ಸಾಂದರ್ಭಿಕ ಚಿತ್ರ 
ದೇಶ

ಪಟೇಲ್ ಹುಡುಗಿಯರು ಬೇರೆ ಜಾತಿ ಹುಡುಗರನ್ನು ಮದುವೆಯಾಗುತ್ತಿದ್ದಾರೆ, ಏಕೆಂದರೆ...: UP ರಾಜ್ಯಪಾಲರ ಪುತ್ರಿ ಶಾಕಿಂಗ್ ಹೇಳಿಕೆ

ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರ ಪುತ್ರಿ ಅನಾರ್ ಪಟೇಲ್ ಅವರು ಸೋಮವಾರ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಲಖನೌ: ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರ ಪುತ್ರಿ ಅನಾರ್ ಪಟೇಲ್ ಅವರು ಸೋಮವಾರ ಶಾಕಿಂಗ್ ಹೇಳಿಕೆ ನೀಡಿದ್ದು, ಪಟೇಲ್ ಹುಡುಗಿಯರು ತಮ್ಮ ಸಮುದಾಯದ ಹೊರಗಿನ ಹುಡುಗರನ್ನು ಮದುವೆಯಾಗುತ್ತಿದ್ದಾರೆ. ಏಕೆಂದರೆ ನಮ್ಮ ಸಮುದಾಯದ ಅನೇಕ ಯುವಕರು 'ಸಾಕಷ್ಟು ಸಾಮರ್ಥ್ಯ' ಹೊಂದಿಲ್ಲ ಮತ್ತು ಮದ್ಯಪಾನ ಹಾಗೂ ಕೆಲಸದ ಕೊರತೆಯಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಲ್ಯುವಾ ಪಾಟಿದಾರ್ ಸಮುದಾಯವನ್ನು ಪ್ರತಿನಿಧಿಸುವ ಶ್ರೀ ಖೋಡಲ್ಧಾಮ್ ಟ್ರಸ್ಟ್(ಎಸ್‌ಕೆಟಿ) ಅಧ್ಯಕ್ಷೆಯಾಗಿರುವ ಅನಾರ್ ಪಟೇಲ್, ಸಮಾಜವು ಈ ವಿಷಯದ ಬಗ್ಗೆ ಪ್ರಾಥಮಿಕವಾಗಿ ಹೆಣ್ಣುಮಕ್ಕಳಿಗೆ ಸಲಹೆ ನೀಡುವುದನ್ನು ಏಕೆ ಮುಂದುವರಿಸುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಬನಸ್ಕಾಂತದ ಗಢ್ ಗ್ರಾಮದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅನಾರ್ ಪಟೇಲ್ ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

"(ಪಟೇಲ್) ಹುಡುಗಿಯರು ಇತರ ಸಮುದಾಯದ ಹುಡುಗರನ್ನು ಮದುವೆಯಾಗುತ್ತಿದ್ದಾರೆ. ಏಕೆಂದರೆ ಸಮುದಾಯದ ಅನೇಕ ಹುಡುಗರು ಸಾಕಷ್ಟು ಸಾಮರ್ಥ್ಯ ಹೊಂದಿಲ್ಲ. ನಮ್ಮ ಗಂಡು ಮಕ್ಕಳು ಮದ್ಯಪಾನ ಮಾಡುತ್ತಿದ್ದರೆ. ಹೊರಗೆ ತಿರುಗಾಡುತ್ತಿದ್ದರೆ ಮತ್ತು ಕೆಲಸ ಮಾಡದಿದ್ದರೆ ನಮ್ಮ ಹೆಣ್ಣುಮಕ್ಕಳು ಸಮುದಾಯದ ಹೊರಗೆ ಬೇರೆ ಜಾತಿಯ ಹುಡುಗರನ್ನು ಮದುವೆಯಾಗುತ್ತಾರೆ" ಎಂದು ಅವರು ಹೇಳಿದ್ದಾರೆ.

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅನಾರ್ ಪಟೇಲ್, ಸಮಾಜದಲ್ಲಿ ವಿಭಜನೆಗಳನ್ನು ಸೃಷ್ಟಿಸಲು ಕಾರಣರಾದವರನ್ನು ಗುರುತಿಸುವಂತೆ ಕರೆ ನೀಡಿದರು.

ಶ್ರೀ ಖೋಡಲ್ಧಾಮ್ ಟ್ರಸ್ಟ್ ಅನ್ನು ಲೆವಾ ಪಾಟಿದಾರ್ ಸಮುದಾಯವನ್ನು ಪ್ರತಿನಿಧಿಸುವ ಅತಿದೊಡ್ಡ ಸಂಸ್ಥೆ ಎಂದು ಶ್ಲಾಘಿಸಿದ ಅವರು, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಎಲ್ಲರಿಗೂ ಸಂಘಟನೆಯ ಬಗ್ಗೆ ಹೇಳಿಕೊಟ್ಟರು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶದಲ್ಲಿ ಇಂಧನ ಕೊರತೆ ಇಲ್ಲ, ಆದ್ರೆ...: ಪ್ರಧಾನಿ ಮೋದಿ ಹೇಳಿಕೆಗೆ ಕಾರಣ ನೀಡಿದ IGoM

Video: ಆರಂಭದಲ್ಲೇ TVK ಸರ್ಕಾರಕ್ಕೆ ವಿಘ್ನ: ತಮಿಳುನಾಡಿನ ಏಕೈಕ ಮಹಿಳಾ ಸಚಿವೆ ಎಸ್. ಕೀರ್ತನಾ ಪ್ರಮಾಣವಚನಕ್ಕೆ ಬ್ರೇಕ್, Video!

ಪಂಜಾಬ್ AAP ದೊಡ್ಡ ಹೊಡೆತ: ಸಿಎಂ ಭಗವಂತ್ ಮಾನ್ ಸೋದರ ಸಂಬಂಧಿ ಬಿಜೆಪಿಗೆ ಸೇರ್ಪಡೆ!

ಬಿಜೆಪಿಗೆ ಬಿಗ್ ಶಾಕ್: 'ಮರುಎಣಿಕೆ' ಫಲಿತಾಂಶಕ್ಕೆ ಸುಪ್ರೀಂ ತಡೆ; ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್ ಕಥೆ ಏನು?

VIDEO: ಹೆಣ್ಣುಮಕ್ಕಳಿಗೆ ಶಿಕ್ಷಣದ ಅಗತ್ಯವೇನಿದೆ? ಮನೆಯೊಳಗೆ ಇರಬೇಕು: ಬಿಹಾರ ಶಿಕ್ಷಣ ಸಚಿವ ಮಿಥಿಲೇಶ್ ವಿವಾದಾತ್ಮಕ ಹೇಳಿಕೆ

SCROLL FOR NEXT