ಮಮತಾ ಬ್ಯಾನರ್ಜಿ 
ದೇಶ

ಕೋಟ್‌ ಧರಿಸಿ ಕೋರ್ಟ್‌ಗೆ ಹಾಜರಾದ ಮಮತಾಗೆ ಸಂಕಷ್ಟ?: ವಕೀಲ ವೃತ್ತಿಯ ವಿವರ ಕೇಳಿದ ಬಾರ್ ಕೌನ್ಸಿಲ್

ಚುನಾವಣಾ ನಂತರದ ಹಿಂಸಾಚಾರ ಮತ್ತು ಪಕ್ಷದ ಕಚೇರಿಗಳ ಮೇಲಿನ ದಾಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ವಾದ ಮಂಡಿಸಲು ಮಮತಾ ಬ್ಯಾನರ್ಜಿ ಅವರು ಇಂದು ಕಲ್ಕತ್ತಾ ಹೈಕೋರ್ಟ್ ಗೆ ಕರಿ ಕೋಟ್ ಧರಿಸಿ ಆಗಮಿಸಿ ಗಮನ ಸೆಳೆದಿದ್ದರು.

ನವದೆಹಲಿ: ಲಾಯರ್‌ ಕೋಟ್‌ ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಹಾಜರಾದ ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದ್ದು, ಟಿಎಂಸಿ ನಾಯಕಿ ವಕೀಲೆಯಾಗಿ ನೋಂದಾಸಿಕೊಂಡ ದಾಖಲಾತಿ ಮತ್ತು ವೃತ್ತಿಪರ ಅಭ್ಯಾಸದ ಬಗ್ಗೆ 48 ಗಂಟೆಗಳ ಒಳಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ(ಬಿಸಿಐ) ಗುರುವಾರ ಪಶ್ಚಿಮ ಬಂಗಾಳ ಬಾರ್ ಕೌನ್ಸಿಲ್‌ಗೆ ಸೂಚಿಸಿದೆ.

ಚುನಾವಣಾ ನಂತರದ ಹಿಂಸಾಚಾರ ಮತ್ತು ಪಕ್ಷದ ಕಚೇರಿಗಳ ಮೇಲಿನ ದಾಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ವಾದ ಮಂಡಿಸಲು ಮಮತಾ ಬ್ಯಾನರ್ಜಿ ಅವರು ಇಂದು ಕಲ್ಕತ್ತಾ ಹೈಕೋರ್ಟ್ ಗೆ ಕರಿ ಕೋಟ್ ಧರಿಸಿ ಆಗಮಿಸಿ ಗಮನ ಸೆಳೆದಿದ್ದರು.

2011 ರಿಂದ 2026 ರವರೆಗೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮತ್ತು ನಂತರ ಮಮತಾ ಅವರು ವಕೀಲರಾಗಿ ನೋಂದಾಸಿಕೊಂಡಿದ್ದಕ್ಕೆ ಸಂಬಂಧಿಸಿದ ಸಂಪೂರ್ಣ ದಾಖಲೆಗಳು, ಯಾವುದಾದರೂ ಇದ್ದರೆ ಮತ್ತು ಅವರ ಅಭ್ಯಾಸದ ಸ್ಥಿತಿಗತಿಗೆ ಸಂಬಂಧಿಸಿದ ಸಂಪೂರ್ಣ ದಾಖಲೆಗಳನ್ನು ಎರಡು ದಿನಗಳಲ್ಲಿ ಸಲ್ಲಿಸುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ(ಬಿಸಿಐ) ಪಶ್ಚಿಮ ಬಂಗಾಳ ಬಾರ್ ಕೌನ್ಸಿಲ್‌ನ ಕಾರ್ಯದರ್ಶಿಗೆ ಪತ್ರ ಬರೆದು ಸೂಚಿಸಿದೆ.

ಬಿಸಿಐ ಪ್ರಧಾನ ಕಾರ್ಯದರ್ಶಿ ಶ್ರೀರಾಮಂತೋ ಸೇನ್ ಬರೆದ ಪತ್ರದಲ್ಲಿ, ಮಮತಾ ಅವರು ಕೋಟ್ ಹಾಗೂ ಬಿಳಿ ವಕೀಲರ ಬ್ಯಾಂಡ್‌ ಸೇರಿದಂತೆ ಕಾನೂನು ಉಡುಪಿನಲ್ಲಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ ಎಂದು ಹೇಳುವ "ವಿವಿಧ ಮಾಧ್ಯಮ ವರದಿಗಳನ್ನು" ಕೌನ್ಸಿಲ್ ಗಮನಿಸಿದೆ ಎಂದು ಹೇಳಿದ್ದಾರೆ.

ಪ್ರಚಲಿತ ಪದ್ಧತಿಯ ಪ್ರಕಾರ, ಸಾಂವಿಧಾನಿಕ ಹುದ್ದೆಯನ್ನು ಹೊಂದಿದ್ದ ಅಥವಾ ಲಾಭದಾಯಕವಾದ ಉದ್ಯೋಗದಲ್ಲಿದ್ದ ವ್ಯಕ್ತಿಯು ಸೇವೆಯ ಸಮಯದಲ್ಲಿ ಬಾರ್ ಪರವಾನಗಿಯನ್ನು ಅಮಾನತುಗೊಳಿಸಬೇಕು ಮತ್ತು ಅವರು ಮತ್ತೆ ವಕೀಲರಾಗಿ ವೃತ್ತಿ ಆರಂಭಿಸಲು ಅದನ್ನು ಪುನರುಜ್ಜೀವನಗೊಳಿಸಬೇಕು.

2026ರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ, ಪಕ್ಷದ ಕಚೇರಿಗಳ ಮೇಲೆ ದಾಳಿ ಮತ್ತು ನಮ್ಮ ಕಾರ್ಯಕರ್ತರ ಮೇಲೆ ದಾಳಿ ನಡೆಸಲಾಗಿದೆ ಎಂದು ಆರೋಪಿಸಿ ಟಿಎಂಸಿ ಪರವಾಗಿ ವಕೀಲ ಶಿರ್ಷಣ್ಯ ಬಂಡೋಪಾಧ್ಯಾಯ ಅವರು ಸಲ್ಲಿಸಿದ ಪ್ರಕರಣದಲ್ಲಿ ವಾದಿಸಲು ಮಮತಾ ಬ್ಯಾನರ್ಜಿ ಕಲ್ಕತ್ತಾ ಹೈಕೋರ್ಟ್ ಮುಂದೆ ಹಾಜರಾಗಿದ್ದರು.

ಚುನಾವಣೋತ್ತರ ಹಿಂಸಾಚಾರದ ಈ ಅರ್ಜಿಯನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹೆಚ್.ಸಿ ಸುಜಯ್ ಪಾಲ್ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ. ಪ್ರಕರಣದ ವಿಚಾರಣೆಯ ವೇಳೆ ಹಲವಾರು ಅಂಶಗಳ ಕುರಿತು ಮಮತಾ ಬ್ಯಾನರ್ಜಿ ಪ್ರಶ್ನೆಗಳನ್ನು ಎತ್ತುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಹಗರಣ: ಕುಮಾರಸ್ವಾಮಿ ವಿರುದ್ದವೇ ಪ್ರಾಸಿಕ್ಯೂಷನ್ ಅಸ್ತ್ರ? ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಸಾಧ್ಯತೆ

Asian Games 2026: ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

ಹಾಸನ: KSRTC ಬಸ್, ATM ವಾಹನದ ನಡುವೆ ಭೀಕರ ಅಪಘಾತ; ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ

NALSAR row: ಕಾನೂನು ವಿದ್ಯಾರ್ಥಿಗಳ ನಡವಳಿಕೆ ನಿಯಂತ್ರಿಸುವ ಅಧಿಕಾರ ಬಾರ್ ಕೌನ್ಸಿಲ್‌ಗೆ ಇಲ್ಲ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಗೆ ಭಾರಿ ಹಿನ್ನಡೆ: ಚುನಾವಣಾ ಅಕ್ರಮ ಆರೋಪ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್!