ಕೆ ಸಿ ವೇಣುಗೋಪಾಲ್  
ದೇಶ

ಕೇರಳ ಸಿಎಂ ರೇಸ್‌ನಲ್ಲಿ ಕೆ ಸಿ ವೇಣುಗೋಪಾಲ್ ಮೇಲುಗೈ; ಇಂದು ಹೈಕಮಾಂಡ್ ಅಂತಿಮ ನಿರ್ಧಾರ ಸಾಧ್ಯತೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಅವರು ಹೊಸದಾಗಿ ಆಯ್ಕೆಯಾದ ಬಹುಪಾಲು ಶಾಸಕರ ಬೆಂಬಲದೊಂದಿಗೆ ಮುಖ್ಯಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿ ಮುನ್ನಡೆ ಸಾಧಿಸಿರುವಂತೆ ಕಾಣುತ್ತಿದೆ.

ನವದೆಹಲಿ/ತಿರುವನಂತಪುರಂ: ಕೇರಳದ ಮುಂದಿನ ಮುಖ್ಯಮಂತ್ರಿಯ ಆಯ್ಕೆ ಕುರಿತಾಗಿ ಕಾಂಗ್ರೆಸ್ ಹೈಕಮಾಂಡ್‌ನ ನಿರ್ಧಾರ ಕುರಿತು ಕುತೂಹಲ ಹೆಚ್ಚುತ್ತಿರುವ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಜಿ ಕೆಪಿಸಿಸಿ ಅಧ್ಯಕ್ಷರು ಮತ್ತು ಹಿರಿಯ ನಾಯಕರೊಂದಿಗೆ ನಡೆಸಿದ ಸಮಾಲೋಚನೆಗಳು ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಅವರಿಗೆ ದೊಡ್ಡ ಹಿನ್ನಡೆಯಾಗಿವೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಅವರು ಹೊಸದಾಗಿ ಆಯ್ಕೆಯಾದ ಬಹುಪಾಲು ಶಾಸಕರ ಬೆಂಬಲದೊಂದಿಗೆ ಮುಖ್ಯಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿ ಮುನ್ನಡೆ ಸಾಧಿಸಿರುವಂತೆ ಕಾಣುತ್ತಿದ್ದು, ಪಕ್ಷ ಇಂದು ತನ್ನ ಅಂತಿಮ ಆಯ್ಕೆಯನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕೆಲ ನಾಯಕರ ಒತ್ತಡ ತಂತ್ರವಾಗಿ ರೂಪಿಸಿದ್ದವು. ಈ ಬೆಳವಣಿಗೆಗಳು ಪಕ್ಷದ ನಾಯಕತ್ವವನ್ನು ಅಸಮಾಧಾನಗೊಳಿಸಿದ್ದು, ಇದರಿಂದ ವೇಣುಗೋಪಾಲ್ ಅವರಿಗೆ ಅವಕಾಶಗಳು ಇನ್ನಷ್ಟು ಹೆಚ್ಚಾಗಬಹುದು ಎಂದು ಹೇಳಲಾಗಿದೆ.

ರಾಹುಲ್ ಗಾಂಧಿ ಮುಂದಿನ ಮುಖ್ಯಮಂತ್ರಿ ಕುರಿತು ನಾಯಕರ ಅಭಿಪ್ರಾಯ ಕೇಳುತ್ತಾರೆ ಎಂಬ ನಿರೀಕ್ಷೆ ಇದ್ದರೂ, “ಆ ವಿಷಯವೇ ಚರ್ಚೆಗೆ ಬಂದಿಲ್ಲ ಎಂದು ಹಿರಿಯ ನಾಯಕರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ. ಬಹುತೇಕ ನಾಯಕರು ಈಗಾಗಲೇ ತಮ್ಮ ಅಭಿಪ್ರಾಯಗಳನ್ನು ಪಕ್ಷದ ವೀಕ್ಷಕರಿಗೆ ತಿಳಿಸಿದ್ದರು ಎಂದು ಅವರು ಹೇಳಿದರು.

ಒಂದು ಹಂತದಲ್ಲಿ, ಪಕ್ಷದ ಅಧಿಕೃತ ಪ್ರಚಾರಕ್ಕಾಗಿ ರಚಿಸಲಾದ ಸಾಮಾಜಿಕ ಜಾಲತಾಣ ವೇದಿಕೆಗಳನ್ನು ಹೇಗೆ ದುರುಪಯೋಗ ಮಾಡಲಾಗುತ್ತಿದೆ ಎಂಬುದರ ಬಗ್ಗೆ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಹೊರಗಿನ ಕೆಲವು ವಲಯಗಳು ಲಾಬಿ ಮತ್ತು ಹಿಂದಿನಿಂದ ಒತ್ತಡ ತಂತ್ರಗಳ ಮೂಲಕ ಪಕ್ಷದ ನಿರ್ಧಾರ ಪ್ರಕ್ರಿಯೆಗೆ ಪ್ರಭಾವ ಬೀರುವ ಪ್ರಯತ್ನ ಮಾಡುತ್ತಿರುವ ಬಗ್ಗೆ ಕೂಡ ಅವರು ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಮತ್ತೊಬ್ಬ ನಾಯಕ ಹೇಳಿದರು.

ರಾಹುಲ್ ಗಾಂಧಿ ಅವರು ಮಾಜಿ ಕೆಪಿಸಿಸಿ ಅಧ್ಯಕ್ಷರಾದ ಕೆ ಮುರಳೀಧರನ್, ವಿ ಎಂ ಸುಧೀರನ್ ಮತ್ತು ಎಂ ಎಂ ಹಾಸನ್ ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ತಿರುವಂಕೂರು ರಾಧಾಕೃಷ್ಣನ್ ಹಾಗೂ ಕಾರ್ಯಾಧ್ಯಕ್ಷರಾದ ಎ ಪಿ ಅನಿಲ್ ಕುಮಾರ್, ಪಿ ಸಿ ವಿಷ್ಣುನಾಥ್ ಮತ್ತು ಶಾಫಿ ಪರಂಬಿಲ್ ಅವರೊಂದಿಗೆ ವೈಯಕ್ತಿಕವಾಗಿ ಮಾತುಕತೆ ನಡೆಸಿದರು.

ಇದಲ್ಲದೆ, ಮುನ್ನಪಲ್ಲಿ ರಾಮಚಂದ್ರನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಹ ಸಭೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Tamil Nadu Assembly floor test: ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್, ನಿರೀಕ್ಷೆಗೂ ಮೀರಿ 144 ಶಾಸಕರ ಬೆಂಬಲ, AIADMK ಛಿದ್ರ!

Tamil Nadu Assembly: ವಿಜಯ್ ವಿಶ್ವಾಸಮತ ಯಾಚನೆ, ಕಾಂಗ್ರೆಸ್, ಸಿಪಿಎಂ, ವಿಸಿಕೆ ಬೆಂಬಲ ಘೋಷಣೆ!

ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳದಂತೆ TVK ಶಾಸಕನಿಗೆ ಹೈಕೋರ್ಟ್ ತಡೆ! 'ಅಮಾನವೀಯ ನಡೆ' ಎಂದ ಸುಪ್ರೀಂಕೋರ್ಟ್

ಮಿತವ್ಯಯಕ್ಕೆ ಪ್ರಧಾನಿ ಮೋದಿ ಹೆಜ್ಜೆ: ಎಸ್‌ಪಿಜಿ ಭದ್ರತಾ ಪಡೆ ವಾಹನಗಳ ಸಂಖ್ಯೆ ಶೇ.50ರಷ್ಟು ಕಡಿತ,ಬಿಜೆಪಿ ಸಿಎಂಗಳಿಗೂ ಸೂಚನೆ, EV ಗೆ ಆದ್ಯತೆ

ಬೆಂಗಳೂರು: ಪ್ರಧಾನಿ ಮೋದಿ ಸಾಗುತ್ತಿದ್ದ ಮಾರ್ಗದಲ್ಲಿ ಟೈಮರ್ ಪತ್ತೆ! ದೊಡ್ಡ ಸಂಚಿನ ಶಂಕೆ

SCROLL FOR NEXT