ಹೊಂಚು ಹಾಕಿ ಉಗ್ರರ ದಾಳಿ 
ದೇಶ

ಮಣಿಪುರ: ಹೊಂಚು ಹಾಕಿ ಉಗ್ರರ ದಾಳಿ; ಕುಕಿ ಚರ್ಚ್‌ನ ಮೂವರು ನಾಯಕರು ಬಲಿ, ನಾಲ್ವರಿಗೆ ಗಾಯ

ದಾಳಿ ನಡೆದಾಗ ಥಡೌ ಬ್ಯಾಪ್ಟಿಸ್ಟ್ ಅಸೋಸಿಯೇಷನ್(ಟಿಬಿಎ) ಮತ್ತು ಯುನೈಟೆಡ್ ಬ್ಯಾಪ್ಟಿಸ್ಟ್ ಕೌನ್ಸಿಲ್‌ಗೆ ಸೇರಿದ ನಿಯೋಗ, ಚುರಚಂದ್‌ಪುರದಿಂದ ಕಾಂಗ್‌ಪೋಕ್ಪಿಗೆ ಅಂತರ-ಸಂಘಟನೆಯ ಚರ್ಚ್ ಸಭೆಗೆ ತೆರಳುತ್ತಿದ್ದರು.

ಗುವಾಹಟಿ: ಮಣಿಪುರದಲ್ಲಿ ಬುಧವಾರ ಬೆಳಗ್ಗೆ ಚರ್ಚ್ ಅಧಿಕಾರಿಗಳ ನಿಯೋಗದ ಮೇಲೆ ಉಗ್ರರು ಹೊಂಚು ಹಾಕಿ ದಾಳಿ ನಡೆಸಿದ್ದು, ದಾಳಿಯಲ್ಲಿ ಮೂವರು ಕುಕಿ ಚರ್ಚ್ ನಾಯಕರು ಮೃತಪಟ್ಟಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿ ನಡೆದಾಗ ಥಡೌ ಬ್ಯಾಪ್ಟಿಸ್ಟ್ ಅಸೋಸಿಯೇಷನ್(ಟಿಬಿಎ) ಮತ್ತು ಯುನೈಟೆಡ್ ಬ್ಯಾಪ್ಟಿಸ್ಟ್ ಕೌನ್ಸಿಲ್‌ಗೆ ಸೇರಿದ ನಿಯೋಗ, ಚುರಚಂದ್‌ಪುರದಿಂದ ಕಾಂಗ್‌ಪೋಕ್ಪಿಗೆ ಅಂತರ-ಸಂಘಟನೆಯ ಚರ್ಚ್ ಸಭೆಗೆ ತೆರಳುತ್ತಿದ್ದರು.

ಮೃತರನ್ನು ಟಿಬಿಎ ಅಧ್ಯಕ್ಷ ರೆವ್ ವಿ ಸಿಟ್ಲ್‌ಹೌ, ರೆವ್ ವಿ ಕೈಗೌಲುನ್ ಮತ್ತು ಪಾದ್ರಿ ಪಾಗೊಲೆನ್ ಎಂದು ಗುರುತಿಸಲಾಗಿದೆ. ರೆವ್ ಸಿಟ್ಲ್‌ಹೌ ತಂಡವನ್ನು ಮುನ್ನಡೆಸುತ್ತಿದ್ದರು, ಇದರಲ್ಲಿ ರೆವ್ ಎಸ್‌ಎಂ ಹಾಪು, ರೆವ್ ಹೆಕೈ ಸಿಮ್ಟೆ, ರೆವ್ ಪಾವೊಥಾಂಗ್ ಮತ್ತು ಚಾಲಕ ಗೌಮಾಂಗ್ ಕೂಡ ಇದ್ದರು. ಘಟನೆಯಲ್ಲಿ ಇತರ ನಾಲ್ವರು ಗಾಯಗೊಂಡಿದ್ದಾರೆ.

ಉಗ್ರರ ದಾಳಿಯ ನಂತರ, ಪ್ರತಿಭಟನೆಯ ಭಾಗವಾಗಿ ಥಡೌ ಸಂಘಟನೆಗಳು ಕಾಂಗ್‌ಪೋಕ್ಪಿ ಜಿಲ್ಲೆಯ ಸದರ್ ಹಿಲ್ಸ್‌ನಲ್ಲಿ "ಸಂಪೂರ್ಣ ಬಂದ್" ಘೋಷಿಸಿವೆ.

ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್(ಕೊಹೂರ್), "ಉಗ್ರರ" ಹೊಂಚುದಾಳಿಯನ್ನು ಖಂಡಿಸಿದೆ. ಅಲ್ಲದೆ ಈ ದಾಳಿಯನ್ನು ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲಿಮ್(ಎನ್‌ಎಸ್‌ಸಿಎನ್-ಐಎಂ) ನ ಇಸಾಕ್-ಮುಯಿವಾ ಬಣವು ಜೆಲಿಯಾಂಗ್‌ರಾಂಗ್ ಯುನೈಟೆಡ್ ಫ್ರಂಟ್‌ನ ಜೊತೆಗೂಡಿ ನಡೆಸಿದೆ ಎಂದು ಆರೋಪಿಸಿದೆ.

"ಇದು ಪೂರ್ವಯೋಜಿತ ಭಯೋತ್ಪಾದನಾ ಕೃತ್ಯವಾಗಿದೆ.."ಎಂದು ಕೊಹೂರ್ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: B ಖಾತಾದಿಂದ A ಖಾತಾ ಪರಿವರ್ತನೆಗೆ ಗೈಡ್‌ಲೈನ್ಸ್‌ ವ್ಯಾಲ್ಯೂ ಶೇ. 2ಕ್ಕೆ ಇಳಿಕೆ!

Video: ಕೇರಳದಲ್ಲಿ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್‌ ವಾರ್; ನೀವು ಮತ್ತೆ ಇಲ್ಲಿಂದ ಗೆಲ್ಲುವುದಿಲ್ಲ ಎಂದು ಆಕ್ರೋಶ!

ಈ 6 ಮಾರ್ಗಗಳಲ್ಲಿ ಅಂತರರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಿದ ಏರ್ ಇಂಡಿಯಾ; ಕಾರಣ ಏನು ಗೊತ್ತಾ?

ಸ್ಪೀಕರ್ ಯು.ಟಿ. ಖಾದರ್ ಮೇಲೆ ಹಲ್ಲೆಗೆ ಯತ್ನ: 11 ಜನರ ವಿರುದ್ಧ ಪ್ರಕರಣ ದಾಖಲು

ತೀವ್ರ ಟೀಕೆ: ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಒಎಸ್‌ಡಿ ನೇಮಕಾತಿ ಹಿಂಪಡೆದ ತಮಿಳು ನಾಡು CM ಜೋಸೆಫ್ ವಿಜಯ್

SCROLL FOR NEXT