ಮಲಪ್ಪುರಂ: ಕೇರಳದಲ್ಲಿ ದುರಂತ ಘಟನೆಯೊಂದರಲ್ಲಿ, ಮಂಗಳವಾರ ಮಲಪ್ಪುರಂ ಜಿಲ್ಲೆಯ ಮಂಕಡದಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.
ಇಂದು ಸಂಜೆ ಪಂತಲ್ಲೂರು ಬೆಟ್ಟದಲ್ಲಿ ಈ ಭೀಕರ ಘಟನೆ ನಡೆದಿದ್ದು, ಒಟ್ಟು ಏಳು ವಿದ್ಯಾರ್ಥಿಗಳಿಗೆ ಸಿಡಿಲು ಬಡಿದಿದೆ.
ಸ್ಥಳೀಯ ವೀಕ್ಷಣಾ ಸ್ಥಳಕ್ಕೆ ಭೇಟಿ ನೀಡಿದಾಗ ಈ ದುರಂತ ಸಂಭವಿಸಿದೆ. ಮೃತರನ್ನು ರಹೀಸ್(20), ಫಹಾದ್(19), ಬಹಾಸ್(18) ಮತ್ತು ಜಿಯಾದ್(18) ಎಂದು ಗುರುತಿಸಲಾಗಿದೆ. ಇತರ ಇಬ್ಬರು ವಿದ್ಯಾರ್ಥಿಗಳು ಪ್ರಸ್ತುತ ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಎಲ್ಲಾ ವಿದ್ಯಾರ್ಥಿಗಳು ಮಲ್ಲಪುರಂ ಮೂಲದವರಾಗಿದ್ದು, ಮಂಕಡದ ವೆಳ್ಳಿಲಾ ಪ್ರದೇಶದಲ್ಲಿರುವ ಪಂಥಲ್ಲೂರ್ ಬೆಟ್ಟದ ವೀಕ್ಷಣಾ ಸ್ಥಳಕ್ಕೆ ಆಗಮಿಸಿದ್ದರು ಎನ್ನಲಾಗಿದೆ.
ಇನ್ನೂ ಕಾಡಿನ ಮಧ್ಯೆ ದುರ್ಗಮ ಪ್ರದೇಶವಾದ ಕಾರಣ ರಕ್ಷಣಾ ಕಾರ್ಯಾಚರಣೆ ವಿಳಂಬವಾಗಿದೆ. ಅನಿರೀಕ್ಷಿತವಾಗಿ ಸುರಿದ ಭಾರೀ ಮಳೆ ನಡುವೆ ಗುಡುಗು ಸಿಡಿಲಿನ ಆರ್ಭಟವೂ ಜೋರಾಗಿದೆ.