ಅಪರ್ಣಾ ಮತ್ತು ಪ್ರತೀಕ್ ಯಾದವ್ 
ದೇಶ

ಮುಲಾಯಂ ಸಿಂಗ್ ಯಾದವ್ ಪುತ್ರ ಪ್ರತೀಕ್ ನಿಧನ: 38 ವರ್ಷಕ್ಕೆ ಇಹಲೋಕ ತ್ಯಜಿಸಿದ BJP ನಾಯಕಿ ಅಪರ್ಣಾ ಪತಿ!

ಫಿಟ್ನೆಸ್ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಪ್ರತೀಕ್‌, ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. ಅವರ ಪತ್ನಿ ಅಪರ್ಣಾ ಯಾದವ್ ಬಿಜೆಪಿ ನಾಯಕಿಯಾಗಿದ್ದಾರೆ.

ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಪುತ್ರ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಅವರ ಮಲಸಹೋದರ ಪ್ರತೀಕ್ ಯಾದವ್(38) ಲಖ್ನೋದ ಸಿವಿಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಫಿಟ್ನೆಸ್ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಪ್ರತೀಕ್‌, ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. ಅವರ ಪತ್ನಿ ಅಪರ್ಣಾ ಯಾದವ್ ಬಿಜೆಪಿ ನಾಯಕಿಯಾಗಿದ್ದಾರೆ.

ಪ್ರತೀಕ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಸಮಾಜವಾದಿ ಪಕ್ಷ, ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದೆ. ಪ್ರತೀಕ್ ಯಾದವ್ ಅವರ ನಿಧನವು ತೀವ್ರ ದುಃಖ ತಂದಿದೆ. ಭಗವಂತನು ಅಗಲಿದ ಆತ್ಮಕ್ಕೆ ಶಾಂತಿ ನೀಡಲಿ ಎಂದು ಬರೆದುಕೊಂಡಿದೆ.

ಪ್ರತೀಕ್ ಯಾದವ್ ಅವರ ಸಾವಿಗೆ ನಿಖರವಾದ ಕಾರಣ ಮರಣೋತ್ತರ ಪರೀಕ್ಷೆಯ ವರದಿ ಬಿಡುಗಡೆಯಾದ ನಂತರವೇ ತಿಳಿದುಬರಲಿದೆ. ಆದಾಗ್ಯೂ, ಪ್ರಕರಣವು ಅತ್ಯಂತ ಅನುಮಾನಾಸ್ಪದವಾಗಿದೆ. ವೈದ್ಯರ ತಂಡವು ಪ್ರತೀಕ್ ಯಾದವ್ ಅವರ ಆರಂಭಿಕ ಮರಣೋತ್ತರ ಪರೀಕ್ಷೆಯನ್ನು ನಡೆಸುತ್ತಿದೆ.

ಮರಣೋತ್ತರ ಪರೀಕ್ಷೆಯನ್ನು ವೀಡಿಯೊ ಚಿತ್ರೀಕರಣ ಮಾಡಲಾಗುತ್ತಿದೆ. ಬುಧವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಅವರ ಮನೆಯ ಅಡುಗೆಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪ್ರತೀಕ್ ಯಾದವ್ ಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ದೇಹದ ಮೇಲೆ ಕೆಲವು ಗಾಯಗಳು ಸಹ ಕಂಡುಬಂದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

LOP ಅಂದ್ರೆ 'ರಬ್ಬರ್ ಸ್ಟ್ಯಾಂಪ್' ಅಲ್ಲ: CBI ನಿರ್ದೇಶಕರ ಆಯ್ಕೆ ಪ್ರಕ್ರಿಯೆ ವಿರುದ್ಧ ತಿರುಗಿಬಿದ್ದ ರಾಹುಲ್!

'ಆಪರೇಷನ್ ಸಿಂಧೂರ್' ವೇಳೆ ಪಾಕಿಸ್ತಾನಕ್ಕೆ ಚೀನಾದ ಬೆಂಬಲ: ನಮಗೆ ತಿಳಿದಿತ್ತು, ಜವಾಬ್ದಾರಿಯುತ ದೇಶಗಳು ಯೋಚಿಸಬೇಕು- MEA

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ದೊಡ್ಡ ಅವಮಾನ: ಬಿಡದಿ ಟೌನ್ ಶಿಪ್; ಇಡೀ ದೇಶದಲ್ಲಿ ಯಾರೂ ನಮ್ಮಂತೆ ಪರಿಹಾರ ನೀಡಿಲ್ಲ- ಡಿಕೆ ಶಿವಕುಮಾರ್

KPSC ಹಾಳಾಗೋಕೆ ಕಾರಣ ಕಾಂಗ್ರೆಸ್: ಎಲ್ಲವನ್ನೂ ತೊಳೀತೀನಿ ಅಂತಾ ಹೇಳಿದ ಸಿಎಂ ಏನು ಮಾಡಿದ್ರು?

ರಾಜ್ಯದ ಆರು ಗ್ರಾಮ ಪಂಚಾಯತಿಗಳಿಗೆ ಕೇಂದ್ರದ ನಗದು ಪುರಸ್ಕಾರ: ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದನೆ!

SCROLL FOR NEXT