ಸಾಂದರ್ಭಿಕ ಚಿತ್ರ 
ದೇಶ

ಎರಡು ವರ್ಷದವೆರೆಗಿನ 'ಸಮ್ಮತಿಯ ಲೈಂಗಿಕ ಸಂಬಂಧ' ಅತ್ಯಾಚಾರವೇ? ಕೋರ್ಟ್ ಹೇಳಿದ್ದೇನು!

ಖಾನ್ ಥಾಣೆಯ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಇಬ್ಬರು ಹೆಣ್ಣುಮಕ್ಕಳಿರುವ ವಿಚ್ಛೇದಿತ ಸಂತ್ರಸ್ತೆಯೊಂದಿಗೆ ಸ್ನೇಹ ಬೆಳೆಸಿದ್ದ ಎಂದು ಪ್ರಾಸಿಕ್ಯೂಷನ್ ಆರೋಪಿಸಿದೆ.

ಥಾಣೆ: ಮದುವೆಯಾಗುವ ಭರವಸೆ ಆಧಾರದ ಮೇಲೆ ದೀರ್ಘಕಾಲದಿಂದ ಸಮ್ಮತಿಯ ಲೈಂಗಿಕ ಸಂಬಂಧ ಹೊಂದಿದ್ದರೆ ಅದನ್ನು ಅತ್ಯಾಚಾರ ಎಂದು ಅರ್ಥೈಸಲಾಗದು ಎಂದು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಸೆಷನ್ಸ್ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಅತ್ಯಾಚಾರ ಮತ್ತು ವಂಚನೆ ಆರೋಪ ಹೊತ್ತಿರುವ 33 ವರ್ಷದ ವ್ಯಕ್ತಿಯನ್ನು ಖುಲಾಸೆಗೊಳಿಸಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ರೂಬಿ ಯು ಮಾಲ್ವಂಕರ್ ಅವರು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಆರೋಪಿ ಶಹಬಾಜ್ ಮೊಹಮ್ಮದ್ ಸಲೀಂ ಖಾನ್ ಅವರನ್ನು ಅತ್ಯಾಚಾರ ಮತ್ತು ವಂಚನೆಯ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದರು. ಮೇ 2 ರಂದು ನೀಡಲಾದ ಈ ಆದೇಶದ ಪ್ರತಿಯನ್ನು ಭಾನುವಾರ ಬಹಿರಂಗಗೊಳಿಸಲಾಗಿದೆ.

ಖಾನ್ ಥಾಣೆಯ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಇಬ್ಬರು ಹೆಣ್ಣುಮಕ್ಕಳಿರುವ ವಿಚ್ಛೇದಿತ ಸಂತ್ರಸ್ತೆಯೊಂದಿಗೆ ಸ್ನೇಹ ಬೆಳೆಸಿದ್ದ ಎಂದು ಪ್ರಾಸಿಕ್ಯೂಷನ್ ಆರೋಪಿಸಿದೆ.

ಮದುವೆಯ ಭರವಸೆಯೊಂದಿಗೆ ಅವರಿಬ್ಬರು 2016 ಮತ್ತು 2018 ರ ನಡುವೆ ಪರಸ್ಪರ ಒಪ್ಪಿತ ಲೈಂಗಿಕ ಸಂಬಂಧ ಹೊಂದಿದ್ದರು. ಆದರೆ ತದನಂತರ ಮದುವೆಯಾಗುವುದಿಲ್ಲ ಎಂದು ಹೇಳಿದ್ದು, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿತ್ತು. ನ್ಯಾಯಾಲಯ ಆರೋಪಿಯನ್ನು ಖುಲಾಸೆಗೊಳಿಸುವಾಗ ಸಮ್ಮತಿಯ ಲೈಂಗಿಕ ಸಂಬಂಧ ಮತ್ತು ವಂಚನೆಯ ಉದ್ದೇಶದ ಬಗ್ಗೆ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿತು.

"ಎರಡು ವರ್ಷಗಳ ಕಾಲದ ಸಂಬಂಧ ಗಣನೀಯ ಅವಧಿಯಾಗಿದ್ದು, ಈ ಅವಧಿಯಲ್ಲಿ ಆಕೆ ಎಂದಿಗೂ ದೂರು ನೀಡಿಲ್ಲ ಅಥವಾ ತಾನು ಮೋಸ ಹೋಗಿದ್ದೇನೆಂದು ಭಾವಿಸಿಲ್ಲ. ಇದು ಆಕೆ ಲೈಂಗಿಕ ಸಂಬಂಧದಲ್ಲಿ ಸಮಾನವಾಗಿ ಭಾಗವಹಿಸಿದ್ದಾಳೆಂದು ಸೂಚಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಆರೋಪಿಯು ಸಂಬಂಧದ ಆರಂಭದಿಂದಲೂ ದೂರುದಾರರನ್ನು ವಂಚಿಸುವ ಅಥವಾ ಶೋಷಿಸುವ ದುರುದ್ದೇಶಪೂರಿತ ಉದ್ದೇಶವನ್ನು ಹೊಂದಿದ್ದನೆಂದು ಸಾಬೀತುಪಡಿಸಲು ಯಾವುದೇ ದಾಖಲೆಗಳಿಲ್ಲ ಎಂಬುದನ್ನು ನ್ಯಾಯಾಲಯ ಪರಿಗಣಿಸಿತು.

ಕ್ರಿಮಿನಲ್ ಬೆದರಿಕೆ ಮತ್ತು ಉದ್ದೇಶಪೂರ್ವಕ ಅವಮಾನದ ಬಗ್ಗೆ ಸಂತ್ರಸ್ತೆಯ ಸಾಕ್ಷ್ಯವು ಸಂಪೂರ್ಣವಾಗಿ ಅಸ್ಪಷ್ಟವಾಗಿದ್ದು, ಖಚಿತತೆ ಇಲ್ಲ ಎಂದು ನ್ಯಾಯಾಲಯ ಹೇಳಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..'.: ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು

West Asia war ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

ಚಿನ್ನಾಭರಣ ಖರೀದಿಸದಂತೆ ಮೋದಿ ಮನವಿ, ಪ್ರಧಾನಿ ಮಾತಿನ ಹಿಂದಿನ ಅರ್ಥವೇನು? ಇಲ್ಲಿದೆ ಉತ್ತರ

Madhya Pradesh: ಕುನೋ ಅಭಯಾರಣ್ಯಕ್ಕೆ ಮತ್ತೆರಡು ಚೀತಾಗಳ ಬಿಡುಗಡೆ, ಆಫ್ರಿಕನ್ ದೊಡ್ಡ ಬೆಕ್ಕುಗಳ ಸಂಖ್ಯೆ 53!

'ಡಿಂಪಲ್ ಕ್ವೀನ್' ಬಣ್ಣದ ಬದುಕಿಗೆ 14 ವರ್ಷದ ಸಂಭ್ರಮ: ರಚಿತಾ ರಾಮ್ ಸಿನಿಪಯಣಕ್ಕೆ ಶುಭಾಶಯಗಳ ಮಹಾಪೂರ!

SCROLL FOR NEXT