ಸಿಎಂ ವಿಜಯ್ ಜೋಸೆಫ್ ಮತ್ತು ರಿಕಿ ರಾಧನ್ ಪಂಡಿತ್ 
ದೇಶ

ತೀವ್ರ ಟೀಕೆ: ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಒಎಸ್‌ಡಿ ನೇಮಕಾತಿ ಹಿಂಪಡೆದ ತಮಿಳು ನಾಡು CM ಜೋಸೆಫ್ ವಿಜಯ್

ನಿನ್ನೆ ಪ್ರಕಟಗೊಂಡಿದ್ದ ಈ ನೇಮಕಾತಿಗೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ವ್ಯಕ್ತಿಗೆ ಸರ್ಕಾರದ ಅಧಿಕೃತ ಹುದ್ದೆ ನೀಡಿರುವುದನ್ನು ಪ್ರಶ್ನಿಸಿ ವಿವಿಧ ವಲಯಗಳಿಂದ ಟೀಕೆಗೆ ಗುರಿಯಾಗಿತ್ತು.

ಚೆನ್ನೈ: ತಮಿಳುನಾಡು ವಿಧಾನಸಭೆಯ ವಿಶ್ವಾಸಮತದ ಸಂದರ್ಭದಲ್ಲಿ ಜ್ಯೋತಿಷಿ ಹಾಗೂ ಟಿವಿಕೆ ವಕ್ತಾರ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ (ರಾಜಕೀಯ) ಹುದ್ದೆಗೆ ನೇಮಿಸಿದ್ದ ವಿಚಾರಕ್ಕೆ ಸರ್ಕಾರದ ಮಿತ್ರಪಕ್ಷಗಳು ಹಾಗೂ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ, ತಮಿಳುನಾಡು ಸರ್ಕಾರ ಇಂದು ಬುಧವಾರ ಅವರ ನೇಮಕಾತಿ ಆದೇಶವನ್ನು ಹಿಂಪಡೆದಿದೆ.

ನಿನ್ನೆ ಪ್ರಕಟಗೊಂಡಿದ್ದ ಈ ನೇಮಕಾತಿಗೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ವ್ಯಕ್ತಿಗೆ ಸರ್ಕಾರದ ಅಧಿಕೃತ ಹುದ್ದೆ ನೀಡಿರುವುದನ್ನು ಪ್ರಶ್ನಿಸಿ ವಿವಿಧ ವಲಯಗಳಿಂದ ಟೀಕೆಗೆ ಗುರಿಯಾಗಿತ್ತು. ವಿಶೇಷವಾಗಿ ವಿಸಿಕೆ, ಡಿಎಂಡಿಕೆ ಹಾಗೂ ಎಡಪಂಥೀಯ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು. ಸಾಮಾಜಿಕ ಜಾಲತಾಣಗಳಲ್ಲಿಯೂ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿತ್ತು.

ವಿಧಾನಸಭೆಯಲ್ಲಿ ಮಾತನಾಡಿದ ವಿಸಿಕೆ ಶಾಸಕ ವನ್ನಿ ಅರಸು, ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡುತ್ತಿರುವ ತಮ್ಮ ಪಕ್ಷದ ಪರವಾಗಿ, ಮಹಾರಾಷ್ಟ್ರ ಮತ್ತು ಕರ್ನಾಟಕದ ಮಾದರಿಯಲ್ಲಿ ಮೂಢನಂಬಿಕೆ ಮೂಲಕ ಜನರನ್ನು ಶೋಷಿಸುವವರ ವಿರುದ್ಧ ಕಾನೂನು ಜಾರಿಗೆ ತರಬೇಕೆಂದು ಒತ್ತಾಯಿಸಿದರು. ಅವರು ನಿನ್ನೆಯೇ ಈ ನೇಮಕಾತಿಯನ್ನು ವಿರೋಧಿಸಿ ಹೇಳಿಕೆ ನೀಡಿದ್ದರು.

ಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಕೂಡ ನೇಮಕಾತಿಯನ್ನು ಖಂಡಿಸಿ, ಅವರು ನಿಮ್ಮ ರಾಜಗುರು ಆಗಿದ್ದರೆ ಅದು ವೈಯಕ್ತಿಕ ವಿಷಯ. ಆದರೆ ಅವರಿಗೆ ಉನ್ನತ ಸರ್ಕಾರಿ ಹುದ್ದೆ ನೀಡುವುದು ಒಪ್ಪಲಾಗುವುದಿಲ್ಲ. ಅನೇಕ ಯುವಕರು ನಿಮಗೆ ಮತ ಹಾಕಿದ್ದಾರೆ. ಅವರಿಗೆ ನೀವು ಯಾವ ಸಂದೇಶ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದರು.

ಈ ಟೀಕೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ನಿರ್ಧಾರವನ್ನು ಮರುಪರಿಶೀಲಿಸುವುದಾಗಿ ತಿಳಿಸಿದ್ದರು. ಇಂದು ಸರ್ಕಾರ ನೇಮಕಾತಿ ಆದೇಶವನ್ನು ರದ್ದುಗೊಳಿಸಿದೆ.

ಇದೇ ವೇಳೆ, ತಿರುವಳ್ಳೂರು ಜಿಲ್ಲೆಯ ಕೀಳನೂರು ಗ್ರಾಮದ ವಕೀಲ ಆರ್ ರತಿ ಅವರು ಮದ್ರಾಸ್ ಹೈಕೋರ್ಟ್‌ನಲ್ಲಿ ಕ್ವೋ ವಾರಂಟೊ ಅರ್ಜಿ ಸಲ್ಲಿಸಿ, ಸಾರ್ವಜನಿಕ ಇಲಾಖೆ ಹೊರಡಿಸಿದ್ದ ಆದೇಶದ ಆಧಾರದ ಮೇಲೆ ರಿಕ್ಕಿ ರಾಧನ್ ಪಂಡಿತ್ ಅವರು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ (ರಾಜಕೀಯ) ಹುದ್ದೆ ವಹಿಸಿಕೊಳ್ಳುವ ಅಧಿಕಾರವನ್ನು ಪ್ರಶ್ನಿಸಿದ್ದರು.

ಅವರು ಅರ್ಜಿಯಲ್ಲಿ, ಉಮಾದೇವಿ ಪ್ರಕರಣದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಸರ್ಕಾರದ ಯಾವುದೇ ಸೇವಾ ನೇಮಕಾತಿ ಅಥವಾ ಸಾರ್ವಜನಿಕ ಹುದ್ದೆಯ ನೇಮಕಾತಿ ಸಂವಿಧಾನದ ವಿಧಿ 309 ಅಡಿಯಲ್ಲಿ ರೂಪಿಸಲಾದ ನಿಯಮಾವಳಿಗಳ ಪ್ರಕಾರವೇ ನಡೆಯಬೇಕು ಎಂದು ಹೇಳಿರುವುದನ್ನು ಉಲ್ಲೇಖಿಸಿದ್ದರು. ಸಂವಿಧಾನಾತ್ಮಕ ವ್ಯವಸ್ಥೆ ಹೊರತಾಗಿ ಯಾವುದೇ ನೇಮಕಾತಿ ಸಾಧ್ಯವಿಲ್ಲ ಎಂದು ವಾದಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Tamil Nadu Assembly floor test: ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್, ನಿರೀಕ್ಷೆಗೂ ಮೀರಿ 144 ಶಾಸಕರ ಬೆಂಬಲ, AIADMK ಛಿದ್ರ!

Tamil Nadu Assembly: ವಿಜಯ್ ವಿಶ್ವಾಸಮತ ಯಾಚನೆ, ಕಾಂಗ್ರೆಸ್, ಸಿಪಿಎಂ, ವಿಸಿಕೆ ಬೆಂಬಲ ಘೋಷಣೆ!

ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳದಂತೆ TVK ಶಾಸಕನಿಗೆ ಹೈಕೋರ್ಟ್ ತಡೆ! 'ಅಮಾನವೀಯ ನಡೆ' ಎಂದ ಸುಪ್ರೀಂಕೋರ್ಟ್

ಮಿತವ್ಯಯಕ್ಕೆ ಪ್ರಧಾನಿ ಮೋದಿ ಹೆಜ್ಜೆ: ಎಸ್‌ಪಿಜಿ ಭದ್ರತಾ ಪಡೆ ವಾಹನಗಳ ಸಂಖ್ಯೆ ಶೇ.50ರಷ್ಟು ಕಡಿತ,ಬಿಜೆಪಿ ಸಿಎಂಗಳಿಗೂ ಸೂಚನೆ, EV ಗೆ ಆದ್ಯತೆ

ಉದಯನಿಧಿಯ 'ಸನಾತನ ವಿರೋಧಿ' ಹೇಳಿಕೆ: ವಿಧಾನಸಭೆ ಕಡತಗಳಿಂದ ತೆಗೆದುಹಾಕಲು VHP ಒತ್ತಾಯ!

SCROLL FOR NEXT