ಸುವೇಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ 
ದೇಶ

ಮಮತಾ ಭದ್ರಕೋಟೆ ಭವಾನಿಪುರ ಉಳಿಸಿಕೊಂಡ CM ಸುವೇಂದು ಅಧಿಕಾರಿ; ನಂದಿಗ್ರಾಮಕ್ಕೆ ರಾಜೀನಾಮೆ

ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರು ಭಬಾನಿಪುರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಹಾಗೂ ತಮ್ಮ ಸ್ವಕ್ಷೇತ್ರ ನಂದಿಗ್ರಾಮದಲ್ಲಿ ಟಿಎಂಸಿ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು.

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯಾಗಿದ್ದ ಭಬಾನಿಪುರ ಕ್ಷೇತ್ರವನ್ನು ಉಳಿಸಿಕೊಳ್ಳುವುದಾಗಿ ಬುಧವಾರ ಘೋಷಿಸಿದ್ದು, ನಂದಿಗ್ರಾಮಕ್ಕೆ ರಾಜೀನಾಮೆ ನೀಡಿದ್ದಾರೆ.

ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರು ಭಬಾನಿಪುರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಹಾಗೂ ತಮ್ಮ ಸ್ವಕ್ಷೇತ್ರ ನಂದಿಗ್ರಾಮದಲ್ಲಿ ಟಿಎಂಸಿ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು.

ಎರಡೂ ಕಡೆ ಗೆಲುವು ಸಾಧಿಸಿರುವ ಸುವೇಂದು ಅಧಿಕಾರಿ ಅವರು ಈಗ ಒಂದು ಕಡೆ ರಾಜೀನಾಮೆ ನೀಡಿದ್ದು, ಭವಾನಿಪುರವನ್ನು ಉಳಿಸಿಕೊಂಡಿದ್ದಾರೆ.

ಸುವೇಂದು ಅಧಿಕಾರಿ ಅವರು ಇಂದು ವಿಧಾನಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ವಿಧಾನಸಭೆಯ ಮೆಟ್ಟಿಲುಗಳಿಗೆ ದೀರ್ಘ ದಂಡ ನಮಸ್ಕಾರ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.

ನಂದಿಗ್ರಾಮ ಮತ್ತು ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯಾಗಿದ್ದ ಭವಾನಿಪುರ ಕ್ಷೇತ್ರಗಳಲ್ಲೂ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ನಾಯಕ ಸುಬೇಂದು ಅಧಿಕಾರಿ, “ಪ್ರಜಾಪ್ರಭುತ್ವದ ದೇವಾಲಯ”ವೆಂದೇ ಕರೆಯಲ್ಪಡುವ ವಿಧಾನಸಭೆಗೆ ಗೌರವ ಸೂಚಿಸಿದ ಕ್ರಮಕ್ಕೆ ಪ್ರಶಂಸೆ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳದಲ್ಲಿ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್‌ ವಾರ್; ನೀವು ಮತ್ತೆ ಇಲ್ಲಿಂದ ಗೆಲ್ಲುವುದಿಲ್ಲ ಎಂದು ಆಕ್ರೋಶ!

ತೀವ್ರ ಟೀಕೆ: ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಒಎಸ್‌ಡಿ ನೇಮಕಾತಿ ಹಿಂಪಡೆದ ತಮಿಳು ನಾಡು CM ಜೋಸೆಫ್ ವಿಜಯ್

Tamil Nadu Assembly floor test: ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್, ನಿರೀಕ್ಷೆಗೂ ಮೀರಿ 144 ಶಾಸಕರ ಬೆಂಬಲ, AIADMK ಛಿದ್ರ!

ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳದಂತೆ TVK ಶಾಸಕನಿಗೆ ಹೈಕೋರ್ಟ್ ತಡೆ! 'ಅಮಾನವೀಯ ನಡೆ' ಎಂದ ಸುಪ್ರೀಂಕೋರ್ಟ್

ಉದಯನಿಧಿಯ 'ಸನಾತನ ವಿರೋಧಿ' ಹೇಳಿಕೆ: ವಿಧಾನಸಭೆ ಕಡತಗಳಿಂದ ತೆಗೆದುಹಾಕಲು VHP ಒತ್ತಾಯ!

SCROLL FOR NEXT