ಸಿಎಂ ಸುವೇಂದು ಅಧಿಕಾರಿ  
ದೇಶ

ವಿಧಾನಸಭೆ ಮೆಟ್ಟಿಲುಗಳಿಗೆ ದಂಡ ನಮಸ್ಕಾರ ಮಾಡಿ ಪ್ರವೇಶಿಸಿದ ಪ.ಬಂಗಾಳ ಸಿಎಂ ಸುವೇಂದು ಅಧಿಕಾರಿ-Viral Video

ನಂದಿಗ್ರಾಮ ಮತ್ತು ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯಾಗಿದ್ದ ಭವಾನಿಪುರ ಕ್ಷೇತ್ರಗಳಲ್ಲೂ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ನಾಯಕ ಸುಬೇಂದು ಅಧಿಕಾರಿ, “ಪ್ರಜಾಪ್ರಭುತ್ವದ ದೇವಾಲಯ”ವೆಂದೇ ಕರೆಯಲ್ಪಡುವ ವಿಧಾನಸಭೆಗೆ ಗೌರವ ಸೂಚಿಸಿದ ಕ್ರಮಕ್ಕೆ ಪ್ರಶಂಸೆ ಪಡೆದರು.

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಇಂದು ಬುಧವಾರ ವಿಧಾನಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ವಿಧಾನಸಭೆಯ ಮೆಟ್ಟಿಲುಗಳಿಗೆ ದಂಡ ನಮಸ್ಕಾರ ಮಾಡುವ ಮೂಲಕ ಗಮನ ಸೆಳೆದರು. ಬಿಜೆಪಿ 207 ಸ್ಥಾನಗಳನ್ನು ಗೆದ್ದು ತೃಣಮೂಲ ಕಾಂಗ್ರೆಸ್‌ನ 15 ವರ್ಷದ ಆಡಳಿತಕ್ಕೆ ಅಂತ್ಯ ಹಾಡಿದೆ.

ನಂದಿಗ್ರಾಮ ಮತ್ತು ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯಾಗಿದ್ದ ಭವಾನಿಪುರ ಕ್ಷೇತ್ರಗಳಲ್ಲೂ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ನಾಯಕ ಸುಬೇಂದು ಅಧಿಕಾರಿ, “ಪ್ರಜಾಪ್ರಭುತ್ವದ ದೇವಾಲಯ”ವೆಂದೇ ಕರೆಯಲ್ಪಡುವ ವಿಧಾನಸಭೆಗೆ ಗೌರವ ಸೂಚಿಸಿದ ಕ್ರಮಕ್ಕೆ ಪ್ರಶಂಸೆ ಪಡೆದರು.

ವಿರೋಧ ಪಕ್ಷದ ನಾಯಕರಾಗಿದ್ದ ಅವಧಿಯಲ್ಲಿ ಅಮಾನತು ಸೇರಿದಂತೆ ಹಲವು ಸವಾಲುಗಳನ್ನು ಎದುರಿಸಿದ್ದ ಅವರು ಇಂದು ನಡೆದುಕೊಂಡ ರೀತಿ ವಿನಯದ ಸಂಕೇತವೆಂದು ಹಲವರು ಮಾತನಾಡಿಕೊಂಡರು.

ಇದಕ್ಕೂ ಮೊದಲು ಅವರ ಸಂಪುಟದ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದರು. ಗಡಿ ಬೇಲಿ ನಿರ್ಮಾಣಕ್ಕೆ ಅನುಮೋದನೆ ಹಾಗೂ ಆರೋಗ್ಯ ಯೋಜನೆ ಜಾರಿಗೆ ಮೊದಲ ಹಂತದ ಕ್ರಮಗಳನ್ನು ಸರ್ಕಾರ ಕೈಗೊಂಡದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Tamil Nadu Assembly floor test: ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್, ನಿರೀಕ್ಷೆಗೂ ಮೀರಿ 144 ಶಾಸಕರ ಬೆಂಬಲ, AIADMK ಛಿದ್ರ!

Tamil Nadu Assembly: ವಿಜಯ್ ವಿಶ್ವಾಸಮತ ಯಾಚನೆ, ಕಾಂಗ್ರೆಸ್, ಸಿಪಿಎಂ, ವಿಸಿಕೆ ಬೆಂಬಲ ಘೋಷಣೆ!

ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳದಂತೆ TVK ಶಾಸಕನಿಗೆ ಹೈಕೋರ್ಟ್ ತಡೆ! 'ಅಮಾನವೀಯ ನಡೆ' ಎಂದ ಸುಪ್ರೀಂಕೋರ್ಟ್

ಮಿತವ್ಯಯಕ್ಕೆ ಪ್ರಧಾನಿ ಮೋದಿ ಹೆಜ್ಜೆ: ಎಸ್‌ಪಿಜಿ ಭದ್ರತಾ ಪಡೆ ವಾಹನಗಳ ಸಂಖ್ಯೆ ಶೇ.50ರಷ್ಟು ಕಡಿತ,ಬಿಜೆಪಿ ಸಿಎಂಗಳಿಗೂ ಸೂಚನೆ, EV ಗೆ ಆದ್ಯತೆ

ಉದಯನಿಧಿಯ 'ಸನಾತನ ವಿರೋಧಿ' ಹೇಳಿಕೆ: ವಿಧಾನಸಭೆ ಕಡತಗಳಿಂದ ತೆಗೆದುಹಾಕಲು VHP ಒತ್ತಾಯ!

SCROLL FOR NEXT