆದ ಮ್ಯಾರಥಾನ್ ಚರ್ಚೆಗಳ ನಂತರ ಹೈಕಮಾಂಡ್ ಮೇಲೆ ಭರವಸೆ ಇಟ್ಟಿದ್ದರೂ, ಬಹುಪಾಲು ಶಾಸಕರು ಮತ್ತು ಸಂಸದರು ವೇಣುಗೋಪಾಲ್ ಅವರನ್ನು ಬೆಂಬಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಧಾನಸಭಾ ಚುನಾವಣಾ ಪ್ರಚಾರದ ಉದ್ದಕ್ಕೂ ವೇಣುಗೋಪಾಲ್ ಅವರ ಸಂಘಟನಾ ಕೌಶಲ್ಯ ಮತ್ತು ಕಾರ್ಯತಂತ್ರದ ಪಾತ್ರವನ್ನು ಹೈಕಮಾಂಡ್ ಪರಿಗಣನೆಗೆ ತೆಗೆದುಕೊಂಡಿದೆ ಎಂದು ತಿಳಿದು ಬಂದಿದೆ.

ಖರ್ಗೆಯಿಂದ ಅಧಿಕೃತ ಘೋಷಣೆ

ಕೇರಳ ಸಂಸದರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಇಬ್ಬರೂ ಇಲ್ಲಿ ಏನು ನಡೆಯುತ್ತಿದೆ ಎಂಬುದನ್ನು ನಿರ್ಣಯಿಸಲು ತಮ್ಮದೇ ಆದ ಮಾರ್ಗಗಳನ್ನು ಹೊಂದಿದ್ದಾರೆ. ಹೈಕಮಾಂಡ್ ರಾಜ್ಯ ನಾಯಕರ ವರದಿಗಳನ್ನು ಮಾತ್ರ ಅವಲಂಬಿಸಬೇಕಾದ ದಿನಗಳು ಹೋಗಿವೆ.

ಸಿಎಂ ಹುದ್ದೆಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳಲ್ಲಿಯೂ ಸಹ, ನಾಯಕತ್ವವು ವಾಸ್ತವದ ಬಗ್ಗೆ ತಿಳಿದಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದರು.

ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ಆಂತರಿಕ ಕಾರ್ಯವಿಧಾನಗಳನ್ನು ಪೂರ್ಣಗೊಳಿಸಿದ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಔಪಚಾರಿಕ ಘೋಷಣೆ ಮಾಡುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಗು ದೀರ್ಘಕಾಲ ಉಳಿಯಲ್ಲ: ಶಾಂತಿ ಪ್ರಸ್ತಾವನೆ ಮಾತುಕತೆ ನಡುವೆ ಟ್ರಂಪ್ ಎಚ್ಚರಿಕೆ!

3 ವರ್ಷ ಪೂರೈಸುವ ಮುನ್ನ ದೆಹಲಿಗೆ ಸಿದ್ದರಾಮಯ್ಯ ದೌಡು: ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ..!

ಹಿಮದ ಮಡಲಲ್ಲಿ ವಿಷ್ಣುವಿನ ಸನ್ನಿಧಿ: ಭಕ್ತಿ–ಪ್ರಕೃತಿಯ ಅಪೂರ್ವ ಸಂಗಮ ಬದರಿನಾಥ, ಆಧ್ಯಾತ್ಮಿಕ ಯಾತ್ರೆಯ ಸಂಪೂರ್ಣ ಮಾಹಿತಿ ಇಲ್ಲಿದೆ...

ರಾಹುಲ್- ವಿಜಯ್ ದೋಸ್ತಿಗೆ ಬೆದರಿತೆ ಕೇಂದ್ರ ಸರ್ಕಾರ? ರೀಲ್, ಪೋಟೋ, ಪೋಸ್ಟ್ ಬ್ಲಾಕ್ ಮಾಡಿದ Instagram? ಕಾಂಗ್ರೆಸ್ ಆರೋಪ

GBA ಚುನಾವಣೆಗೆ BJP ರಣತಂತ್ರ: ಮೋದಿ ಭೇಟಿ ಬೆನ್ನಲ್ಲೇ ಸಂಘಟನೆ ಚುರುಕು, ಮೇ.15ಕ್ಕೆ ಮಹತ್ವದ ಸಭೆ

SCROLL FOR NEXT