ನಯಾಬ್ ಸಿಂಗ್ ಸೈನಿ-ಜ್ಞಾನ್ ಸಿಂಗ್ ಮಾನ್ 
ದೇಶ

ಪಂಜಾಬ್ AAP ದೊಡ್ಡ ಹೊಡೆತ: ಸಿಎಂ ಭಗವಂತ್ ಮಾನ್ ಸೋದರ ಸಂಬಂಧಿ ಬಿಜೆಪಿಗೆ ಸೇರ್ಪಡೆ!

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರ ಸೋದರ ಸಂಬಂಧಿ ಜ್ಞಾನ್ ಸಿಂಗ್ ಮಾನ್ ಭಾರತೀಯ ಜನತಾ ಪಕ್ಷಕ್ಕೆ (BJP) ಸೇರ್ಪಡೆಗೊಂಡಿದ್ದಾರೆ. ಅವರು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಪಂಜಾಬ್ ಬಿಜೆಪಿ ರಾಜ್ಯ ಅಧ್ಯಕ್ಷ ಸುನಿಲ್ ಜಾಖರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರ ಸೋದರ ಸಂಬಂಧಿ ಜ್ಞಾನ್ ಸಿಂಗ್ ಮಾನ್ ಭಾರತೀಯ ಜನತಾ ಪಕ್ಷಕ್ಕೆ (BJP) ಸೇರ್ಪಡೆಗೊಂಡಿದ್ದಾರೆ. ಅವರು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಪಂಜಾಬ್ ಬಿಜೆಪಿ ರಾಜ್ಯ ಅಧ್ಯಕ್ಷ ಸುನಿಲ್ ಜಾಖರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಜಿಂದರ್ ಸಿಂಗ್ ಕೂಡ ಅವರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ನಾನು ಭಗವಂತ್ ಮಾನ್ ಅವರ ಮಾವನ ಮಗ. ನಾನು 2014ರಿಂದ ಅವರೊಂದಿಗೆ ಇದ್ದೇನೆ. ಆದರೆ ಆಮ್ ಆದ್ಮಿ ಪಕ್ಷದ ನೀತಿಗಳು ಮತ್ತು ದೆಹಲಿಯಿಂದ ಬಂದ ಜನರ ಅನಿಯಂತ್ರಿತತೆ ಮತ್ತು ಭ್ರಷ್ಟಾಚಾರದಿಂದಾಗಿ ನಾನು ಪಕ್ಷವನ್ನು ತೊರೆದಿದ್ದೇನೆ. ಈಗ ನಾನು ಪಂಜಾಬ್‌ನಲ್ಲಿ ಬಿಜೆಪಿಗಾಗಿ ಕೆಲಸ ಮಾಡಲು ಬಯಸುತ್ತೇನೆ. ಇದು ನನ್ನ ಪಕ್ಷ ಎಂದು ಹೇಳಿದರು. ಇದರೊಂದಿಗೆ, ಪಂಜಾಬ್ ರಾಜಕೀಯದಲ್ಲಿ ವಾಗ್ವಾದ ತೀವ್ರಗೊಂಡಿದೆ.

ಆಮ್ ಆದ್ಮಿ ಪಕ್ಷದ ಮೇಲೆ ಸುನೀಲ್ ಜಾಖರ್ ವಾಗ್ದಾಳಿ ನಡೆಸುತ್ತಾ, ಎಎಪಿ ನಿರಂತರವಾಗಿ ಜಾರಿ ನಿರ್ದೇಶನಾಲಯ (ಇಡಿ) ಬಗ್ಗೆ ಮಾತನಾಡುತ್ತದೆ, ಆದರೆ ಪಂಜಾಬ್ ಸರ್ಕಾರವೇ ಧಾಬಾದ ಮೇಲೆ ಜಿಎಸ್‌ಟಿ ದಾಳಿ ನಡೆಸಿದೆ ಎಂದು ಹೇಳಿದರು. ಲುಧಿಯಾನ ಮತ್ತು ಅಮೃತಸರದಲ್ಲಿ ಎಎಪಿ ನಾಯಕರು ಗೂಂಡಾಗಿರಿಯಲ್ಲಿ ತೊಡಗಿದ್ದಾರೆ ಎಂದು ಅವರು ಹೇಳಿದರು. ಈಗ, ಇಡಿ ಮತ್ತು ಸಿಬಿಐ ದಾಳಿಗಳು ನಿಲ್ಲುವುದಿಲ್ಲ. ಎಲ್ಲರನ್ನೂ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದರು.

ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಮನೆಯಲ್ಲಿ ಈಗ ಬಿಜೆಪಿ ಧ್ವಜ ಹಾರಿಸಲಾಗುವುದು ಎಂದು ಅವರು ಹೇಳಿದರು. ಈ ಹೇಳಿಕೆ ಪಂಜಾಬ್ ರಾಜಕೀಯವನ್ನು ಮತ್ತಷ್ಟು ಕೆರಳಿಸಿತು. ಹಾಜರಿದ್ದ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಆಮ್ ಆದ್ಮಿ ಪಕ್ಷ ಮತ್ತು ಅರವಿಂದ್ ಕೇಜ್ರಿವಾಲ್ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ-ಅಮೆರಿಕ ಬಾಂಧವ್ಯ ಮತ್ತಷ್ಟು ಗಟ್ಟಿ; ಶೀಘ್ರದಲ್ಲೇ ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಹಿ, 2027ರಲ್ಲಿ ಟ್ರಂಪ್ ಭಾರತಕ್ಕೆ..!

ಕೋರ್ಟ್ ಆದೇಶವಿದ್ದರೂ ಧರ್ಮಸ್ಥಳ, ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠ್ಠಲ್ ಗೌಡ ವಿರುದ್ಧ ಬಂಧನ​​​​​​ ವಾರಂಟ್

NEET ಆಯ್ತು, ಈಗ TET ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ; ನಾಳೆ ನಡೆಯಬೇಕಿದ್ದ ಟಿಇಟಿ ಪರೀಕ್ಷೆ ಮುಂದೂಡಿದ ಮಹಾರಾಷ್ಟ್ರ ಸರ್ಕಾರ!

ಮೆಜೆಸ್ಟಿಕ್ ಚಿತ್ರ ನಿರ್ಮಾಪಕ ಭಾಮಾ ಹರೀಶ್ ಪುತ್ರ ಉಲ್ಲಾಸ್ ಗೌಡ ಹೃದಯಾಘಾತದಿಂದ ನಿಧನ!

ಇಸ್ಲಾಂಗೆ ಮತಾಂತರಗೊಂಡರೆ ಹಿಂದುಳಿದ ವರ್ಗಗಗಳ ಸ್ಥಾನಮಾನ ಸಿಗಲ್ಲ: ಹೈಕೋರ್ಟ್ ಐತಿಹಾಸಿಕ ತೀರ್ಪು!